‘ನಮ್ಮ ಪಠ್ಯಕ್ರಮ ಕಲುಷಿತವಾಗಿದ್ದು, ಸ್ವಚ್ಛಗೊಳಿಸಬೇಕಾಗಿದೆ’ ಎಂದು ಪಾರ್ಥಸಾರಥಿ ಹೇಳಿದ್ದರು. ಹಾಗೆಂದರೇನು ಎಂದು ಕೇಳಿದ್ದೆ. ಔರಂಗಜೇಬ್ ದೇಗುಲ ಕೆಡವಿದ, ಕಾಶಿಯಲ್ಲಿ ಮಸೀದಿ ಕಟ್ಟಿದ ಎಂದೆಲ್ಲಾ ಪಠ್ಯದಲ್ಲಿದೆ; ಅವನ್ನೆಲ್ಲ ತೆಗೆಯಬೇಕು. ಮಕ್ಕಳ ಮನಸ್ಸಿನಲ್ಲಿ ಅವೆಲ್ಲವನ್ನು ಬಿತ್ತುವುದು ಬೇಕಾ ಎಂದು ಕೇಳಿದ್ದರು. ಮಸೀದಿ ಎದುರಿನ ಬಸವಣ್ಣ ಮೂರ್ತಿ ಮಸೀದಿ ನೋಡುತ್ತಾ ಕುಳಿತಿದ್ದರೆ ಅಲ್ಲಿ ದೇವಸ್ಥಾನವಿತ್ತು ಎಂದೇ ಅರ್ಥ ಎಂದು ತಿಳಿಸಿದ್ದೆ. ನನ್ನ ಪ್ರಶ್ನೆಗೆ ಉತ್ತರಿಸಲು ಅವರಿಗೆ ಆಗಿರಲಿಲ್ಲ. ಅದಾಗಿ 15 ದಿನದಲ್ಲಿ ಸಮಿತಿಯಿಂದ ನನ್ನನ್ನು ತೆಗೆದು ಕಟ್ಟಾ ಕಮ್ಯುನಿಸ್ಟ್ ಒಬ್ಬರನ್ನು ಹಾಕಿದ್ದರು. ಬಳಿಕ ಪಠ್ಯಕ್ರಮ ಪರಿಷ್ಕರಿಸಲಾಯಿತು. ಹೀಗಾದಾಗ, ಯಾವ ಪಠ್ಯಕ್ರಮ ಪರಿಪೂರ್ಣ (ಐಡಿಯಲ್) ಅಥವಾ ಪ್ರಾಮಾಣಿಕ ಎನ್ನುವ ಪ್ರಶ್ನೆ ಬರುತ್ತದೆ’ ಎಂದರು.