<p><strong>ನವದೆಹಲಿ:</strong> ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ. </p><p>ಪ್ರಾಣೇಶ್, ಪರಾಜಿತ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಹಾಗೂ ಚುನಾವಣಾ ಆಯೋಗದ ವಕೀಲರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯಾ ಬಾಗ್ಚಿ ಪೀಠವು ಲಿಖಿತ ಪ್ರಮಾಣಪತ್ರ ಸಲ್ಲಿಸುವಂತೆ ವಕೀಲರಿಗೆ ಸೂಚಿಸಿತು. </p><p>ಗಾಯತ್ರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ‘ಪ್ರಾಣೇಶ್ ಆಯ್ಕೆಯಾಗಿ ನಾಲ್ಕು ವರ್ಷಗಳು ಈಗಾಗಲೇ ಕಳೆದಿವೆ. ಅವರು ಅಧಿಕಾರದ ಸುಖ ಅನುಭವಿಸುತ್ತಿದ್ದಾರೆ. ಇದು ಸರಿಯಲ್ಲ’ ಎಂದರು. </p><p>‘ಹಿಂದಿನ ಸರ್ಕಾರದ ಅವಧಿಯಲ್ಲಿ (ಬಿಜೆಪಿ) ನಾಮನಿರ್ದೇಶನಗೊಂಡ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲೂ ನಾಮನಿರ್ದೇಶಿತ ಸಂಸದರಿಗೆ ಮತದಾನದ ಹಕ್ಕು ಇಲ್ಲ. ಆದರೆ, ವಿಧಾನ ಪರಿಷತ್ ಚುನಾವಣೆಯಲ್ಲಿ ನಿಯಮಬಾಹಿರ</p><p>ವಾಗಿ ಮತದಾನದ ಹಕ್ಕು ನೀಡಲಾಗಿದೆ’ ಎಂದರು. </p><p>ಪ್ರಾಣೇಶ್ ಪರ ವಾದ ಮಂಡಿಸಿದ ವಕೀಲರು, ‘ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗುವ ವರೆಗೆ ಎದುರಾಳಿ ಅಭ್ಯರ್ಥಿ ಯಾವುದೇ ತಕರಾರು ಎತ್ತಿರಲಿಲ್ಲ. ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ಕೂಡಲೇ ಆಕ್ಷೇಪಣೆ ಸಲ್ಲಿಸ</p><p>ಬೇಕಿತ್ತು. ಚುನಾವಣೆಯಲ್ಲಿ ಸೋತ ಬಳಿಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಈ ಎಲ್ಲ ಅಂಶಗಳನ್ನು ಪರಿಗಣಿಸದೆಯೇ ತೀರ್ಪು ನೀಡಿದೆ’ ಎಂದರು. ಚುನಾವಣಾ ಆಯೋಗದ ಪರ ವಕೀಲರು, ‘ಹೈಕೋರ್ಟ್ ತೀರ್ಪು ನೀಡಿದ ಬಳಿಕ ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆಯಲ್ಲಿ ಮತದಾನದ ಹಕ್ಕು ನೀಡಿಲ್ಲ. ಈ</p><p>ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿಲ್ಲ. ನ್ಯಾಯಾಲಯದ ತೀರ್ಪನ್ನು ಪಾಲಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು. </p><p>‘ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ’ ಎಂದು ಹೈಕೋರ್ಟ್ 2022ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. </p>.<h2>2021ರ ಡಿಸೆಂಬರ್ನಲ್ಲಿ ನಡೆದಿದ್ದ ಚುನಾವಣೆ</h2><p>ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನ ಗಳಿಸಿದ್ದರು. ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. </p><p>‘ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ’ ಎಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ. </p><p>ಪ್ರಾಣೇಶ್, ಪರಾಜಿತ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಹಾಗೂ ಚುನಾವಣಾ ಆಯೋಗದ ವಕೀಲರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯಾ ಬಾಗ್ಚಿ ಪೀಠವು ಲಿಖಿತ ಪ್ರಮಾಣಪತ್ರ ಸಲ್ಲಿಸುವಂತೆ ವಕೀಲರಿಗೆ ಸೂಚಿಸಿತು. </p><p>ಗಾಯತ್ರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ‘ಪ್ರಾಣೇಶ್ ಆಯ್ಕೆಯಾಗಿ ನಾಲ್ಕು ವರ್ಷಗಳು ಈಗಾಗಲೇ ಕಳೆದಿವೆ. ಅವರು ಅಧಿಕಾರದ ಸುಖ ಅನುಭವಿಸುತ್ತಿದ್ದಾರೆ. ಇದು ಸರಿಯಲ್ಲ’ ಎಂದರು. </p><p>‘ಹಿಂದಿನ ಸರ್ಕಾರದ ಅವಧಿಯಲ್ಲಿ (ಬಿಜೆಪಿ) ನಾಮನಿರ್ದೇಶನಗೊಂಡ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲೂ ನಾಮನಿರ್ದೇಶಿತ ಸಂಸದರಿಗೆ ಮತದಾನದ ಹಕ್ಕು ಇಲ್ಲ. ಆದರೆ, ವಿಧಾನ ಪರಿಷತ್ ಚುನಾವಣೆಯಲ್ಲಿ ನಿಯಮಬಾಹಿರ</p><p>ವಾಗಿ ಮತದಾನದ ಹಕ್ಕು ನೀಡಲಾಗಿದೆ’ ಎಂದರು. </p><p>ಪ್ರಾಣೇಶ್ ಪರ ವಾದ ಮಂಡಿಸಿದ ವಕೀಲರು, ‘ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗುವ ವರೆಗೆ ಎದುರಾಳಿ ಅಭ್ಯರ್ಥಿ ಯಾವುದೇ ತಕರಾರು ಎತ್ತಿರಲಿಲ್ಲ. ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ಕೂಡಲೇ ಆಕ್ಷೇಪಣೆ ಸಲ್ಲಿಸ</p><p>ಬೇಕಿತ್ತು. ಚುನಾವಣೆಯಲ್ಲಿ ಸೋತ ಬಳಿಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಈ ಎಲ್ಲ ಅಂಶಗಳನ್ನು ಪರಿಗಣಿಸದೆಯೇ ತೀರ್ಪು ನೀಡಿದೆ’ ಎಂದರು. ಚುನಾವಣಾ ಆಯೋಗದ ಪರ ವಕೀಲರು, ‘ಹೈಕೋರ್ಟ್ ತೀರ್ಪು ನೀಡಿದ ಬಳಿಕ ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆಯಲ್ಲಿ ಮತದಾನದ ಹಕ್ಕು ನೀಡಿಲ್ಲ. ಈ</p><p>ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿಲ್ಲ. ನ್ಯಾಯಾಲಯದ ತೀರ್ಪನ್ನು ಪಾಲಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು. </p><p>‘ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ’ ಎಂದು ಹೈಕೋರ್ಟ್ 2022ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. </p>.<h2>2021ರ ಡಿಸೆಂಬರ್ನಲ್ಲಿ ನಡೆದಿದ್ದ ಚುನಾವಣೆ</h2><p>ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನ ಗಳಿಸಿದ್ದರು. ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. </p><p>‘ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ’ ಎಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>