‘ಆದರೆ, ಖಾಸಗಿ ಶಾಲೆಗಳಲ್ಲಿ, ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಬಜೆಟ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೋಧಕ, ಬೋಧಕೇತರ ಸಿಬ್ಬಂದಿ ಮುನ್ನೆಲೆಗೆ ಬಾರದ, ಅತಿಯಾದ ಸಮಸ್ಯೆಗೆ ಸಿಲುಕಿರುವ ಸಮುದಾಯವಾಗಿದ್ದಾರೆ. ವಿದ್ಯಾ ಸಂಸ್ಥೆಗಳ ಆಡಳಿತ ವರ್ಗಗಳು ನೀಡುವ ವೇತನ-ಭತ್ಯೆಗಳನ್ನು ಸಂತೃಪ್ತಿಯಿಂದ ಸ್ವೀಕರಿಸಿ ಮಕ್ಕಳ ಭವಿಷ್ಯವನ್ನು ಈ ಶಿಕ್ಷಕರು ಕಾಯುತ್ತಿದ್ದಾರೆ. ಪೋಷಕ-ಶಾಲೆಗಳ ನಡುವಿನ ಸಮಸ್ಯೆಗಳ ನೇರ ಪರಿಣಾಮ ಈ ಸಮುದಾಯದ ಮೇಲಾಗಿದೆ. ಅಸಂಖ್ಯ ಶಿಕ್ಷಕರು, ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿದ್ದಾರೆ. ಹಣ್ಣು ತರಕಾರಿ ಮಾರಿದ್ದಾರೆ. ಈ ವರ್ಗದ ನೆರವಿಗೆ ಧಾವಿಸುವುದೂ ಸರ್ಕಾರದ ಜವಾಬ್ದಾರಿ’ ಎಂದೂ ಪತ್ರದಲ್ಲಿ ಹೇಳಿದ್ದಾರೆ.