<p><strong>ನವದೆಹಲಿ</strong>: ಕಲಬುರಗಿಯ ಆಳಂದಲ್ಲಿರುವ ಲಾಡ್ಲೆ ಮಶಾಕ್ ದರ್ಗಾ ಹಾಗೂ ಹಿಂದೂ ಸಂತ ರಾಘವ ಚೈತನ್ಯ ಅವರ ಸಮಾಧಿಯಲ್ಲಿ ಮಹಾ ಶಿವರಾತ್ರಿ ಪೂಜೆಗೆ ಅವಕಾಶ ನೀಡಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.ಆಳಂದ: ಲಾಡ್ಲೆ ಮಶಾಕ್ ಉರುಸ್ ಇಂದಿನಿಂದ.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿರುವುದರಿಂದ ಅರ್ಜಿದಾರರು ಸಂವಿಧಾನದ 32ನೇ ವಿಧಿಯನ್ನು ಬಳಸಿಕೊಳ್ಳುವಂತಿಲ್ಲ ಎಂದು ಹೇಳಿದೆ.</p><p>ಸದರಿ ಆಸ್ತಿಯ ವಿಷಯದಲ್ಲಿ ಹಸ್ತಕ್ಷೇಪ ಮಾಡದಂತೆ ತಡೆಯಬೇಕು, ಆಸ್ತಿಗೆ ಕಾನೂನುಬಾಹಿರವಾಗಿ ಪ್ರವೇಶಿಸುವುದು, ಗುಂಪುಗೂಡುವುದು ಅಥವಾ ಒಟ್ಟುಗೂಡುವುದನ್ನು ತಡೆಯಬೇಕು.ಪೂಜೆ ಮತ್ತು ಪ್ರವೇಶಕ್ಕೆ ಅನುಮತಿ ನೀಡುವ ಯಾವುದೇ ಮಧ್ಯಂತರ ಆದೇಶಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಖಲೀಲ್ ಅನ್ಸಾರಿ ಎನ್ನುವವರು ಅರ್ಜಿ ಸಲ್ಲಿಸಿದ್ದರು.</p>.ಆಳಂದ: ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅರ್ಜಿದಾರರಿಗಷ್ಟೇ ಹೈಕೋರ್ಟ್ ಅವಕಾಶ.<p>ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ವಿಭಾ ದತ್ತಾ, ಈ ಬಗ್ಗೆ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ ಎಂದು ಪೀಠದ ಮುಂದೆ ಅರುಹಿದರು.</p><p>ಆಸ್ತಿಯನ್ನು ಈಗಾಗಲೇ ವಕ್ಫ್ ಬೋರ್ಟ್ ನೋಟಿಫೈ ಮಾಡಿದ್ದು, ವಕ್ಫ್ ನ್ಯಾಯಾಧೀಕರಣವೇ ಇದನ್ನು ತೀರ್ಮಾನ ಮಾಡಬೇಕು ಎಂದು ಘೋಷಿಸುವಂತೆ ಅರ್ಜಿದಾರರು ಕೋರಿದ್ದಾರೆ ಎಂದು ಕೋರ್ಟ್ ಹೇಳಿತು.</p>.ಆಳಂದ ದರ್ಗಾದಲ್ಲಿ ಶಿವರಾತ್ರಿಗೆ ತಡೆ: ಅರ್ಜಿ ಪರಿಶೀಲನೆಗೆ 'ಸುಪ್ರೀಂ' ಒಪ್ಪಿಗೆ .<p>ಈ ಪ್ರಕರಣವು ಪೂಜಾ ಸ್ಥಳಗಳ ಕಾಯ್ದೆಗೂ ಸಂಬಂಧಿಸಿದ್ದಾಗಿದ್ದು, ಈ ಸಂಬಂಧ ದಾಖಲಾಗಿರುವ ಪ್ರಕರಣಗಳಲ್ಲಿ ಇದನ್ನೂ ಜೋಡಿಸಬಹುದು ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ಗೆ ಹೇಳಿದರು.</p><p>ಮಧ್ಯಪ್ರವೇಶಿಸಲು ನಿರಾಕರಿಸಿದ ಕೋರ್ಟ್, ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿತು.</p><p>15 ಮಂದಿಗೆ ಮಹಾಶಿವರಾತ್ರಿ ಪೂಜೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.</p> .