<p><strong>ಬೆಂಗಳೂರು:</strong> ‘12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಬಗ್ಗೆ ವಿವರಣೆ ನೀಡಿ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ಗೆ (ಟಿಸಿಎಸ್) ಸಮನ್ಸ್ ನೀಡಲಾಗಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಟಿಸಿಎಸ್ ಕಂಪನಿಯು 12,000 ಉದ್ಯೋಗಿಗಳನ್ನು ತೆಗೆದುಹಾಕುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಯಾವ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿ ಎಂದು ಸೂಚಿಸಿದ್ದೇವೆ’ ಎಂದರು.</p>.<p class="bodytext">‘ಟಿಸಿಎಸ್ನಂತಹ ಕಂಪನಿಗಳಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯತಿ ನೀಡಲಾಗಿದೆ. ಐದು ವರ್ಷಗಳಿಂದ ವಿನಾಯತಿಯನ್ನು ವಿಸ್ತರಿಸಿಕೊಂಡೇ ಬರಲಾಗುತ್ತಿದೆ. ಆದರೆ ಕೆಲವಾರು ಷರತ್ತುಗಳು ಅವುಗಳಿಗೂ ಅನ್ವಯವಾಗುತ್ತವೆ’ ಎಂದು ಮಾಹಿತಿ ನೀಡಿದರು.</p>.<p class="bodytext">‘ಇಂತಹ ಕಂಪನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ತೆಗೆದುಹಾಕಬೇಕು ಎಂದರೆ ನಮಗೆ ಮಾಹಿತಿ ಒದಗಿಸಬೇಕು. ಈ ನಿಯಮದ ಅಡಿಯಲ್ಲೇ ಅವರಿಂದ ವಿವರಣೆ ಕೇಳಲಾಗಿದೆ. ನಮ್ಮ ಇಲಾಖೆಯ ಅಧಿಕಾರಿಗಳು ಟಿಸಿಎಸ್ ಪ್ರತಿನಿಧಿಗಳಿಗೆ ಕರೆ ಮಾಡಿ, ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ’ ಎಂದು ತಿಳಿಸಿದರು.</p>.<p class="bodytext">10 ತಾಸು ಕೆಲಸಕ್ಕೆ ಅನುಮತಿ ಇಲ್ಲ: ‘ಟಿಸಿಎಸ್ ಸೇರಿ ಹಲವು ಐಟಿ ಕಂಪನಿಗಳು ಕೆಲಸದ ಅವಧಿಯನ್ನು 10 ತಾಸಿಗೆ ಹೆಚ್ಚಿಸಲು ಅನುಮತಿ ನೀಡಿ ಎಂದು ಮನವಿ ಸಲ್ಲಿಸಿದ್ದವು. ಕೆಲಸದ ಅವಧಿಯನ್ನು 10 ತಾಸಿಗೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಕಂಪನಿಗಳಿಗೆ ತಿಳಿಸಲಾಗಿದೆ’ ಎಂದು ಸಂತೋಷ್ ಲಾಡ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಬಗ್ಗೆ ವಿವರಣೆ ನೀಡಿ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ಗೆ (ಟಿಸಿಎಸ್) ಸಮನ್ಸ್ ನೀಡಲಾಗಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಟಿಸಿಎಸ್ ಕಂಪನಿಯು 12,000 ಉದ್ಯೋಗಿಗಳನ್ನು ತೆಗೆದುಹಾಕುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಯಾವ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿ ಎಂದು ಸೂಚಿಸಿದ್ದೇವೆ’ ಎಂದರು.</p>.<p class="bodytext">‘ಟಿಸಿಎಸ್ನಂತಹ ಕಂಪನಿಗಳಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯತಿ ನೀಡಲಾಗಿದೆ. ಐದು ವರ್ಷಗಳಿಂದ ವಿನಾಯತಿಯನ್ನು ವಿಸ್ತರಿಸಿಕೊಂಡೇ ಬರಲಾಗುತ್ತಿದೆ. ಆದರೆ ಕೆಲವಾರು ಷರತ್ತುಗಳು ಅವುಗಳಿಗೂ ಅನ್ವಯವಾಗುತ್ತವೆ’ ಎಂದು ಮಾಹಿತಿ ನೀಡಿದರು.</p>.<p class="bodytext">‘ಇಂತಹ ಕಂಪನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ತೆಗೆದುಹಾಕಬೇಕು ಎಂದರೆ ನಮಗೆ ಮಾಹಿತಿ ಒದಗಿಸಬೇಕು. ಈ ನಿಯಮದ ಅಡಿಯಲ್ಲೇ ಅವರಿಂದ ವಿವರಣೆ ಕೇಳಲಾಗಿದೆ. ನಮ್ಮ ಇಲಾಖೆಯ ಅಧಿಕಾರಿಗಳು ಟಿಸಿಎಸ್ ಪ್ರತಿನಿಧಿಗಳಿಗೆ ಕರೆ ಮಾಡಿ, ಮಾಹಿತಿ ನೀಡಿ ಎಂದು ಸೂಚಿಸಿದ್ದಾರೆ’ ಎಂದು ತಿಳಿಸಿದರು.</p>.<p class="bodytext">10 ತಾಸು ಕೆಲಸಕ್ಕೆ ಅನುಮತಿ ಇಲ್ಲ: ‘ಟಿಸಿಎಸ್ ಸೇರಿ ಹಲವು ಐಟಿ ಕಂಪನಿಗಳು ಕೆಲಸದ ಅವಧಿಯನ್ನು 10 ತಾಸಿಗೆ ಹೆಚ್ಚಿಸಲು ಅನುಮತಿ ನೀಡಿ ಎಂದು ಮನವಿ ಸಲ್ಲಿಸಿದ್ದವು. ಕೆಲಸದ ಅವಧಿಯನ್ನು 10 ತಾಸಿಗೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಕಂಪನಿಗಳಿಗೆ ತಿಳಿಸಲಾಗಿದೆ’ ಎಂದು ಸಂತೋಷ್ ಲಾಡ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>