<p>ತರೀಕೆರೆ: ‘ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ, ಅದು ಸೈದ್ಧಾಂತಿಕ ಆಂದೋಲನ. ಭಾರತೀಯ ಚಿಂತನೆಗಳು ಜಗತ್ತಿನ ಕಲ್ಯಾಣವನ್ನು ಬಯಸುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.</p>.<p>ಲಿಂಗದಹಳ್ಳಿ ಬಳಿಯ ಪ್ರಕೃತಿ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಬಿಜೆಪಿ ಕರ್ನಾಟಕ ಪ್ರಶಿಕ್ಷಣ ಮಹಾಭಿಯಾನ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದ್ದು, 17 ಕೋಟಿ ಸದಸ್ಯರನ್ನು ಹೊಂದಿದೆ. 1,850ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರನ್ನು ಹೊಂದಿರುವ ಪಕ್ಷದ ಉದ್ದೇಶ ಕೇವಲ ಅಧಿಕಾರ ಸಾಧನೆಯಲ್ಲ. ಬದಲಿಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಭಾರತವನ್ನು ವಿಶ್ವಗುರುವನ್ನಾಗಿಸುವುದಾಗಿದೆ’ ಎಂದರು.</p>.<p>‘ಸರ್ವೇ ಜನಾಃ ಸುಖಿನೋ ಭವಂತು’ ಎಂಬುದು ಭಾರತೀಯ ಚಿಂತನೆಯ ಮೂಲ ಆಶಯ. ಆರ್ಥಿಕ ಬದಲಾವಣೆ ಸರ್ವವ್ಯಾಪಿಯಾಗಬೇಕು. ಪ್ರತಿಯೊಬ್ಬರೂ ಸ್ವಾವಲಂಬಿಗಳಾಗಬೇಕು. ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ತುಂಬುವ ಕೆಲಸ ಆಗಬೇಕು. ರಾಷ್ಟ್ರ ಮೊದಲು ಎಂಬ ಸಿದ್ಧಾಂತದೊಂದಿಗೆ ಸೈದ್ಧಾಂತಿಕ ಬದ್ಧತೆಯಿಂದ ಜನನಾಯಕತ್ವ ಬೆಳೆಸಬೇಕಿದೆ’ ಎಂದರು.</p>.<p>ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವವರು ಖಾಲಿ ಪಾತ್ರೆಯಂತೆ ಕುಳಿತು ವಿಚಾರಗಳನ್ನು ಮನನ ಮಾಡಿಕೊಳ್ಳಬೇಕು. ಪ್ರಸ್ತುತ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ತೊಡಗಿದ್ದು, ಜನರ ಬದುಕು ಶೂನ್ಯವಾಗಿದೆ. ರೈತರ ಆತ್ಮಹತ್ಯೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ ಎಂದು ಅವರು ಆರೋಪಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯತೆಯನ್ನು ಮೊದಲಿಗಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತದೆ. ಪ್ರಶಿಕ್ಷಣ ವರ್ಗದಲ್ಲಿ ಕಲಿಯುವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಜಿಲ್ಲಾ ಪ್ರಮುಖ ಅಶೋಕ್ ಮೂರ್ತಿ ಮಾತನಾಡಿ, ಸಂಘಟನೆಗೆ ಶಕ್ತಿ ತುಂಬುವ ಕಾರ್ಯದಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕರಾದ ಡಿ.ಎಸ್. ಸುರೇಶ್, ಎಸ್.ಎಂ. ನಾಗರಾಜ್, ಬೆಳ್ಳಿಪ್ರಕಾಶ್, ಮುಖಂಡರಾದ ಕಲ್ಮರುಡಪ್ಪ, ಪ್ರೇಂಕುಮಾರ್, ಕೆ.ಆರ್. ಧ್ರುವಕುಮಾರ್, ಕೆ.ಆರ್. ಆನಂದಪ್ಪ, ಟಿ.ಎಲ್. ರಮೇಶ್, ಟಿ.ಎಂ. ಬೋಜರಾಜ್, ರಾಜೇಶ್ವರಿ ರಾಜಶೇಖರ್, ಚೈತ್ರಶ್ರೀ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-126-464764748</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ‘ಬಿಜೆಪಿ ಕೇವಲ ರಾಜಕೀಯ ಪಕ್ಷವಲ್ಲ, ಅದು ಸೈದ್ಧಾಂತಿಕ ಆಂದೋಲನ. ಭಾರತೀಯ ಚಿಂತನೆಗಳು ಜಗತ್ತಿನ ಕಲ್ಯಾಣವನ್ನು ಬಯಸುತ್ತವೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.