<p><strong>ನವದೆಹಲಿ:</strong> ಬಗರ್ಹುಕುಂ ಅಕ್ರಮ ಹಗರಣದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಿರುದ್ಧ 2018ರಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ವಿಪುಲ್ ಎಂ. ಪಂಚೋಲಿ ಅವರ ಪೀಠವು, ಅಶೋಕ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. </p>.<p>‘ಮೇಲ್ಮನವಿ ಸಲ್ಲಿಸಿದವರ ವಿರುದ್ಧದ ಕ್ರಮಗಳು ಮೇಲ್ನೋಟಕ್ಕೆ ರಾಜಕೀಯ ಪ್ರೇರಿತವಾಗಿವೆ ಮತ್ತು ಆ ಮೂಲಕ ದುರುದ್ದೇಶದಿಂದ ಕೂಡಿದೆ. ವಿಳಂಬವನ್ನು ಬದಿಗಿಟ್ಟರೂ ಮೇಲ್ಮನವಿ ಸಲ್ಲಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದುವರಿಯಲು ಸಾಧ್ಯವಿಲ್ಲ ಎಂದೂ ಪೀಠ ಹೇಳಿದೆ. </p>.<p>ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮೂರು ದೂರುಗಳನ್ನು ಸಲ್ಲಿಸಿದ್ದಾರೆ. ಮೊದಲ ಎರಡು ದೂರುಗಳಲ್ಲಿ ಸಾಕಷ್ಟು ಸಾಕ್ಷ್ಯಗಳ ಕೊರತೆ ಕಂಡುಬಂದಿದೆ ಎಂದು ಪೀಠ ಗಮನಿಸಿದೆ.</p>.<p>ಅಶೋಕ ಅವರ ಮೇಲ್ಮನವಿಯನ್ನು ಅಂಗೀಕರಿಸಿದ ನ್ಯಾಯಪೀಠವು, ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ನ 2018ರ ಸೆಪ್ಟೆಂಬರ್ ತೀರ್ಪನ್ನು ರದ್ದುಗೊಳಿಸಿತು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡ ರೈತರಿಗೆ ಮೀಸಲಿಟ್ಟಿದ್ದ ಜಮೀನನ್ನು ಅಶೋಕ ಅವರು ಬಗರ್ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮೇಯರ್, ಮಾಜಿ ಮೇಯರ್ ಹಾಗೂ ಮಾಜಿ ಉಪ ಮೇಯರ್ಗಳಿಗೆ ಹಂಚಿಕೆ ಮಾಡಿದ್ದರು ಎಂದು ಕರ್ನಾಟಕ ಸರ್ಕಾರ ದೂರಿತ್ತು. </p>.<p>‘1998ರಿಂದ 2006ರವರೆಗೆ ಅಶೋಕ ಅವರು ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ಅವರು ಕಾನೂನುಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಿದ್ದಾರೆ’ ಎಂದು ಆರೋಪಿಸಿ ಎ.ಆನಂದ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</p>.<p>‘ಜಮೀನು ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದು ನನ್ನ ವಿರುದ್ಧ ರಾಜಕೀಯ ದುರುದ್ದೇಶದಿಂದ ದಾಖಲಿಸಿರುವ ಪ್ರಕರಣ. ಆದ್ದರಿಂದ ರದ್ದುಪಡಿಸಬೇಕು’ ಎಂದು ಕೋರಿ ಅಶೋಕ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ತನಿಖೆ ಮುಂದುವರಿಸಲು ಎಸಿಬಿಗೆ ಹೈಕೋರ್ಟ್ 2018ರಲ್ಲಿ ಹಸಿರು ನಿಶಾನೆ ತೋರಿಸಿತ್ತು. ಇದನ್ನು ಪ್ರಶ್ನಿಸಿ ಅಶೋಕ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಗರ್ಹುಕುಂ ಅಕ್ರಮ ಹಗರಣದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಿರುದ್ಧ 2018ರಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ವಿಪುಲ್ ಎಂ. ಪಂಚೋಲಿ ಅವರ ಪೀಠವು, ಅಶೋಕ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. </p>.<p>‘ಮೇಲ್ಮನವಿ ಸಲ್ಲಿಸಿದವರ ವಿರುದ್ಧದ ಕ್ರಮಗಳು ಮೇಲ್ನೋಟಕ್ಕೆ ರಾಜಕೀಯ ಪ್ರೇರಿತವಾಗಿವೆ ಮತ್ತು ಆ ಮೂಲಕ ದುರುದ್ದೇಶದಿಂದ ಕೂಡಿದೆ. ವಿಳಂಬವನ್ನು ಬದಿಗಿಟ್ಟರೂ ಮೇಲ್ಮನವಿ ಸಲ್ಲಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದುವರಿಯಲು ಸಾಧ್ಯವಿಲ್ಲ ಎಂದೂ ಪೀಠ ಹೇಳಿದೆ. </p>.<p>ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮೂರು ದೂರುಗಳನ್ನು ಸಲ್ಲಿಸಿದ್ದಾರೆ. ಮೊದಲ ಎರಡು ದೂರುಗಳಲ್ಲಿ ಸಾಕಷ್ಟು ಸಾಕ್ಷ್ಯಗಳ ಕೊರತೆ ಕಂಡುಬಂದಿದೆ ಎಂದು ಪೀಠ ಗಮನಿಸಿದೆ.</p>.<p>ಅಶೋಕ ಅವರ ಮೇಲ್ಮನವಿಯನ್ನು ಅಂಗೀಕರಿಸಿದ ನ್ಯಾಯಪೀಠವು, ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ನ 2018ರ ಸೆಪ್ಟೆಂಬರ್ ತೀರ್ಪನ್ನು ರದ್ದುಗೊಳಿಸಿತು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡ ರೈತರಿಗೆ ಮೀಸಲಿಟ್ಟಿದ್ದ ಜಮೀನನ್ನು ಅಶೋಕ ಅವರು ಬಗರ್ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮೇಯರ್, ಮಾಜಿ ಮೇಯರ್ ಹಾಗೂ ಮಾಜಿ ಉಪ ಮೇಯರ್ಗಳಿಗೆ ಹಂಚಿಕೆ ಮಾಡಿದ್ದರು ಎಂದು ಕರ್ನಾಟಕ ಸರ್ಕಾರ ದೂರಿತ್ತು. </p>.<p>‘1998ರಿಂದ 2006ರವರೆಗೆ ಅಶೋಕ ಅವರು ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ಅವರು ಕಾನೂನುಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಿದ್ದಾರೆ’ ಎಂದು ಆರೋಪಿಸಿ ಎ.ಆನಂದ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</p>.<p>‘ಜಮೀನು ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಇದು ನನ್ನ ವಿರುದ್ಧ ರಾಜಕೀಯ ದುರುದ್ದೇಶದಿಂದ ದಾಖಲಿಸಿರುವ ಪ್ರಕರಣ. ಆದ್ದರಿಂದ ರದ್ದುಪಡಿಸಬೇಕು’ ಎಂದು ಕೋರಿ ಅಶೋಕ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ತನಿಖೆ ಮುಂದುವರಿಸಲು ಎಸಿಬಿಗೆ ಹೈಕೋರ್ಟ್ 2018ರಲ್ಲಿ ಹಸಿರು ನಿಶಾನೆ ತೋರಿಸಿತ್ತು. ಇದನ್ನು ಪ್ರಶ್ನಿಸಿ ಅಶೋಕ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>