<p><strong>ಬೆಂಗಳೂರು</strong>: ‘ರಾಜ್ಯದ ಎಲ್ಲ ಜಿಲ್ಲೆ ಹಾಗೂ ಗ್ರಾಮಗಳಲ್ಲಿ ನಾಗರಿಕರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಪ್ರಮಾಣೀಕೃತ ಕಾರ್ಯವಿಧಾನವೊಂದನ್ನು (ಎಸ್ಒಪಿ) ಸಿದ್ಧಪಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ವಕೀಲ ಎಲ್.ರಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದ್ದು ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.</p>.<p>‘ನೀರಿನ ಮೂಲಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಹೋದರೆ ನೀರು ಕಲುಷಿತವಾಗುತ್ತದೆ ಎಂಬ ಅರ್ಜಿದಾರರ ವಾದ ಸಮಂಜಸವಾಗಿದೆ’ ಎಂದು ಸಹಮತ ವ್ಯಕ್ತಪಡಿಸಿರುವ ನ್ಯಾಯಪೀಠ, ‘ಮಾನವರ ಬಳಕೆಗೆ ಯೋಗ್ಯವಾದ ಕುಡಿಯುವ ನೀರನ್ನು ಪೂರೈಸುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ’ ಎಂಬುದನ್ನು ಸ್ಪಷ್ಟಪಡಿಸಿದೆ.</p>.<p>‘ನೀರು ಸರಬರಾಜಿನ ಮೂಲಸೌಕರ್ಯ ವ್ಯವಸ್ಥೆಯಲ್ಲಿ; ಶುದ್ಧೀಕರಣ ಘಟಕಗಳು, ಭೂಗತ ಮತ್ತು ಓವರ್ ಹೆಡ್ ಟ್ಯಾಂಕ್ಗಳು, ಪೈಪ್ಲೈನ್ಗಳು, ಬೋರ್ವೆಲ್ಗಳು ಮತ್ತು ರಿವರ್ಸ್ ಆಸ್ಮೋಸಿಸ್ (ಆರ್ಒ) ಸ್ಥಾವರಗಳು ಒಳಗೊಂಡಿವೆ. ಈ ಎಲ್ಲಾ ಸೌಲಭ್ಯಗಳಿಗೆ ಸಕಾಲಿಕ ಮತ್ತು ವೈಜ್ಞಾನಿಕ ನಿರ್ವಹಣೆಯ ಅಗತ್ಯವಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಸೌಲಭ್ಯಗಳ ನಿರ್ವಹಣೆಗಾಗಿ ಎಸ್ಒಪಿ ಸಿದ್ಧಪಡಿಸಬೇಕು ಮತ್ತು ಈ ಆದೇಶ ಪ್ರಕಟಿಸಿದ ದಿನದಿಂದ ಎರಡು ತಿಂಗಳ ಒಳಗೆ ಎಸ್ಒಪಿಯನ್ನು, ಪರಿಶೀಲನೆಗಾಗಿ ಮತ್ತು ಆದೇಶ ಪಾಲನೆಯ ಮುಂದಿನ ಹೆಜ್ಜೆಯಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ತಾಕೀತು ಮಾಡಿದೆ.</p>.<p>‘ತುಮಕೂರು ಸೇರಿದಂತೆ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪದೇ ಪದೇ ಎದುರಾಗುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಮತ್ತು ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದ ಎಲ್ಲ ಜಿಲ್ಲೆ ಹಾಗೂ ಗ್ರಾಮಗಳಲ್ಲಿ ನಾಗರಿಕರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಪ್ರಮಾಣೀಕೃತ ಕಾರ್ಯವಿಧಾನವೊಂದನ್ನು (ಎಸ್ಒಪಿ) ಸಿದ್ಧಪಡಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ವಕೀಲ ಎಲ್.ರಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದ್ದು ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.</p>.<p>‘ನೀರಿನ ಮೂಲಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಹೋದರೆ ನೀರು ಕಲುಷಿತವಾಗುತ್ತದೆ ಎಂಬ ಅರ್ಜಿದಾರರ ವಾದ ಸಮಂಜಸವಾಗಿದೆ’ ಎಂದು ಸಹಮತ ವ್ಯಕ್ತಪಡಿಸಿರುವ ನ್ಯಾಯಪೀಠ, ‘ಮಾನವರ ಬಳಕೆಗೆ ಯೋಗ್ಯವಾದ ಕುಡಿಯುವ ನೀರನ್ನು ಪೂರೈಸುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ’ ಎಂಬುದನ್ನು ಸ್ಪಷ್ಟಪಡಿಸಿದೆ.</p>.<p>‘ನೀರು ಸರಬರಾಜಿನ ಮೂಲಸೌಕರ್ಯ ವ್ಯವಸ್ಥೆಯಲ್ಲಿ; ಶುದ್ಧೀಕರಣ ಘಟಕಗಳು, ಭೂಗತ ಮತ್ತು ಓವರ್ ಹೆಡ್ ಟ್ಯಾಂಕ್ಗಳು, ಪೈಪ್ಲೈನ್ಗಳು, ಬೋರ್ವೆಲ್ಗಳು ಮತ್ತು ರಿವರ್ಸ್ ಆಸ್ಮೋಸಿಸ್ (ಆರ್ಒ) ಸ್ಥಾವರಗಳು ಒಳಗೊಂಡಿವೆ. ಈ ಎಲ್ಲಾ ಸೌಲಭ್ಯಗಳಿಗೆ ಸಕಾಲಿಕ ಮತ್ತು ವೈಜ್ಞಾನಿಕ ನಿರ್ವಹಣೆಯ ಅಗತ್ಯವಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಸೌಲಭ್ಯಗಳ ನಿರ್ವಹಣೆಗಾಗಿ ಎಸ್ಒಪಿ ಸಿದ್ಧಪಡಿಸಬೇಕು ಮತ್ತು ಈ ಆದೇಶ ಪ್ರಕಟಿಸಿದ ದಿನದಿಂದ ಎರಡು ತಿಂಗಳ ಒಳಗೆ ಎಸ್ಒಪಿಯನ್ನು, ಪರಿಶೀಲನೆಗಾಗಿ ಮತ್ತು ಆದೇಶ ಪಾಲನೆಯ ಮುಂದಿನ ಹೆಜ್ಜೆಯಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ತಾಕೀತು ಮಾಡಿದೆ.</p>.<p>‘ತುಮಕೂರು ಸೇರಿದಂತೆ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪದೇ ಪದೇ ಎದುರಾಗುವ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಮತ್ತು ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>