<p>ಹೊಸಪೇಟೆ: ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪಕ್ಷಗಳ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿರುವ ಟಿವಿಕೆ ಪಕ್ಷದ ನಾಯಕ ದಳಪತಿ ವಿಜಯ್ ಅವರು ಭಾನುವಾರ ಚೆನ್ನೈಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಹೊಸಪೇಟೆಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.</p>.<p>ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ದೇಶದ ಪ್ರಜಾಪ್ರಭುತ್ವ ಮತ್ತು ಸಮ್ಮಿಶ್ರ ರಾಜಕಾರಣದ ಯಶಸ್ಸಿನ ಪರವಾಗಿ ಕಾರ್ಯಕರ್ತರು ಜೈಕಾರ ಹಾಕಿದರು.</p>.<p>ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಬಣ್ಣದಮನೆ ಮಾತನಾಡಿ, ದಕ್ಷಿಣ ಭಾರತದಲ್ಲಿ ಮನುವಾದಿ ಸಿದ್ಧಾಂತದ ಬಿಜೆಪಿ ಪಕ್ಷವು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕೋಮು ಭಾವನೆ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಹೊಂದಿರುವ ಸಂವಿಧಾನ ವಿರೋಧಿ ಮನಸ್ಥಿತಿ ತುಂಬಿಕೊಂಡಿರುವುದೇ ಅದಕ್ಕೆ ಕಾರಣ ಎಂದರು.</p>.<p>ಮುಖಂಡರಾದ ತಾಳೂರು ವೀರಭದ್ರ, ಸಜ್ಜಾತ್ ಖಾನ್, ರಘು, ನಾಗರಾಜ್, ಗಿರೀಶ್, ಪ್ರಕಾಶ್, ಬಿ.ಮೌಲಾಲಿ, ಶಶಿಕುಮಾರ್, ಕಿಶೋರ್ ಕುಮಾರ್, ಕಾರ್ತಿಕ್, ಗಣೇಶ್, ಯೋಹಾನ್, ಹಮೀದ್ ಹುಸೇನ್, ಬಾಬಾ ಫಕ್ರುದ್ದೀನ್, ಆಶಾ ಬೇಗಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-25-1758694187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪಕ್ಷಗಳ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಿರುವ ಟಿವಿಕೆ ಪಕ್ಷದ ನಾಯಕ ದಳಪತಿ ವಿಜಯ್ ಅವರು ಭಾನುವಾರ ಚೆನ್ನೈಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಹೊಸಪೇಟೆಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.</p>.<p>ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ದೇಶದ ಪ್ರಜಾಪ್ರಭುತ್ವ ಮತ್ತು ಸಮ್ಮಿಶ್ರ ರಾಜಕಾರಣದ ಯಶಸ್ಸಿನ ಪರವಾಗಿ ಕಾರ್ಯಕರ್ತರು ಜೈಕಾರ ಹಾಕಿದರು.</p>.<p>ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಬಣ್ಣದಮನೆ ಮಾತನಾಡಿ, ದಕ್ಷಿಣ ಭಾರತದಲ್ಲಿ ಮನುವಾದಿ ಸಿದ್ಧಾಂತದ ಬಿಜೆಪಿ ಪಕ್ಷವು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕೋಮು ಭಾವನೆ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಹೊಂದಿರುವ ಸಂವಿಧಾನ ವಿರೋಧಿ ಮನಸ್ಥಿತಿ ತುಂಬಿಕೊಂಡಿರುವುದೇ ಅದಕ್ಕೆ ಕಾರಣ ಎಂದರು.</p>.<p>ಮುಖಂಡರಾದ ತಾಳೂರು ವೀರಭದ್ರ, ಸಜ್ಜಾತ್ ಖಾನ್, ರಘು, ನಾಗರಾಜ್, ಗಿರೀಶ್, ಪ್ರಕಾಶ್, ಬಿ.ಮೌಲಾಲಿ, ಶಶಿಕುಮಾರ್, ಕಿಶೋರ್ ಕುಮಾರ್, ಕಾರ್ತಿಕ್, ಗಣೇಶ್, ಯೋಹಾನ್, ಹಮೀದ್ ಹುಸೇನ್, ಬಾಬಾ ಫಕ್ರುದ್ದೀನ್, ಆಶಾ ಬೇಗಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-25-1758694187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>