ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಂಡಾಯವಾಗಿ ಸ್ಪರ್ಧಿಸಿರುವವರ ಮನವೊಲಿಸುವ ಕಾರ್ಯ ನಡೆದಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಹೇಳಿದರು.
‘ಈಗಾಗಲೇ ನಾನು ರಘುಪತಿ ಭಟ್ ಅವರ ಜತೆ ಮಾತನಾಡಿದ್ದೇನೆ. ಅವರು ಪಕ್ಷದ ಜತೆಗೆ ಇರುತ್ತಾರೆ, ಪಕ್ಷದ ವಿರುದ್ಧ ಹೋಗುವುದಿಲ್ಲ ಎಂದು ಭಾವಿಸುತ್ತೇನೆ. ಟಿಕೆಟ್ಗೆ ಪ್ರಯತ್ನಿಸಿ ಸಿಗದಿದ್ದಾಗ ಅಸಮಾಧಾನಗೊಳ್ಳುವುದು ಸಹಜ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.