ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಪೊಲೀಸರು, ‘ಸದ್ಯಕ್ಕೆ ಗಡಿಪಾರು ಪ್ರಕ್ರಿಯೆ ಸ್ಥಗಿತಗೊಳಿಸಿ’ ಎಂದು ಹೇಳಿದ್ದಾರೆ. ಅದರಿಂದಾಗಿ 59 ಮಂದಿ ಬಾಂಗ್ಲಾದೇಶಿಯರ ಸಮೇತಬೆಂಗಳೂರು ಪೊಲೀಸರು, ಕೋಲ್ಕತ್ತಾದಲ್ಲೇ ಬೀಡು ಬಿಟ್ಟಿದ್ದಾರೆ. ಅವರ ವಸತಿಗೆ ಸ್ಥಳೀಯ ಕಲ್ಯಾಣ ಮಂಟಪವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. 24 ಗಂಟೆಯೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.