<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಕೇವಲ 2 ರಿಂದ 3 ಗಂಟೆಗಳಷ್ಟು ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ಕುಮಾರ್ ದೂರಿದ್ದಾರೆ.</p>.<p>ಅಲ್ಲದೇ, ಲೋಡ್ ಶೆಡ್ಡಿಂಗ್ ಮೂಲಕ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡಲಾಗಿದೆ, ಜನಸಾಮಾನ್ಯರು ಪರಿತಪಿಸುವಂತಾಗಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಕೃಷಿ ಪಂಪ್ಸೆಟ್ಗಳಿಗೆ ಕಡಿಮೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ಸಬ್ಸಿಡಿ ಹಣವನ್ನು ಉಳಿಸಿ, ಅದನ್ನು ಗೃಹ ಜ್ಯೋತಿ ಯೋಜನೆಗೆ ಬಳಸುವ ಹುನ್ನಾರ ನಡೆದಿದೆ. ಈ ಸರ್ಕಾರ ‘ಕತ್ತಲೆ ಕರ್ನಾಟಕ ಭಾಗ್ಯ’ ನೀಡುವುದು ಖಚಿತ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಆಗುತ್ತಿಲ್ಲ. ಇವೆರಡರಲ್ಲೂ ಸರ್ಕಾರ ವಿಫಲವಾಗಿದೆ. ಕತ್ತಲೆಯ ದಿನಗಳು ಶುರುವಾಗಿದ್ದು, ಇದು ಮುಂದೆ ಎಲ್ಲಿ ಹೋಗಿ ನಿಲ್ಲುತ್ತದೆಯೋ ಗೊತ್ತಿಲ್ಲ ಎಂದರು.</p>.<p>ವಿದ್ಯುತ್ ಕೊರತೆ ಇರುವ ಕಾರಣದಿಂದಲೇ ಆಗಸ್ಟ್ನಲ್ಲಿ 593 ದಶಲಕ್ಷ ಯೂನಿಟ್ ವಿದ್ಯುತ್ ಖರೀದಿಸಿದೆ. ಪೂರ್ವ ಸಿದ್ಧತೆ ಇಲ್ಲದ ಕಾರಣ ಹೆಚ್ಚು ದರಕ್ಕೆ ವಿದ್ಯುತ್ ಖರೀದಿಸಲು ಮುಂದಾಗಿದೆ. ಪ್ರತಿ ಯೂನಿಟ್ಗೆ ₹8 ರಿಂದ ₹10.50 ರಂತೆ ಖರೀದಿಸಬೇಕಾಗಿದೆ. ಸರಿಯಾಗಿ ಸಿದ್ಧತೆ ಮಾಡಿಕೊಂಡಿದ್ದರೆ ₹3ರಿಂದ ₹5 ರ ದರದಲ್ಲಿ ಖರೀದಿಸಬಹುದಾಗಿತ್ತು ಎಂದು ಸುನಿಲ್ಕುಮಾರ್ ಹೇಳಿದರು.</p>.<p>ಕೃಷಿ, ಗೃಹ ಬಳಕೆ ಮಾತ್ರವಲ್ಲದೇ, ಕೈಗಾರಿಕೆಗಳಿಗೂ ವಿದ್ಯುತ್ ಕಡಿತದ ಬಿಸಿ ತಟ್ಟಿದೆ. ಇದರಿಂದ ಕೈಗಾರಿಕಾ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಉದ್ಯಮಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಸಣ್ಣ ಕೈಗಾರಿಕೆಗಳನ್ನು ನಡೆಸಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಕೇವಲ 2 ರಿಂದ 3 ಗಂಟೆಗಳಷ್ಟು ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ಕುಮಾರ್ ದೂರಿದ್ದಾರೆ.</p>.<p>ಅಲ್ಲದೇ, ಲೋಡ್ ಶೆಡ್ಡಿಂಗ್ ಮೂಲಕ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡಲಾಗಿದೆ, ಜನಸಾಮಾನ್ಯರು ಪರಿತಪಿಸುವಂತಾಗಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಕೃಷಿ ಪಂಪ್ಸೆಟ್ಗಳಿಗೆ ಕಡಿಮೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ಸಬ್ಸಿಡಿ ಹಣವನ್ನು ಉಳಿಸಿ, ಅದನ್ನು ಗೃಹ ಜ್ಯೋತಿ ಯೋಜನೆಗೆ ಬಳಸುವ ಹುನ್ನಾರ ನಡೆದಿದೆ. ಈ ಸರ್ಕಾರ ‘ಕತ್ತಲೆ ಕರ್ನಾಟಕ ಭಾಗ್ಯ’ ನೀಡುವುದು ಖಚಿತ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಆಗುತ್ತಿಲ್ಲ. ಇವೆರಡರಲ್ಲೂ ಸರ್ಕಾರ ವಿಫಲವಾಗಿದೆ. ಕತ್ತಲೆಯ ದಿನಗಳು ಶುರುವಾಗಿದ್ದು, ಇದು ಮುಂದೆ ಎಲ್ಲಿ ಹೋಗಿ ನಿಲ್ಲುತ್ತದೆಯೋ ಗೊತ್ತಿಲ್ಲ ಎಂದರು.</p>.<p>ವಿದ್ಯುತ್ ಕೊರತೆ ಇರುವ ಕಾರಣದಿಂದಲೇ ಆಗಸ್ಟ್ನಲ್ಲಿ 593 ದಶಲಕ್ಷ ಯೂನಿಟ್ ವಿದ್ಯುತ್ ಖರೀದಿಸಿದೆ. ಪೂರ್ವ ಸಿದ್ಧತೆ ಇಲ್ಲದ ಕಾರಣ ಹೆಚ್ಚು ದರಕ್ಕೆ ವಿದ್ಯುತ್ ಖರೀದಿಸಲು ಮುಂದಾಗಿದೆ. ಪ್ರತಿ ಯೂನಿಟ್ಗೆ ₹8 ರಿಂದ ₹10.50 ರಂತೆ ಖರೀದಿಸಬೇಕಾಗಿದೆ. ಸರಿಯಾಗಿ ಸಿದ್ಧತೆ ಮಾಡಿಕೊಂಡಿದ್ದರೆ ₹3ರಿಂದ ₹5 ರ ದರದಲ್ಲಿ ಖರೀದಿಸಬಹುದಾಗಿತ್ತು ಎಂದು ಸುನಿಲ್ಕುಮಾರ್ ಹೇಳಿದರು.</p>.<p>ಕೃಷಿ, ಗೃಹ ಬಳಕೆ ಮಾತ್ರವಲ್ಲದೇ, ಕೈಗಾರಿಕೆಗಳಿಗೂ ವಿದ್ಯುತ್ ಕಡಿತದ ಬಿಸಿ ತಟ್ಟಿದೆ. ಇದರಿಂದ ಕೈಗಾರಿಕಾ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಉದ್ಯಮಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಸಣ್ಣ ಕೈಗಾರಿಕೆಗಳನ್ನು ನಡೆಸಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>