ಆಳಂದ | ಐದು ಕಡೆ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಸೆರೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಲಬುರಗಿಯ ಆಳಂದಲ್ಲಿರುವ ಲಾಡ್ಲೆ ಮಶಾಕ್ ದರ್ಗಾ ಹಾಗೂ ಹಿಂದೂ ಸಂತ ರಾಘವ ಚೈತನ್ಯ ಅವರ ಸಮಾಧಿಯಲ್ಲಿ ಮಹಾ ಶಿವರಾತ್ರಿ ಪೂಜೆಗೆ ಅವಕಾಶ ನೀಡಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.ಆಳಂದ: ಲಾಡ್ಲೆ ಮಶಾಕ್ ಉರುಸ್ ಇಂದಿನಿಂದ.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಪ್ರಕರಣ ಕರ್ನಾಟಕ ಹೈಕೋರ್ಟ್ನಲ್ಲಿರುವುದರಿಂದ ಅರ್ಜಿದಾರರು ಸಂವಿಧಾನದ 32ನೇ ವಿಧಿಯನ್ನು ಬಳಸಿಕೊಳ್ಳುವಂತಿಲ್ಲ ಎಂದು ಹೇಳಿದೆ.</p><p>ಸದರಿ ಆಸ್ತಿಯ ವಿಷಯದಲ್ಲಿ ಹಸ್ತಕ್ಷೇಪ ಮಾಡದಂತೆ ತಡೆಯಬೇಕು, ಆಸ್ತಿಗೆ ಕಾನೂನುಬಾಹಿರವಾಗಿ ಪ್ರವೇಶಿಸುವುದು, ಗುಂಪುಗೂಡುವುದು ಅಥವಾ ಒಟ್ಟುಗೂಡುವುದನ್ನು ತಡೆಯಬೇಕು.ಪೂಜೆ ಮತ್ತು ಪ್ರವೇಶಕ್ಕೆ ಅನುಮತಿ ನೀಡುವ ಯಾವುದೇ ಮಧ್ಯಂತರ ಆದೇಶಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಖಲೀಲ್ ಅನ್ಸಾರಿ ಎನ್ನುವವರು ಅರ್ಜಿ ಸಲ್ಲಿಸಿದ್ದರು.</p>.ಆಳಂದ: ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅರ್ಜಿದಾರರಿಗಷ್ಟೇ ಹೈಕೋರ್ಟ್ ಅವಕಾಶ.<p>ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ವಿಭಾ ದತ್ತಾ, ಈ ಬಗ್ಗೆ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ ಎಂದು ಪೀಠದ ಮುಂದೆ ಅರುಹಿದರು.</p><p>ಆಸ್ತಿಯನ್ನು ಈಗಾಗಲೇ ವಕ್ಫ್ ಬೋರ್ಟ್ ನೋಟಿಫೈ ಮಾಡಿದ್ದು, ವಕ್ಫ್ ನ್ಯಾಯಾಧೀಕರಣವೇ ಇದನ್ನು ತೀರ್ಮಾನ ಮಾಡಬೇಕು ಎಂದು ಘೋಷಿಸುವಂತೆ ಅರ್ಜಿದಾರರು ಕೋರಿದ್ದಾರೆ ಎಂದು ಕೋರ್ಟ್ ಹೇಳಿತು.</p>.ಆಳಂದ ದರ್ಗಾದಲ್ಲಿ ಶಿವರಾತ್ರಿಗೆ ತಡೆ: ಅರ್ಜಿ ಪರಿಶೀಲನೆಗೆ 'ಸುಪ್ರೀಂ' ಒಪ್ಪಿಗೆ .<p>ಈ ಪ್ರಕರಣವು ಪೂಜಾ ಸ್ಥಳಗಳ ಕಾಯ್ದೆಗೂ ಸಂಬಂಧಿಸಿದ್ದಾಗಿದ್ದು, ಈ ಸಂಬಂಧ ದಾಖಲಾಗಿರುವ ಪ್ರಕರಣಗಳಲ್ಲಿ ಇದನ್ನೂ ಜೋಡಿಸಬಹುದು ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ಗೆ ಹೇಳಿದರು.</p><p>ಮಧ್ಯಪ್ರವೇಶಿಸಲು ನಿರಾಕರಿಸಿದ ಕೋರ್ಟ್, ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿತು.</p><p>15 ಮಂದಿಗೆ ಮಹಾಶಿವರಾತ್ರಿ ಪೂಜೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.</p> .ಆಳಂದ | ಐದು ಕಡೆ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಸೆರೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>