<p><strong>ಬೆಂಗಳೂರು:</strong> ‘ಡಿಎಂಕೆ ನೇತೃತ್ವದ ಮೈತ್ರಿಕೂಟವು ತನ್ನ ಪ್ರಣಾಳಿಕೆಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ₹2 ಸಾವಿರ ನಗದು ನೀಡುವ ಭರವಸೆ ನೀಡಿದೆ’ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಕೆಲಮಂಗಲಂನಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಅಡುಗೆ ಅನಿಲ ಹೋಗಿ ಸೌದೆ ಒಲೆ ವಾಪಸ್ ಬಂದಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಾಗಾಗಿ, ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಕುಟುಂಬಕ್ಕೆ ₹8 ಸಾವಿರ ನೀಡುವ ಭರವಸೆ ಕೊಟ್ಟಿದ್ದೇವೆ’ ಎಂದರು. </p>.<p>‘ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಎಲ್ಲ ರಾಜ್ಯಗಳೂ ಒಟ್ಟಾಗಿ ಕೇಂದ್ರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಒಂದು ಗೋಡೆಯಷ್ಟು ಅಂತರವಿದೆ. ಬಿಜೆಪಿ ಸಮಾಜವನ್ನೇ ಒಡೆಯುತ್ತಿದೆ. ಕಾಂಗ್ರೆಸ್–ಡಿಎಂಕೆ ಸೂಜಿಯಂತೆ ಎಲ್ಲರನ್ನೂ ಮತ್ತೆ ಸೇರಿಸುತ್ತಿವೆ. ಕೇಂದ್ರದ ವಂಚನೆ ವಿರುದ್ಧ ಹೋರಾಟ ನಡೆಸುತ್ತಿವೆ’ ಎಂದು ಹೇಳಿದರು.</p>.<p>‘ಅಧಿಕಾರಕ್ಕೆ ಬಂದರೆ ವಿದೇಶದಲ್ಲಿನ ಕಪ್ಪು ಹಣ ದೇಶಕ್ಕೆ ತಂದು ₹15 ಲಕ್ಷ ಹಾಕುವ ಭರವಸೆ ನೀಡಿದ್ದರು. ಆದರೆ, ನುಡಿದಂತೆ ನಡೆಯಲಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಕೊಟ್ಟ ಮಾತು ಉಳಿಸಿಕೊಂಡಿತು’ ಎಂದು ಹೇಳಿದರು. </p>.<p>‘ಕರ್ನಾಟಕದ ಗ್ಯಾರಂಟಿ ಯೋಜನೆಗಳ ಮೂಲ ಥಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಮಚಂದ್ರನ್. ಅವರ ಜನಪ್ರಿಯತೆ ಕುರಿತು ಮಾಹಿತಿ ತಿಳಿದುಕೊಳ್ಳಲು ಹೋದಾಗ ಈ ಮಾಹಿತಿ ಸಿಕ್ಕಿತ್ತು. ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು’ ಎಂದು ಮಾಹಿತಿ ನೀಡಿದರು.</p>.<p>‘ಕಾಂಗ್ರೆಸ್, ಡಿಎಂಕೆ, ಕಮ್ಯುನಿಸ್ಟ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ 20 ಪಕ್ಷಗಳ ಶಕ್ತಿ ರಾಮಚಂದ್ರನ್ ಪರವಾಗಿದೆ. ಪೆರಿಯಾರ್ ಅವರ ಮಾರ್ಗದರ್ಶನದಲ್ಲಿ ಡಿಎಂಕೆ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಪೆರಿಯಾರ್ ಅವರ ಮಾತೃಭಾಷೆ ಕನ್ನಡವಾಗಿದ್ದರೂ ತಮಿಳು ಭಾಷೆಗಾಗಿ ಹೋರಾಟ ಮಾಡಿದ್ದರು. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಮಾತೃಭಾಷೆ ತಮಿಳು. ಕನ್ನಡ–ತಮಿಳು ಸಾವಿರಾರು ವರ್ಷಗಳಿಂದಲೂ ಸಹೋದರ ಭಾಷೆಗಳು’ ಎಂದರು.</p>.<div><blockquote>ಅಣ್ಣಾಮಲೈ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಅವರನ್ನು ಕಿತ್ತೊಗೆಯಿತು. ಆತನನ್ನು ಇಟ್ಟುಕೊಂಡರೆ ನಾವು ಹತ್ತಿರಕ್ಕೂ ಬರುವುದಿಲ್ಲ ಎಂದು ಎಐಡಿಎಂಕೆ ಷರತ್ತು ಹಾಕಿದೆ. ಬಿಜೆಪಿ ನಂಬಿಕೊಂಡವರಿಗೆ ಇದೇ ಗತಿ </blockquote><span class="attribution">ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಡಿಎಂಕೆ ನೇತೃತ್ವದ ಮೈತ್ರಿಕೂಟವು ತನ್ನ ಪ್ರಣಾಳಿಕೆಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ₹2 ಸಾವಿರ ನಗದು ನೀಡುವ ಭರವಸೆ ನೀಡಿದೆ’ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಕೆಲಮಂಗಲಂನಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಅಡುಗೆ ಅನಿಲ ಹೋಗಿ ಸೌದೆ ಒಲೆ ವಾಪಸ್ ಬಂದಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಾಗಾಗಿ, ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಕುಟುಂಬಕ್ಕೆ ₹8 ಸಾವಿರ ನೀಡುವ ಭರವಸೆ ಕೊಟ್ಟಿದ್ದೇವೆ’ ಎಂದರು. </p>.<p>‘ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಎಲ್ಲ ರಾಜ್ಯಗಳೂ ಒಟ್ಟಾಗಿ ಕೇಂದ್ರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಒಂದು ಗೋಡೆಯಷ್ಟು ಅಂತರವಿದೆ. ಬಿಜೆಪಿ ಸಮಾಜವನ್ನೇ ಒಡೆಯುತ್ತಿದೆ. ಕಾಂಗ್ರೆಸ್–ಡಿಎಂಕೆ ಸೂಜಿಯಂತೆ ಎಲ್ಲರನ್ನೂ ಮತ್ತೆ ಸೇರಿಸುತ್ತಿವೆ. ಕೇಂದ್ರದ ವಂಚನೆ ವಿರುದ್ಧ ಹೋರಾಟ ನಡೆಸುತ್ತಿವೆ’ ಎಂದು ಹೇಳಿದರು.</p>.<p>‘ಅಧಿಕಾರಕ್ಕೆ ಬಂದರೆ ವಿದೇಶದಲ್ಲಿನ ಕಪ್ಪು ಹಣ ದೇಶಕ್ಕೆ ತಂದು ₹15 ಲಕ್ಷ ಹಾಕುವ ಭರವಸೆ ನೀಡಿದ್ದರು. ಆದರೆ, ನುಡಿದಂತೆ ನಡೆಯಲಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಕೊಟ್ಟ ಮಾತು ಉಳಿಸಿಕೊಂಡಿತು’ ಎಂದು ಹೇಳಿದರು. </p>.<p>‘ಕರ್ನಾಟಕದ ಗ್ಯಾರಂಟಿ ಯೋಜನೆಗಳ ಮೂಲ ಥಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಮಚಂದ್ರನ್. ಅವರ ಜನಪ್ರಿಯತೆ ಕುರಿತು ಮಾಹಿತಿ ತಿಳಿದುಕೊಳ್ಳಲು ಹೋದಾಗ ಈ ಮಾಹಿತಿ ಸಿಕ್ಕಿತ್ತು. ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಚರ್ಚೆ ಮಾಡಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು’ ಎಂದು ಮಾಹಿತಿ ನೀಡಿದರು.</p>.<p>‘ಕಾಂಗ್ರೆಸ್, ಡಿಎಂಕೆ, ಕಮ್ಯುನಿಸ್ಟ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ 20 ಪಕ್ಷಗಳ ಶಕ್ತಿ ರಾಮಚಂದ್ರನ್ ಪರವಾಗಿದೆ. ಪೆರಿಯಾರ್ ಅವರ ಮಾರ್ಗದರ್ಶನದಲ್ಲಿ ಡಿಎಂಕೆ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ಪೆರಿಯಾರ್ ಅವರ ಮಾತೃಭಾಷೆ ಕನ್ನಡವಾಗಿದ್ದರೂ ತಮಿಳು ಭಾಷೆಗಾಗಿ ಹೋರಾಟ ಮಾಡಿದ್ದರು. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಮಾತೃಭಾಷೆ ತಮಿಳು. ಕನ್ನಡ–ತಮಿಳು ಸಾವಿರಾರು ವರ್ಷಗಳಿಂದಲೂ ಸಹೋದರ ಭಾಷೆಗಳು’ ಎಂದರು.</p>.<div><blockquote>ಅಣ್ಣಾಮಲೈ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಅವರನ್ನು ಕಿತ್ತೊಗೆಯಿತು. ಆತನನ್ನು ಇಟ್ಟುಕೊಂಡರೆ ನಾವು ಹತ್ತಿರಕ್ಕೂ ಬರುವುದಿಲ್ಲ ಎಂದು ಎಐಡಿಎಂಕೆ ಷರತ್ತು ಹಾಕಿದೆ. ಬಿಜೆಪಿ ನಂಬಿಕೊಂಡವರಿಗೆ ಇದೇ ಗತಿ </blockquote><span class="attribution">ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>