ಪ್ರಕರಣವೇನು?: ‘ಸ್ವಾಮೀಜಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆದರೆ, ಪ್ರಕರಣದ ವಿಚಾರಣೆ ನಡೆಸಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ. ಮುದಿಗೌಡರ್ ಸ್ವಾಮೀಜಿಯನ್ನು ಆರೋಪದಿಂದ ಮುಕ್ತಗೊಳಿಸಿದ್ದಾರೆ. ಆದ್ದರಿಂದ ಈ ಕುರಿತಂತೆ 2016ರ ಮಾರ್ಚ್ 31ರಂದು ಮುದಿಗೌಡರ್ ನೀಡಿರುವ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಈ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಾಸಿಕ್ಯೂಷನ್ ಕೂಡಾ ಮೇಲ್ಮನವಿ ಸಲ್ಲಿಸಿದೆ.