<p><strong>ಚಿತ್ರದುರ್ಗ:</strong> ರೇಣುಕಸ್ವಾಮಿ ಕೊಲೆ ಪ್ರಕರಣದ 6ನೇ ಆರೋಪಿ, ನಗರದ ರೈಲ್ವೆಸ್ಟೇಷನ್ ಬಡಾವಣೆ ನಿವಾಸಿ ಜಗದೀಶ್ ಅಲಿಯಾಸ್ ಜಗ್ಗ, 7ನೇ ಆರೋಪಿ ಅನು ಅಲಿಯಾಸ್ ಅನುಕುಮಾರ್ ಶುಕ್ರವಾರ ಬೆಳಿಗ್ಗೆ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಶರಣಾದರು.</p><p>ಇಬ್ಬರೂ ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು.</p><p>ಚಿತ್ರದುರ್ಗ ಉಪ ವಿಭಾಗದ ಡಿವೈಎಸ್ಪಿ ಹಾಗೂ ಕಾಮಾಕ್ಷಿ ಪಾಳ್ಯ ಪೊಲೀಸರ ತಂಡಗಳು ನಗರದಲ್ಲಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ವಿಷಯ ತಿಳಿದು ಆರೋಪಿಗಳು ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಜಗದೀಶ್, ಅನುಕುಮಾರ್ ಇಬ್ಬರೂ ದರ್ಶನ್ ಅಭಿಮಾನಿಗಳಾಗಿದ್ದಾರೆ, ದರ್ಶನ್ ಜೊತೆಗಿರುವ ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p><p>‘ವಿಚಾರಣಾಧಿಕಾರಿ ಮುಂದೆ ಸತ್ಯ ಹೇಳುತ್ತೇವೆ ಎಂದು ಕಚೇರಿಗೆ ಹಾಜರಾಗಿದ್ದರು. ಅವರನ್ನು ನಾವು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರಿಗೆ ಒಪ್ಪಿಸಿದ್ದೇವೆ, ನಾವು ವಿಚಾರಣೆ ನಡೆಸಿಲ್ಲ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ‘ಪ್ರಜಾವಾಣಿ‘ಗೆ ತಿಳಿಸಿದರು.</p><p><strong>8ನೇ ಆರೋಪಿ ಹಸ್ತಾಂತರ:</strong> ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದ 8 ನೇ ಆರೋಪಿ ರವಿಯನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು. ಜಿಲ್ಲಾಸ್ಪತ್ರೆಯಲ್ಲಿ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬೆಂಗಳೂರಿಗೆ ಕರೆದೊಯ್ಯಲಾಯಿತು.</p>.ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ.ರೇಣುಕಸ್ವಾಮಿ ಕೊಲೆ ಪ್ರಕರಣ: ಚಿತ್ರದುರ್ಗದಲ್ಲಿ ತಡರಾತ್ರಿ ನಡೆದ ಸ್ಥಳ ಮಹಜರು.ಕೊಲೆ ಪ್ರಕರಣ: ರೇಣುಕಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್.ರೇಣುಕಸ್ವಾಮಿ ಕೊಲೆ: 8ನೇ ಆರೋಪಿ ಶರಣಾಗತಿ.`ಆಘಾತ'ದಿಂದ ಹೊರಬರದ ರೇಣುಕಸ್ವಾಮಿ ಕುಟುಂಬ.ಪತ್ನಿ ಹೀಯಾಳಿಸಿದ್ದಕ್ಕೆ ಗೆಳೆಯನ ಕೊಲೆ: ರೇಣುಕಸ್ವಾಮಿ ಹತ್ಯೆ ಮಾದರಿಯಲ್ಲೇ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ರೇಣುಕಸ್ವಾಮಿ ಕೊಲೆ ಪ್ರಕರಣದ 6ನೇ ಆರೋಪಿ, ನಗರದ ರೈಲ್ವೆಸ್ಟೇಷನ್ ಬಡಾವಣೆ ನಿವಾಸಿ ಜಗದೀಶ್ ಅಲಿಯಾಸ್ ಜಗ್ಗ, 7ನೇ ಆರೋಪಿ ಅನು ಅಲಿಯಾಸ್ ಅನುಕುಮಾರ್ ಶುಕ್ರವಾರ ಬೆಳಿಗ್ಗೆ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಶರಣಾದರು.</p><p>ಇಬ್ಬರೂ ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು.</p><p>ಚಿತ್ರದುರ್ಗ ಉಪ ವಿಭಾಗದ ಡಿವೈಎಸ್ಪಿ ಹಾಗೂ ಕಾಮಾಕ್ಷಿ ಪಾಳ್ಯ ಪೊಲೀಸರ ತಂಡಗಳು ನಗರದಲ್ಲಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ವಿಷಯ ತಿಳಿದು ಆರೋಪಿಗಳು ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಜಗದೀಶ್, ಅನುಕುಮಾರ್ ಇಬ್ಬರೂ ದರ್ಶನ್ ಅಭಿಮಾನಿಗಳಾಗಿದ್ದಾರೆ, ದರ್ಶನ್ ಜೊತೆಗಿರುವ ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.</p><p>‘ವಿಚಾರಣಾಧಿಕಾರಿ ಮುಂದೆ ಸತ್ಯ ಹೇಳುತ್ತೇವೆ ಎಂದು ಕಚೇರಿಗೆ ಹಾಜರಾಗಿದ್ದರು. ಅವರನ್ನು ನಾವು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರಿಗೆ ಒಪ್ಪಿಸಿದ್ದೇವೆ, ನಾವು ವಿಚಾರಣೆ ನಡೆಸಿಲ್ಲ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ‘ಪ್ರಜಾವಾಣಿ‘ಗೆ ತಿಳಿಸಿದರು.</p><p><strong>8ನೇ ಆರೋಪಿ ಹಸ್ತಾಂತರ:</strong> ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದ 8 ನೇ ಆರೋಪಿ ರವಿಯನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಾಯಿತು. ಜಿಲ್ಲಾಸ್ಪತ್ರೆಯಲ್ಲಿ ರವಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬೆಂಗಳೂರಿಗೆ ಕರೆದೊಯ್ಯಲಾಯಿತು.</p>.ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ.ರೇಣುಕಸ್ವಾಮಿ ಕೊಲೆ ಪ್ರಕರಣ: ಚಿತ್ರದುರ್ಗದಲ್ಲಿ ತಡರಾತ್ರಿ ನಡೆದ ಸ್ಥಳ ಮಹಜರು.ಕೊಲೆ ಪ್ರಕರಣ: ರೇಣುಕಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್.ರೇಣುಕಸ್ವಾಮಿ ಕೊಲೆ: 8ನೇ ಆರೋಪಿ ಶರಣಾಗತಿ.`ಆಘಾತ'ದಿಂದ ಹೊರಬರದ ರೇಣುಕಸ್ವಾಮಿ ಕುಟುಂಬ.ಪತ್ನಿ ಹೀಯಾಳಿಸಿದ್ದಕ್ಕೆ ಗೆಳೆಯನ ಕೊಲೆ: ರೇಣುಕಸ್ವಾಮಿ ಹತ್ಯೆ ಮಾದರಿಯಲ್ಲೇ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>