<p><strong>ನವದೆಹಲಿ:</strong> ಮಹದಾಯಿ-ಕೋಟಿಗಾಂವ್ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆ ಅಥವಾ ಯೋಜನೆಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.<p>ಉತ್ತರ ಗೋವಾದಲ್ಲಿರುವ ಮಹದಾಯಿ ವನ್ಯಜೀವಿ ಧಾಮವು ಕಾಳಿ ಹುಲಿ ಮೀಸಲು ಪ್ರದೇಶ, ಭೀಮಘಡ ವನ್ಯಜೀವಿಧಾಮ ಮತ್ತು ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನ ಒಳಗೊಂಡಂತೆ ಭೌಗೋಳಿಕವಾಗಿ ಕರ್ನಾಟಕದ ಜೊತೆಗೆ ಬೆಸೆದುಕೊಂಡಿದೆ.</p>.<p>ವನ್ಯಜೀವಿಧಾಮದಲ್ಲಿ ವಾಣಿಜ್ಯ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನು ಆಕ್ಷೇಪಿಸಿ ಗೋವಾ ಫೌಂಡೇಷನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಈ ನಿರ್ದೇಶನ ನೀಡಿತು. </p>.<p>ಮಹದಾಯಿ ವನ್ಯಜೀವಿ ಅಭಯಾರಣ್ಯ ಮತ್ತು ಪಕ್ಕದ ಪ್ರದೇಶಗಳನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಆರು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿದೆ. ಬಳಿಕ ವಿಚಾರಣೆಯನ್ನು ಎಂಟು ವಾರ ಮುಂದೂಡಿದೆ. </p>.<p>ಮಹದಾಯಿ ವನ್ಯಜೀವಿಧಾಮ ಹಾಗೂ ಆಸುಪಾಸಿನ ಪ್ರದೇಶಗಳನ್ನು ‘ಹುಲಿ ಸಂರಕ್ಷಣಾ ಮೀಸಲು ಅರಣ್ಯ’ವೆಂದು ಮೂರು ತಿಂಗಳಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಬಾಂಬೆ ಹೈಕೋರ್ಟ್ನ ಗೋವಾ ಪೀಠವು ಗೋವಾ ಸರ್ಕಾರಕ್ಕೆ 2023ರಲ್ಲಿ ನಿರ್ದೇಶನ ನೀಡಿತ್ತು. </p>.<p>ವನ್ಯಜೀವಿಧಾಮ ಹಾಗೂ ಸಮೀಪದ ಅರಣ್ಯ ಭಾಗದಲ್ಲಿ ಜನವಸತಿಗಳಿವೆ ಹಾಗೂ ಹುಲಿ ಗೋವಾದ ಸ್ಥಳೀಯ ವನ್ಯಜೀವಿಯಲ್ಲ ಎಂಬ ಕಾರಣ ನೀಡಿ ಮೀಸಲು ಅರಣ್ಯವಾಗಿ ಘೋಷಿಸಲು ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. </p>.<p>ಕರ್ನಾಟಕ, ಮಹಾರಾಷ್ಟ್ರದ ಪಶ್ಚಿಮಘಟ್ಟದ ಅರಣ್ಯ ಭಾಗಗಳ ಜೊತೆಗೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ಮಹದಾಯಿ ವನ್ಯಜೀವಿ ಧಾಮದಲ್ಲಿ ಕೆಲವು ಹುಲಿಗಳು ಕಾಣಿಸಿಕೊಂಡಿದ್ದವು. ಇದನ್ನು ಹುಲಿ ಮೀಸಲು ಪ್ರದೇಶವಾಗಿ ಘೋಷಿಸಬೇಕು ಎಂಬ ಬೇಡಿಕೆ ಎದ್ದಿತ್ತು. ಕೆಲವು ವರ್ಷಗಳ ಹಿಂದೆ ಮಹದಾಯಿ ವನ್ಯಜೀವಿ ಧಾಮದಲ್ಲಿ ನಾಲ್ಕು ಹುಲಿಗಳ ಹತ್ಯೆಯಾಗಿತ್ತು.</p>.<p>ಈ ಸಂಬಂಧ ವರದಿ ನೀಡಿದ್ದ ಎನ್ಟಿಸಿಎ, ಕರ್ನಾಟಕ ಮತ್ತು ಗೋವಾದಲ್ಲಿ ವ್ಯಾಪಿಸಿರುವ ಈ ಪ್ರದೇಶವು ಹುಲಿ ಸಂತತಿ ವೃದ್ಧಿಗೆ ಸೂಕ್ತವಾದ ಪ್ರದೇಶವಾಗಿದೆ. ಇದನ್ನು ಮೀಸಲು ಅರಣ್ಯವಾಗಿ ಘೋಷಿಸಬೇಕು ಎಂದು ಸಲಹೆ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹದಾಯಿ-ಕೋಟಿಗಾಂವ್ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆ ಅಥವಾ ಯೋಜನೆಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.