ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಮಿತ್ವ ಯೋಜನೆ: ರಾಜ್ಯದ 2,598 ಹಳ್ಳಿಗಳ ಆಸ್ತಿ ಕಾರ್ಡ್‌ ಸಿದ್ಧ

Published 25 ಜುಲೈ 2023, 14:28 IST
Last Updated 25 ಜುಲೈ 2023, 14:28 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆಯಡಿ ಕರ್ನಾಟಕದ 6,887 ಹಳ್ಳಿಗಳಲ್ಲಿ ಈ ವರೆಗೆ ಡ್ರೋನ್‌ ಮೂಲಕ ಆಸ್ತಿಗಳ ಸಮೀಕ್ಷೆ ನಡೆಸಲಾಗಿದೆ ಹಾಗೂ 2,598 ಹಳ್ಳಿಗಳಲ್ಲಿ ಆಸ್ತಿ ಕಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಪಂಚಾಯತ್‌ರಾಜ್ ಸಚಿವ ಗಿರಿರಾಜ್ ಸಿಂಗ್‌ ತಿಳಿಸಿದ್ದಾರೆ. 

ಲೋಕಸಭೆಯಲ್ಲಿ ಸದಸ್ಯರ ಪ್ರಶ್ನೆಗೆ ಮಂಗಳವಾರ ಲಿಖಿತ ಉತ್ತರ ನೀಡಿರುವ ಅವರು, ‘ಕೇಂದ್ರ ಪಂಚಾಯತ್‌ರಾಜ್‌, ರಾಜ್ಯ ಕಂದಾಯ, ರಾಜ್ಯ ಪಂಚಾಯತ್‌ರಾಜ್‌ ಇಲಾಖೆ ಹಾಗೂ ಸರ್ವೆ ಆಫ್‌ ಇಂಡಿಯಾದ ಸಹಯೋಗದಲ್ಲಿ ತಂತ್ರಜ್ಞಾನದ ನೆರವಿನಿಂದ ಆಸ್ತಿಗಳ ಸಮೀಕ್ಷೆ ನಡೆಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ 31 ರಾಜ್ಯಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ. 

ಕರ್ನಾಟಕದ ಎಲ್ಲ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ 2025ರೊಳಗೆ ಸಮೀಕ್ಷೆ ನಡೆಸುವ ಗುರಿ ಇರಿಸಿಕೊಳ್ಳಲಾಗಿದೆ. ಈ ಯೋಜನೆಗೆ 2020 ರಿಂದ 2025ರ ವರೆಗೆ ₹566 ಕೋಟಿ ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT