ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ ಮೇಲೆ ಶಂಕೆ: ಮಕ್ಕಳನ್ನೇ ಕೊಂದ ತಂದೆ

Last Updated 12 ಫೆಬ್ರುವರಿ 2023, 19:45 IST
ಅಕ್ಷರ ಗಾತ್ರ

ದೇವದುರ್ಗ (ರಾಯಚೂರು ಜಿಲ್ಲೆ): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದ ನಿಂಗಪ್ಪ ಎಂಬಾತ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ಕೃತ್ಯ ನಡೆದಿದ್ದು, ಭಾನುವಾರ ಗೊತ್ತಾಗಿದೆ.

ಶಿವರಾಜ ನಿಂಗಪ್ಪ (5), ರಾಘವೇಂದ್ರ ನಿಂಗಪ್ಪ (3) ಕೊಲೆಯಾದ ಮಕ್ಕಳು. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್‌ ಠಾಣೆಗೆ ತೆರಳಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ದೂರು ಸಲ್ಲಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ. ಮಕ್ಕಳಿಬ್ಬರು ನನಗೆ ಹುಟ್ಟಿಲ್ಲ ಎಂದು ನಿಂಗಪ್ಪ ನಿಂದಿಸಿದ. ಕೆ.ಇರಬಗೇರಾ ಗ್ರಾಮದಲ್ಲಿದ್ದ ಮಕ್ಕಳಿಬ್ಬರನ್ನು ಜಕ್ಲೇರದೊಡ್ಡಿಗೆ ಕರೆತಂದು ಕತ್ತು ಹಿಸುಕಿ ಸಾಯಿಸಿದ್ದು, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT