‘ಹಲವು ಅಭ್ಯರ್ಥಿಗಳು ಗೋವಿಂದರಾಜು ವಿರುದ್ಧ ಮೌಖಿಕವಾಗಿ ದೂರುಗಳನ್ನು ನೀಡಿದ್ದಾರೆ. 15 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಸರ್ಕಾರಿ ಕರ್ತವ್ಯದಲ್ಲಿದ್ದು, ನಿಯಮಾನುಸಾರ ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ. ಎರಡು ಬಾರಿ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಕಚೇರಿಯ ಲಿಖಿತ ಆದೇಶವನ್ನು ಪದೇ ಪದೇ ಉಲ್ಲಂಘಿಸಿರುವುದು ಬೇಜವಾಬ್ದಾರಿ ವರ್ತನೆ ಮತ್ತು ಗಂಭೀರ ಸ್ವರೂಪದ ಲೋಪ ಎಂದು ಪರಿಗಣಿಸಿ, ನಿಯಮಗಳನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ’ ಎಂದೂ ಅವರು ವಿವರಿಸಿದ್ದಾರೆ.