<p><strong>ನವದೆಹಲಿ:</strong> ಪಿಟಿಸಿಎಲ್ ಭೂಮಿ ಪರಭಾರೆಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಭೂಮಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲುದಾರರಾಗಿರುವ ವ್ಯಕ್ತಿಗಳು ನಂತರ ಅದರ ಮಾರಾಟ ಪ್ರಕ್ರಿಯೆಯನ್ನು ಪ್ರಶ್ನಿಸುವಂತಿಲ್ಲ ಎಂದು ತಿಳಿಸಿದೆ. </p>.<p>ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ನಿರ್ದಿಷ್ಟ ಭೂಮಿಯ ವರ್ಗಾವಣೆಯ ನಿರ್ಬಂಧ–ಪಿಟಿಸಿಎಲ್) ಕಾಯ್ದೆ ಅಡಿಯ ಭೂ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಸಂಜಯ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.</p>.<p>ಈ ವಿವಾದಿತ ಭೂಮಿಯನ್ನು 1977ರಲ್ಲಿ ಮಂಜೂರು ಮಾಡಲಾಗಿತ್ತು. ನಂತರ 1997ರಲ್ಲಿ ಈ ಭೂಮಿಯು ಮೊದಲ ವರ್ಗಾವಣೆಯಾಗಿತ್ತು. 2003ರಲ್ಲಿ ಮೇಲ್ಮನವಿದಾರರಾದ ಸೀತಮ್ಮ ಎಂಬವರು ಖರೀದಿ ಮಾಡಿದ್ದರು. ಆದರೆ, ಈ ಮಾರಾಟ ಪ್ರಕ್ರಿಯೆ ಕಾನೂನುಬದ್ಧವಾಗಿಲ್ಲ. ಅದನ್ನು ರದ್ದುಗೊಳಿಸಬೇಕು ಎಂದು ಕೋರಿ ಮೂಲ ಮಂಜೂರುದಾರರ ಮಕ್ಕಳು 2006ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 4ರ ಅನುಸಾರ ಈ ಭೂಮಿಯನ್ನು ಮಾರಾಟ ಮಾಡುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂಬುದು ಅರ್ಜಿದಾರರ ವಾದವಾಗಿತ್ತು. ಇದನ್ನು ಪರಿಗಣಿಸಿದ್ದ ಹೈಕೋರ್ಟ್ ಮಾರಾಟ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸೀತಮ್ಮ ಮೇಲ್ಮನವಿ ಸಲ್ಲಿಸಿದ್ದರು. </p>.<p>ವಿಚಾರಣೆ ನಡೆಸಿದ ನ್ಯಾಯಪೀಠವು, ‘ಅರ್ಜಿದಾರರು ಮೂಲ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲುದಾರರಾಗಿದ್ದರು. ಆಗ ಅವರಿಗೆ 35 ಹಾಗೂ 25 ವರ್ಷ ಆಗಿತ್ತು. ಅವರಿಗೆ ಮಾರಾಟ ಪ್ರಕ್ರಿಯೆಯ ಕುರಿತು ಮಾಹಿತಿ ಇತ್ತು. ಅಲ್ಲದೆ, ಮಾರಾಟ ನಡೆದ 9 ವರ್ಷಗಳ ನಂತರ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ವಿಳಂಬವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಬೇಕಿತ್ತು‘ ಎಂದು ಅಭಿಪ್ರಾಯಪಟ್ಟಿದೆ. ಮಾರಾಟ ಪ್ರಕ್ರಿಯೆಯನ್ನು ಅನರ್ಹಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಿಟಿಸಿಎಲ್ ಭೂಮಿ ಪರಭಾರೆಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಭೂಮಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲುದಾರರಾಗಿರುವ ವ್ಯಕ್ತಿಗಳು ನಂತರ ಅದರ ಮಾರಾಟ ಪ್ರಕ್ರಿಯೆಯನ್ನು ಪ್ರಶ್ನಿಸುವಂತಿಲ್ಲ ಎಂದು ತಿಳಿಸಿದೆ. </p>.<p>ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ನಿರ್ದಿಷ್ಟ ಭೂಮಿಯ ವರ್ಗಾವಣೆಯ ನಿರ್ಬಂಧ–ಪಿಟಿಸಿಎಲ್) ಕಾಯ್ದೆ ಅಡಿಯ ಭೂ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಸಂಜಯ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.</p>.<p>ಈ ವಿವಾದಿತ ಭೂಮಿಯನ್ನು 1977ರಲ್ಲಿ ಮಂಜೂರು ಮಾಡಲಾಗಿತ್ತು. ನಂತರ 1997ರಲ್ಲಿ ಈ ಭೂಮಿಯು ಮೊದಲ ವರ್ಗಾವಣೆಯಾಗಿತ್ತು. 2003ರಲ್ಲಿ ಮೇಲ್ಮನವಿದಾರರಾದ ಸೀತಮ್ಮ ಎಂಬವರು ಖರೀದಿ ಮಾಡಿದ್ದರು. ಆದರೆ, ಈ ಮಾರಾಟ ಪ್ರಕ್ರಿಯೆ ಕಾನೂನುಬದ್ಧವಾಗಿಲ್ಲ. ಅದನ್ನು ರದ್ದುಗೊಳಿಸಬೇಕು ಎಂದು ಕೋರಿ ಮೂಲ ಮಂಜೂರುದಾರರ ಮಕ್ಕಳು 2006ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 4ರ ಅನುಸಾರ ಈ ಭೂಮಿಯನ್ನು ಮಾರಾಟ ಮಾಡುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ ಎಂಬುದು ಅರ್ಜಿದಾರರ ವಾದವಾಗಿತ್ತು. ಇದನ್ನು ಪರಿಗಣಿಸಿದ್ದ ಹೈಕೋರ್ಟ್ ಮಾರಾಟ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸೀತಮ್ಮ ಮೇಲ್ಮನವಿ ಸಲ್ಲಿಸಿದ್ದರು. </p>.<p>ವಿಚಾರಣೆ ನಡೆಸಿದ ನ್ಯಾಯಪೀಠವು, ‘ಅರ್ಜಿದಾರರು ಮೂಲ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲುದಾರರಾಗಿದ್ದರು. ಆಗ ಅವರಿಗೆ 35 ಹಾಗೂ 25 ವರ್ಷ ಆಗಿತ್ತು. ಅವರಿಗೆ ಮಾರಾಟ ಪ್ರಕ್ರಿಯೆಯ ಕುರಿತು ಮಾಹಿತಿ ಇತ್ತು. ಅಲ್ಲದೆ, ಮಾರಾಟ ನಡೆದ 9 ವರ್ಷಗಳ ನಂತರ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ವಿಳಂಬವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಬೇಕಿತ್ತು‘ ಎಂದು ಅಭಿಪ್ರಾಯಪಟ್ಟಿದೆ. ಮಾರಾಟ ಪ್ರಕ್ರಿಯೆಯನ್ನು ಅನರ್ಹಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>