<p><strong>ಮಂಡ್ಯ: </strong>ತಾಲ್ಲೂಕಿನ ಕೆರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ತಹಶೀಲ್ದಾರ್ಒಬ್ಬರು ತಮ್ಮ ಪತ್ನಿಯ ಅವಿರೋಧ ಆಯ್ಕೆಗಾಗಿ ₹ 25 ಲಕ್ಷ ನೀಡಲು ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.</p>.<p>ಗ್ರಾಮದಲ್ಲಿ ಭಾನುವಾರ ಮನೆಗೊಬ್ಬರಂತೆ ಸಭೆ ಸೇರಿ ತಹಶೀಲ್ದಾರ್ ಪತ್ನಿಯ ಆಯ್ಕೆಗೆ ಒಪ್ಪಿಗೆ ಸೂಚಿಸಿದ್ದಾರೆ. ಗ್ರಾಮದಲ್ಲಿ ದೇವಾಲಯ ನಿರ್ಮಾಣಕ್ಕೆ ₹ 25 ಲಕ್ಷ ಹಾಗೂ ಗ್ರಾಮದ ಅಭಿವೃದ್ಧಿಗೆ ಇನ್ನೂ ಹೆಚ್ಚಿನಹಣಕಾಸಿನಸಹಾಯ ಮಾಡಲು ತಹಶೀಲ್ದಾರ್ಭರವಸೆ ನೀಡಿದ್ದಾರೆ. ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಈಗ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ತಹಶೀಲ್ದಾರ್ ಕೂಡ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚು ಸರ್ಕಾರಿ ಸೌಲಭ್ಯಗಳುಲಭಿಸಿಗ್ರಾಮ ಅಭಿವೃದ್ಧಿ ಹೊಂದುತ್ತದೆ. ಅವರ ಪತ್ನಿಯನ್ನು ಕೆರಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲೂ ಮಾತುಕತೆಯಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ತಿಳಿಸಿದರು.</p>.<p class="Subhead"><strong>ಸ್ಮಶಾನಕ್ಕೆ 8 ಗುಂಟೆ ಜಮೀನು: </strong>ಮದ್ದೂರು ತಾಲ್ಲೂಕು ಬೆಸಗರಹಳ್ಳಿ ಗ್ರಾಮ ಪಂಚಾಯಿತಿಯ ವಾರ್ಡ್ವೊಂದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಅವಿರೋಧ ಆಯ್ಕೆಗೆ 8 ಗುಂಟೆ ಜಮೀನು ನೀಡಲು ಒಪ್ಪಿದ್ದಾರೆ. ವಾರ್ಡ್ನಲ್ಲಿ ಸ್ಮಶಾನ ಇಲ್ಲದೆ ಜನರು ಸಮಸ್ಯೆ ಎದುರಿಸುತ್ತಿದ್ದು, ಆ ಭೂಮಿಯಲ್ಲಿ ಸ್ಮಶಾನವನ್ನೇ ಅಭಿವೃದ್ಧಿಗೊಳಿಸಬೇಕು ಎಂದು ಕೋರಿದ್ದಾರೆ.</p>.<p>ಮಳವಳ್ಳಿ ತಾಲ್ಲೂಕು ನೆಲಮಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹಳ್ಳಿಯೊಂದರ ಎರಡು ಸ್ಥಾನಗಳಲ್ಲೂ ಹಣ ಕೊಟ್ಟು ಅವಿರೋಧ ಆಯ್ಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ಪುರುಷ ಸ್ಥಾನಕ್ಕೆ ₹ 7.50 ಲಕ್ಷ, ಸಾಮಾನ್ಯ ಮಹಿಳೆ ಸ್ಥಾನಕ್ಕೆ ₹ 5.20 ಲಕ್ಷ ಕೊಡಲು ಆಕಾಂಕ್ಷಿಗಳು ಒಪ್ಪಿಗೆ ಸೂಚಿಸಿದ್ದಾರೆ.</p>.<p class="Subhead"><strong>ಹಣದ ವ್ಯವಹಾರ ಬೇಡ: </strong>ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮ ಪಂಚಾಯಿತಿ ಎಲ್ಲಾ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡುವ ಸಂಬಂಧ ಸಭೆ ನಡೆಸಲಾಗಿದೆ. ಯಾವುದೇ ಹಣ ಪಡೆಯದೇ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದುಹಿಂದಿನಿಂದಲೂಮಾದರಿ ಗ್ರಾಮ ಪಂಚಾಯಿತಿಯಾಗಿದೆ.</p>.<p>‘ಅವಿರೋಧ ಆಯ್ಕೆಯ ವಿಚಾರದಲ್ಲಿ ಹಣದ ವಹಿವಾಟು ನಡೆಸುವುದು ಅಪರಾಧ. ಗ್ರಾಮದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಅಲ್ಲಿಯ ಚುನಾವಣಾಧಿಕಾರಿಗೆ ಸೂಚನೆ ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜುಲ್ಫಿಕರ್ ಉಲ್ಲಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ತಾಲ್ಲೂಕಿನ ಕೆರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ತಹಶೀಲ್ದಾರ್ಒಬ್ಬರು ತಮ್ಮ ಪತ್ನಿಯ ಅವಿರೋಧ ಆಯ್ಕೆಗಾಗಿ ₹ 25 ಲಕ್ಷ ನೀಡಲು ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.