<p>ಉತ್ತರ ಗೋವಾದಲ್ಲಿರುವ ಮಹದಾಯಿ ವನ್ಯಜೀವಿ ಧಾಮವು ಕಾಳಿ ಹುಲಿ ಮೀಸಲು ಪ್ರದೇಶ, ಭೀಮಘಡ ವನ್ಯಜೀವಿಧಾಮ ಮತ್ತು ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನ ಒಳಗೊಂಡಂತೆ ಭೌಗೋಳಿಕವಾಗಿ ಕರ್ನಾಟಕದ ಜೊತೆಗೆ ಬೆಸೆದುಕೊಂಡಿದೆ.</p>.<p>ವನ್ಯಜೀವಿಧಾಮದಲ್ಲಿ ವಾಣಿಜ್ಯ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನು ಆಕ್ಷೇಪಿಸಿ ಗೋವಾ ಫೌಂಡೇಷನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಈ ನಿರ್ದೇಶನ ನೀಡಿತು. </p>.<p>ಮಹದಾಯಿ ವನ್ಯಜೀವಿ ಅಭಯಾರಣ್ಯ ಮತ್ತು ಪಕ್ಕದ ಪ್ರದೇಶಗಳನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಆರು ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿದೆ. ಬಳಿಕ ವಿಚಾರಣೆಯನ್ನು ಎಂಟು ವಾರ ಮುಂದೂಡಿದೆ. </p>.<p>ಮಹದಾಯಿ ವನ್ಯಜೀವಿಧಾಮ ಹಾಗೂ ಆಸುಪಾಸಿನ ಪ್ರದೇಶಗಳನ್ನು ‘ಹುಲಿ ಸಂರಕ್ಷಣಾ ಮೀಸಲು ಅರಣ್ಯ’ವೆಂದು ಮೂರು ತಿಂಗಳಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಬಾಂಬೆ ಹೈಕೋರ್ಟ್ನ ಗೋವಾ ಪೀಠವು ಗೋವಾ ಸರ್ಕಾರಕ್ಕೆ 2023ರಲ್ಲಿ ನಿರ್ದೇಶನ ನೀಡಿತ್ತು. </p>.<p>ವನ್ಯಜೀವಿಧಾಮ ಹಾಗೂ ಸಮೀಪದ ಅರಣ್ಯ ಭಾಗದಲ್ಲಿ ಜನವಸತಿಗಳಿವೆ ಹಾಗೂ ಹುಲಿ ಗೋವಾದ ಸ್ಥಳೀಯ ವನ್ಯಜೀವಿಯಲ್ಲ ಎಂಬ ಕಾರಣ ನೀಡಿ ಮೀಸಲು ಅರಣ್ಯವಾಗಿ ಘೋಷಿಸಲು ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. </p>.<p>ಕರ್ನಾಟಕ, ಮಹಾರಾಷ್ಟ್ರದ ಪಶ್ಚಿಮಘಟ್ಟದ ಅರಣ್ಯ ಭಾಗಗಳ ಜೊತೆಗೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ಮಹದಾಯಿ ವನ್ಯಜೀವಿ ಧಾಮದಲ್ಲಿ ಕೆಲವು ಹುಲಿಗಳು ಕಾಣಿಸಿಕೊಂಡಿದ್ದವು. ಇದನ್ನು ಹುಲಿ ಮೀಸಲು ಪ್ರದೇಶವಾಗಿ ಘೋಷಿಸಬೇಕು ಎಂಬ ಬೇಡಿಕೆ ಎದ್ದಿತ್ತು. ಕೆಲವು ವರ್ಷಗಳ ಹಿಂದೆ ಮಹದಾಯಿ ವನ್ಯಜೀವಿ ಧಾಮದಲ್ಲಿ ನಾಲ್ಕು ಹುಲಿಗಳ ಹತ್ಯೆಯಾಗಿತ್ತು.</p>.<p>ಈ ಸಂಬಂಧ ವರದಿ ನೀಡಿದ್ದ ಎನ್ಟಿಸಿಎ, ಕರ್ನಾಟಕ ಮತ್ತು ಗೋವಾದಲ್ಲಿ ವ್ಯಾಪಿಸಿರುವ ಈ ಪ್ರದೇಶವು ಹುಲಿ ಸಂತತಿ ವೃದ್ಧಿಗೆ ಸೂಕ್ತವಾದ ಪ್ರದೇಶವಾಗಿದೆ. ಇದನ್ನು ಮೀಸಲು ಅರಣ್ಯವಾಗಿ ಘೋಷಿಸಬೇಕು ಎಂದು ಸಲಹೆ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>