<p><strong>ಬೆಂಗಳೂರು</strong>: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಸಾಮಾನ್ಯ ಸಾಧನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳನ್ನು ದೇಶದ ಜನರು ಮೆಚ್ಚಿಕೊಂಡಿರುವುದೇ ಈ ಸಾಧನೆಗೆ ಕಾರಣ ಎಂದು ಬಿಜೆಪಿ ರಾಜ್ಯ ಘಕಟದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.</p>.<p>ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಅಸ್ಸಾಂನಲ್ಲಿ ಸಿಎಎ ವಿರುದ್ಧ ಷಡ್ಯಂತ್ರವನ್ನು ಮೀರಿ ಬಿಜೆಪಿ ಮತ್ತೆ ಗೆಲುವು ಸಾಧಿಸಿದೆ. ಪುದುಚೆರಿಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮೊದಲ ಬಾರಿಗೆ ಅಧಿಕಾರಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಶಾಸಕರ ಸಂಖ್ಯೆ 3 ರಿಂದ 80ರ ಸಮೀಪಕ್ಕೆ ಬಂದಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಪಕ್ಷದ ಮತ ಗಳಿಕೆ ಹೆಚ್ಚಿದೆ. ನರೇಂದ್ರ ಮೋದಿ ಮತ್ತು ಬಿಜೆಪಿ ಜತೆ ದೇಶವಿದೆ ಎಂಬುದು ಮತ್ತೆ ಸಾಬೀತಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಕೆಲವು ವರ್ಷಗಳ ಹಿಂದೆ ಈ ರಾಜ್ಯಗಳಲ್ಲಿ ಬಿಜೆಪಿಯ ಅಸ್ತಿತ್ವವೇ ಇಲ್ಲ. ಮುಂದಿನ ದಿನಗಳಲ್ಲಿ ಈ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರುವ ವಿಶ್ವಾಸ ಮೂಡಿದೆ. ಚುನಾವಣೆ ನಡೆದಿರುವ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಅತಿ ಹಳೆಯ ಪಕ್ಷ ಇತಿಹಾಸದ ಪುಟ ಸೇರುವಂತೆ ದೇಶದ ಜನರು ತೀರ್ಪು ನೀಡಿದ್ದಾರೆ ಎಂದು ನಳಿನ್ ಪ್ರತಿಕ್ರಿಯಿಸಿದ್ದಾರೆ.</p>.<p><strong>ಫಲಿತಾಂಶದಿಂದ ನಿರಾಸೆಯಾಗಿಲ್ಲ: ಅಶ್ವತ್ಥನಾರಾಯಣ</strong></p>.<p><strong>ಬೆಂಗಳೂರು:</strong> ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಬಿಜೆಪಿಗೆ ನಿರಾಸೆಯಾಗಿಲ್ಲ. ಮುಂಬರುವ ದಿನಗಳಲ್ಲಿ ಬಿಜೆಪಿ ಅಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿಯ ಕೇರಳ ಚುನಾವಣಾ ಸಹ ಪ್ರಭಾರಿಯಾಗಿದ್ದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.</p>.<p>ಚುನಾವಣಾ ಫಲಿತಾಂಶದ ಕುರಿತು ಹೇಳಿಕೆ ನೀಡಿರುವ ಅವರು, ‘ಕೆಲವು ಕಾರಣಗಳಿಂದಾಗಿ ಪಿಣರಾಯಿ ವಿಜಯನ್ ಮತ್ತೆ ಅಧಿಕಾರಕ್ಕೆ ಬಂದಿದ್ದಾರೆ. ಅಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೊನೆಗಾಲದಲ್ಲಿದೆ. ಮುಂದಿನ ಚುನಾವಣೆ ವೇಳೆಗೆ ಬಿಜೆಪಿಯನ್ನು ಬಲಪಡಿಸಿ ಅಧಿಕಾರಕ್ಕೆ ತರಲಾಗುವುದು’ ಎಂದು ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ನ ಒಂದು ಸ್ಥಾನ ಹೆಚ್ಚುವರಿಯಾಗಿ ಬಿಜೆಪಿಗೆ ದೊರಕಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲಿಗೂ ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಕೈಗೊಂಡಿರುವ ಕ್ರಮಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.</p>.<p><strong>ಸಂಘಟಿತ ಪ್ರಯತ್ನಕ್ಕೆ ಗೆಲುವು: ಬೊಮ್ಮಾಯಿ</strong></p>.<p><strong>ಬೆಂಗಳೂರು: </strong>ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಎಲ್ಲರೂ ಸಂಘಟಿತರಾಗಿ ನಡೆಸಿದ ಪ್ರಯತ್ನದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>‘ನಾನು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವ ವಿ. ಸೋಮಣ್ಣ ಮತ್ತು ಬೀದರ್ ಸಂಸದ ಭಗವಂತ ಖೂಬಾ ಜವಾಬ್ದಾರಿ ಹಂಚಿಕೊಂಡು ಕೆಲಸ ಮಾಡಿದೆವು. ಬಸವಕಲ್ಯಾಣ ಕ್ಷೇತ್ರದ ಜನರು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಸಾಮಾನ್ಯ ಸಾಧನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳನ್ನು ದೇಶದ ಜನರು ಮೆಚ್ಚಿಕೊಂಡಿರುವುದೇ ಈ ಸಾಧನೆಗೆ ಕಾರಣ ಎಂದು ಬಿಜೆಪಿ ರಾಜ್ಯ ಘಕಟದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.