</p>.<p>ಗ್ರಾಮದಲ್ಲಿ ಭಾನುವಾರ ಮನೆಗೊಬ್ಬರಂತೆ ಸಭೆ ಸೇರಿ ತಹಶೀಲ್ದಾರ್ ಪತ್ನಿಯ ಆಯ್ಕೆಗೆ ಒಪ್ಪಿಗೆ ಸೂಚಿಸಿದ್ದಾರೆ. ಗ್ರಾಮದಲ್ಲಿ ದೇವಾಲಯ ನಿರ್ಮಾಣಕ್ಕೆ ₹ 25 ಲಕ್ಷ ಹಾಗೂ ಗ್ರಾಮದ ಅಭಿವೃದ್ಧಿಗೆ ಇನ್ನೂ ಹೆಚ್ಚಿನಹಣಕಾಸಿನಸಹಾಯ ಮಾಡಲು ತಹಶೀಲ್ದಾರ್ಭರವಸೆ ನೀಡಿದ್ದಾರೆ. ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಈಗ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>‘ತಹಶೀಲ್ದಾರ್ ಕೂಡ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚು ಸರ್ಕಾರಿ ಸೌಲಭ್ಯಗಳುಲಭಿಸಿಗ್ರಾಮ ಅಭಿವೃದ್ಧಿ ಹೊಂದುತ್ತದೆ. ಅವರ ಪತ್ನಿಯನ್ನು ಕೆರಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲೂ ಮಾತುಕತೆಯಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರೊಬ್ಬರು ತಿಳಿಸಿದರು.</p>.<p class="Subhead"><strong>ಸ್ಮಶಾನಕ್ಕೆ 8 ಗುಂಟೆ ಜಮೀನು: </strong>ಮದ್ದೂರು ತಾಲ್ಲೂಕು ಬೆಸಗರಹಳ್ಳಿ ಗ್ರಾಮ ಪಂಚಾಯಿತಿಯ ವಾರ್ಡ್ವೊಂದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಅವಿರೋಧ ಆಯ್ಕೆಗೆ 8 ಗುಂಟೆ ಜಮೀನು ನೀಡಲು ಒಪ್ಪಿದ್ದಾರೆ. ವಾರ್ಡ್ನಲ್ಲಿ ಸ್ಮಶಾನ ಇಲ್ಲದೆ ಜನರು ಸಮಸ್ಯೆ ಎದುರಿಸುತ್ತಿದ್ದು, ಆ ಭೂಮಿಯಲ್ಲಿ ಸ್ಮಶಾನವನ್ನೇ ಅಭಿವೃದ್ಧಿಗೊಳಿಸಬೇಕು ಎಂದು ಕೋರಿದ್ದಾರೆ.</p>.<p>ಮಳವಳ್ಳಿ ತಾಲ್ಲೂಕು ನೆಲಮಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹಳ್ಳಿಯೊಂದರ ಎರಡು ಸ್ಥಾನಗಳಲ್ಲೂ ಹಣ ಕೊಟ್ಟು ಅವಿರೋಧ ಆಯ್ಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ಪುರುಷ ಸ್ಥಾನಕ್ಕೆ ₹ 7.50 ಲಕ್ಷ, ಸಾಮಾನ್ಯ ಮಹಿಳೆ ಸ್ಥಾನಕ್ಕೆ ₹ 5.20 ಲಕ್ಷ ಕೊಡಲು ಆಕಾಂಕ್ಷಿಗಳು ಒಪ್ಪಿಗೆ ಸೂಚಿಸಿದ್ದಾರೆ.</p>.<p class="Subhead"><strong>ಹಣದ ವ್ಯವಹಾರ ಬೇಡ: </strong>ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮ ಪಂಚಾಯಿತಿ ಎಲ್ಲಾ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಮಾಡುವ ಸಂಬಂಧ ಸಭೆ ನಡೆಸಲಾಗಿದೆ. ಯಾವುದೇ ಹಣ ಪಡೆಯದೇ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದುಹಿಂದಿನಿಂದಲೂಮಾದರಿ ಗ್ರಾಮ ಪಂಚಾಯಿತಿಯಾಗಿದೆ.</p>.<p>‘ಅವಿರೋಧ ಆಯ್ಕೆಯ ವಿಚಾರದಲ್ಲಿ ಹಣದ ವಹಿವಾಟು ನಡೆಸುವುದು ಅಪರಾಧ. ಗ್ರಾಮದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಅಲ್ಲಿಯ ಚುನಾವಣಾಧಿಕಾರಿಗೆ ಸೂಚನೆ ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜುಲ್ಫಿಕರ್ ಉಲ್ಲಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>