ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಲಕ್ಷ್ಮಿಸಾಗರ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯಾಗಿ ಸ್ಥಳನಿಯುಕ್ತಿ ಮಾಡಲಾಗಿದೆ. ಈ ನೇಮಕಾತಿಯ ಸಂದರ್ಭದಲ್ಲಿ ಸಚಿವಾಲಯದ ವೃಂದ ಹಾಗೂ ನೇಮಕಾತಿ ನಿಯಮಗಳನ್ನು ಪಾಲಿಸಿಲ್ಲ. ಸಚಿವಾಲಯದ ದಕ್ಷತೆಗೆ ಮಾರಕವಾದ ಹಾಗೂ ಸಚಿವಾಲಯದ ನೌಕರರ ಸೇವಾ ಹಿತಾಸಕ್ತಿಗೆ ವಿರುದ್ಧವಾಗಿ ಕ್ಷೇತ್ರ ಇಲಾಖೆಗಳ ನೌಕರರನ್ನು ಸಚಿವಾಲಯ ಸೇವೆಗೆ ನಿಯೋಜಿಸಲಾಗುತ್ತಿದೆ. ಈ ಹಿಂದೆಯೂ ನೌಕರರ ಸಂಘ ಇದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತ್ತು. 200ಕ್ಕೂ ಹೆಚ್ಚು ತಹಶೀಲ್ದಾರ್ ಹುದ್ದೆಗಳು ಖಾಲಿ ಇವೆ. ಜತೆಗೆ, ಲೋಕಸಭಾ ಚುನಾವಣಾ ಸಂದರ್ಭದಲ್ಲಿ ತಹಶೀಲ್ದಾರ್ ಗ್ರೇಡ್– 1 ಅಧಿಕಾರಿಯನ್ನು ಸಚಿವಾಲಯಕ್ಕೆ ನಿಯೋಜಿಸಿರುವುದು ಸೋಜಿಗ ಎಂದು ಮನವಿಯಲ್ಲಿ ತಿಳಿಸಲಾಗಿದೆ.