</p>.<p>ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಅಸ್ಸಾಂನಲ್ಲಿ ಸಿಎಎ ವಿರುದ್ಧ ಷಡ್ಯಂತ್ರವನ್ನು ಮೀರಿ ಬಿಜೆಪಿ ಮತ್ತೆ ಗೆಲುವು ಸಾಧಿಸಿದೆ. ಪುದುಚೆರಿಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮೊದಲ ಬಾರಿಗೆ ಅಧಿಕಾರಕ್ಕೇರಿದೆ. ಪಶ್ಚಿಮ ಬಂಗಾಳದಲ್ಲಿ ಶಾಸಕರ ಸಂಖ್ಯೆ 3 ರಿಂದ 80ರ ಸಮೀಪಕ್ಕೆ ಬಂದಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಪಕ್ಷದ ಮತ ಗಳಿಕೆ ಹೆಚ್ಚಿದೆ. ನರೇಂದ್ರ ಮೋದಿ ಮತ್ತು ಬಿಜೆಪಿ ಜತೆ ದೇಶವಿದೆ ಎಂಬುದು ಮತ್ತೆ ಸಾಬೀತಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಕೆಲವು ವರ್ಷಗಳ ಹಿಂದೆ ಈ ರಾಜ್ಯಗಳಲ್ಲಿ ಬಿಜೆಪಿಯ ಅಸ್ತಿತ್ವವೇ ಇಲ್ಲ. ಮುಂದಿನ ದಿನಗಳಲ್ಲಿ ಈ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರುವ ವಿಶ್ವಾಸ ಮೂಡಿದೆ. ಚುನಾವಣೆ ನಡೆದಿರುವ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಅತಿ ಹಳೆಯ ಪಕ್ಷ ಇತಿಹಾಸದ ಪುಟ ಸೇರುವಂತೆ ದೇಶದ ಜನರು ತೀರ್ಪು ನೀಡಿದ್ದಾರೆ ಎಂದು ನಳಿನ್ ಪ್ರತಿಕ್ರಿಯಿಸಿದ್ದಾರೆ.</p>.<p><strong>ಫಲಿತಾಂಶದಿಂದ ನಿರಾಸೆಯಾಗಿಲ್ಲ: ಅಶ್ವತ್ಥನಾರಾಯಣ</strong></p>.<p><strong>ಬೆಂಗಳೂರು:</strong> ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಬಿಜೆಪಿಗೆ ನಿರಾಸೆಯಾಗಿಲ್ಲ. ಮುಂಬರುವ ದಿನಗಳಲ್ಲಿ ಬಿಜೆಪಿ ಅಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿಯ ಕೇರಳ ಚುನಾವಣಾ ಸಹ ಪ್ರಭಾರಿಯಾಗಿದ್ದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.</p>.<p>ಚುನಾವಣಾ ಫಲಿತಾಂಶದ ಕುರಿತು ಹೇಳಿಕೆ ನೀಡಿರುವ ಅವರು, ‘ಕೆಲವು ಕಾರಣಗಳಿಂದಾಗಿ ಪಿಣರಾಯಿ ವಿಜಯನ್ ಮತ್ತೆ ಅಧಿಕಾರಕ್ಕೆ ಬಂದಿದ್ದಾರೆ. ಅಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೊನೆಗಾಲದಲ್ಲಿದೆ. ಮುಂದಿನ ಚುನಾವಣೆ ವೇಳೆಗೆ ಬಿಜೆಪಿಯನ್ನು ಬಲಪಡಿಸಿ ಅಧಿಕಾರಕ್ಕೆ ತರಲಾಗುವುದು’ ಎಂದು ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ನ ಒಂದು ಸ್ಥಾನ ಹೆಚ್ಚುವರಿಯಾಗಿ ಬಿಜೆಪಿಗೆ ದೊರಕಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲಿಗೂ ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಕೈಗೊಂಡಿರುವ ಕ್ರಮಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.</p>.<p><strong>ಸಂಘಟಿತ ಪ್ರಯತ್ನಕ್ಕೆ ಗೆಲುವು: ಬೊಮ್ಮಾಯಿ</strong></p>.<p><strong>ಬೆಂಗಳೂರು: </strong>ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಎಲ್ಲರೂ ಸಂಘಟಿತರಾಗಿ ನಡೆಸಿದ ಪ್ರಯತ್ನದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>‘ನಾನು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವ ವಿ. ಸೋಮಣ್ಣ ಮತ್ತು ಬೀದರ್ ಸಂಸದ ಭಗವಂತ ಖೂಬಾ ಜವಾಬ್ದಾರಿ ಹಂಚಿಕೊಂಡು ಕೆಲಸ ಮಾಡಿದೆವು. ಬಸವಕಲ್ಯಾಣ ಕ್ಷೇತ್ರದ ಜನರು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>