</p>.<p>ಲಿಂಗದಹಳ್ಳಿ ಬಳಿಯ ಪ್ರಕೃತಿ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ಬಿಜೆಪಿ ಕರ್ನಾಟಕ ಪ್ರಶಿಕ್ಷಣ ಮಹಾಭಿಯಾನ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದ್ದು, 17 ಕೋಟಿ ಸದಸ್ಯರನ್ನು ಹೊಂದಿದೆ. 1,850ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರನ್ನು ಹೊಂದಿರುವ ಪಕ್ಷದ ಉದ್ದೇಶ ಕೇವಲ ಅಧಿಕಾರ ಸಾಧನೆಯಲ್ಲ. ಬದಲಿಗೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಭಾರತವನ್ನು ವಿಶ್ವಗುರುವನ್ನಾಗಿಸುವುದಾಗಿದೆ’ ಎಂದರು.</p>.<p>‘ಸರ್ವೇ ಜನಾಃ ಸುಖಿನೋ ಭವಂತು’ ಎಂಬುದು ಭಾರತೀಯ ಚಿಂತನೆಯ ಮೂಲ ಆಶಯ. ಆರ್ಥಿಕ ಬದಲಾವಣೆ ಸರ್ವವ್ಯಾಪಿಯಾಗಬೇಕು. ಪ್ರತಿಯೊಬ್ಬರೂ ಸ್ವಾವಲಂಬಿಗಳಾಗಬೇಕು. ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ತುಂಬುವ ಕೆಲಸ ಆಗಬೇಕು. ರಾಷ್ಟ್ರ ಮೊದಲು ಎಂಬ ಸಿದ್ಧಾಂತದೊಂದಿಗೆ ಸೈದ್ಧಾಂತಿಕ ಬದ್ಧತೆಯಿಂದ ಜನನಾಯಕತ್ವ ಬೆಳೆಸಬೇಕಿದೆ’ ಎಂದರು.</p>.<p>ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವವರು ಖಾಲಿ ಪಾತ್ರೆಯಂತೆ ಕುಳಿತು ವಿಚಾರಗಳನ್ನು ಮನನ ಮಾಡಿಕೊಳ್ಳಬೇಕು. ಪ್ರಸ್ತುತ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ತೊಡಗಿದ್ದು, ಜನರ ಬದುಕು ಶೂನ್ಯವಾಗಿದೆ. ರೈತರ ಆತ್ಮಹತ್ಯೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ ಎಂದು ಅವರು ಆರೋಪಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಶೆಟ್ಟಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯತೆಯನ್ನು ಮೊದಲಿಗಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತದೆ. ಪ್ರಶಿಕ್ಷಣ ವರ್ಗದಲ್ಲಿ ಕಲಿಯುವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಜಿಲ್ಲಾ ಪ್ರಮುಖ ಅಶೋಕ್ ಮೂರ್ತಿ ಮಾತನಾಡಿ, ಸಂಘಟನೆಗೆ ಶಕ್ತಿ ತುಂಬುವ ಕಾರ್ಯದಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕರಾದ ಡಿ.ಎಸ್. ಸುರೇಶ್, ಎಸ್.ಎಂ. ನಾಗರಾಜ್, ಬೆಳ್ಳಿಪ್ರಕಾಶ್, ಮುಖಂಡರಾದ ಕಲ್ಮರುಡಪ್ಪ, ಪ್ರೇಂಕುಮಾರ್, ಕೆ.ಆರ್. ಧ್ರುವಕುಮಾರ್, ಕೆ.ಆರ್. ಆನಂದಪ್ಪ, ಟಿ.ಎಲ್. ರಮೇಶ್, ಟಿ.ಎಂ. ಬೋಜರಾಜ್, ರಾಜೇಶ್ವರಿ ರಾಜಶೇಖರ್, ಚೈತ್ರಶ್ರೀ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-126-464764748</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>