ದಾವಣಗೆರೆ: ವಿವಾದಾತ್ಮಕ ಹೇಳಿಕೆ ನೀಡಿದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಸುಭಾಶ್ ಚಂದ್ರ ಇಲ್ಲಿನ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಿಕಿತ್ಸೆಗೆ ಸ್ಪಂದಿಸದ ತಬ್ಲೀಗಿಗಳನ್ನು ಗುಂಡಿಕ್ಕಿ ಕೊಂದರು ತಪ್ಪಲ್ಲ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾರ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ರೇಣುಕಾಚಾರ್ಯ ಶಾಂತಿ ಕದಡುವಂತಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವಿರುದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.