<p><strong>ಧಾರವಾಡ:</strong> ಇಲ್ಲಿನ ಪುರಾಣ ಪ್ರಸಿದ್ಧ ನುಗ್ಗಿಕೆರಿ ಆಂಜನೇಯದೇವಸ್ಥಾನದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತುಅಭಿಷೇಕ್ ಅವರ ಹೆಸರಲ್ಲಿತುಲಾಭಾರ ಸೇವೆ ಶನಿವಾರ ನೆರವೇರಿತು.</p>.<p>ಲೋಕಸಭಾ ಚುನಾವಣೆ ಮತ್ತು ಅಮರ್ ಚಿತ್ರದ ಗೆಲುವಿಗಾಗಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ಪಾಲ್ಗೊಂಡರು.</p>.<p>ಅಭಿಷೇಕ್ ಹೆಸರಲ್ಲಿ 100ಕೆಜಿ ಸಕ್ಕರೆ, 15 ಕೆಜಿ ತುಪ್ಪ ಮತ್ತು ಸುಮಲತಾ ಹೆಸರಲ್ಲಿ 75ಕೆಜಿ ಸಕ್ಕರೆ, 15 ಕೆಜಿ ತುಪ್ಪದ ತುಲಾಭಾರ ಸೇವೆ ಸಲ್ಲಿಸಲಾಯಿತು.</p>.<p>ಈ ಸಂದರ್ಭದಲ್ಲಿ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ವೆಂಕಟೇಶ್ ಮತ್ತು ನಿರ್ದೇಶಕಯೋಗರಾಜ್ ಭಟ್ ಮತ್ತು ನಾಗಶೇಖರ್ ಇದ್ದರು.</p>.<p>ಅಂಬರೀಷ್ ಅಭಿಮಾನಿ ಉದ್ಯಮಿ ನಾರಾಯಣ ಕಲಾಲ್ ಅವರು ತುಲಾಭಾರ ಆಯೋಜಿಸಿದ್ದರು. ದೇವಸ್ಥಾನದ ಪಾರುಪತ್ತೆದಾರ ಪಿ.ಆರ್.ದೇಸಾಯಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸುಮಲತಾ, ಏಳು ವರ್ಷಗಳ ಹಿಂದೆ ಹುಬ್ಬಳ್ಳಿ ಧಾರವಾಡಕ್ಕೆ ಬಂದಿದ್ದೆ. ಈಗ ಮತ್ತೆ ಬರುವ ಅವಕಾಶ ಸಿಕ್ಕಿದೆ ಎಂದರು.</p>.<p>ನಂತರ ಪದ್ಮ ಶ್ರೀನಿವಾಸ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಮರ್ ಚಿತ್ರವನ್ನು ಸ್ವಲ್ಪ ಹೊತ್ತು ವೀಕ್ಷಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಇಲ್ಲಿನ ಪುರಾಣ ಪ್ರಸಿದ್ಧ ನುಗ್ಗಿಕೆರಿ ಆಂಜನೇಯದೇವಸ್ಥಾನದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತುಅಭಿಷೇಕ್ ಅವರ ಹೆಸರಲ್ಲಿತುಲಾಭಾರ ಸೇವೆ ಶನಿವಾರ ನೆರವೇರಿತು.</p>.<p>ಲೋಕಸಭಾ ಚುನಾವಣೆ ಮತ್ತು ಅಮರ್ ಚಿತ್ರದ ಗೆಲುವಿಗಾಗಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ತುಲಾಭಾರ ಸೇವೆಯಲ್ಲಿ ಪಾಲ್ಗೊಂಡರು.</p>.<p>ಅಭಿಷೇಕ್ ಹೆಸರಲ್ಲಿ 100ಕೆಜಿ ಸಕ್ಕರೆ, 15 ಕೆಜಿ ತುಪ್ಪ ಮತ್ತು ಸುಮಲತಾ ಹೆಸರಲ್ಲಿ 75ಕೆಜಿ ಸಕ್ಕರೆ, 15 ಕೆಜಿ ತುಪ್ಪದ ತುಲಾಭಾರ ಸೇವೆ ಸಲ್ಲಿಸಲಾಯಿತು.</p>.<p>ಈ ಸಂದರ್ಭದಲ್ಲಿ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ವೆಂಕಟೇಶ್ ಮತ್ತು ನಿರ್ದೇಶಕಯೋಗರಾಜ್ ಭಟ್ ಮತ್ತು ನಾಗಶೇಖರ್ ಇದ್ದರು.</p>.<p>ಅಂಬರೀಷ್ ಅಭಿಮಾನಿ ಉದ್ಯಮಿ ನಾರಾಯಣ ಕಲಾಲ್ ಅವರು ತುಲಾಭಾರ ಆಯೋಜಿಸಿದ್ದರು. ದೇವಸ್ಥಾನದ ಪಾರುಪತ್ತೆದಾರ ಪಿ.ಆರ್.ದೇಸಾಯಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸುಮಲತಾ, ಏಳು ವರ್ಷಗಳ ಹಿಂದೆ ಹುಬ್ಬಳ್ಳಿ ಧಾರವಾಡಕ್ಕೆ ಬಂದಿದ್ದೆ. ಈಗ ಮತ್ತೆ ಬರುವ ಅವಕಾಶ ಸಿಕ್ಕಿದೆ ಎಂದರು.</p>.<p>ನಂತರ ಪದ್ಮ ಶ್ರೀನಿವಾಸ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಮರ್ ಚಿತ್ರವನ್ನು ಸ್ವಲ್ಪ ಹೊತ್ತು ವೀಕ್ಷಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>