<p><strong>ಬೆಂಗಳೂರು:</strong> ‘ಮೊಬೈಲ್ ಗೀಳಿಗೆ ಬಿದ್ದಿರುವ ಇಂದಿನ ಯುವ ಪೀಳಿಗೆಗೆ ಓದಿನ ರುಚಿ ಹತ್ತಿಸಿ, ನಾಡಿನ ಇತಿಹಾಸದ ಮಹನೀಯರ ಬಗ್ಗೆ ತಿಳಿಸುವ ಅಗತ್ಯವಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.</p>.<p>ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯುವ ಜನತೆಗೆ ಮೊಬೈಲ್ ಒಂದೇ ದುನಿಯಾ ಆಗಿದೆ. ಇದು ನಿಜಕ್ಕೂ ದುರದೃಷ್ಟಕರ. ಒಂದು ಕುಟುಂಬದಲ್ಲಿ ಪೋಷಕರು ಮತ್ತು ಮಕ್ಕಳು ಒಟ್ಟಿಗೆ ಕುಳಿತಿದ್ದರೂ ಒಬ್ಬರನ್ನೊಬ್ಬರು ಮಾತನಾಡಿಸದ ಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>‘ಮಹನೀಯರ ಜಯಂತಿಗಳನ್ನು ಆಚರಿಸಿ ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆಗೆ ಇತಿಹಾಸದ ವಾಸ್ತವ ಸ್ಥಿತಿಯನ್ನು ತಿಳಿಸಬೇಕು’ ಎಂದು ಹೇಳಿದರು.</p>.<p>‘ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚನ್ನಮ್ಮ. ಅವರು ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ ಮುಂತಾದ ಸದ್ಗುಣಗಳ ಖನಿ. ಎಂದೆಂದಿಗೂ ಕನ್ನಡದ ಹೆಣ್ಣುಮಕ್ಕಳ ಪ್ರತಿನಿಧಿ’ ಎಂದರು.</p>.<p>‘ಸಮಸಮಾಜದ ಸಾಕಾರಕ್ಕೆ ಮುನ್ನುಡಿಯನ್ನು ಅಂದೇ ಬರೆದಿದ್ದ ರಾಣಿ ಚನ್ನಮ್ಮನವರಂಥ ವೀರವನಿತೆಯರು ಉದಿಸಿದ ಕನ್ನಡ ನಾಡು ಧನ್ಯ. ಆ ವೀರಮಾತೆಯ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸದಾ ಕಾಯಕ ಮಾಡಿ, ಜೀವನ ಸಾರ್ಥಕಪಡಿಸಿಕೊಳ್ಳೋಣ’ ಎಂದರು.</p>.<p>ಮಾಜಿ ಸಚಿವೆ ರಾಣಿ ಸತೀಶ್, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ್ ಮೂರ್ತಿ, ಲೇಖಕ ಮಹಾಂತೇಶ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ದೇವಿ, ಜಂಟಿ ನಿರ್ದೇಶಕರಾದ ಬನಶಂಕರಿ ಅಂಗಡಿ, ಬಲವಂತರಾಯ ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮೊಬೈಲ್ ಗೀಳಿಗೆ ಬಿದ್ದಿರುವ ಇಂದಿನ ಯುವ ಪೀಳಿಗೆಗೆ ಓದಿನ ರುಚಿ ಹತ್ತಿಸಿ, ನಾಡಿನ ಇತಿಹಾಸದ ಮಹನೀಯರ ಬಗ್ಗೆ ತಿಳಿಸುವ ಅಗತ್ಯವಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.</p>.<p>ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯುವ ಜನತೆಗೆ ಮೊಬೈಲ್ ಒಂದೇ ದುನಿಯಾ ಆಗಿದೆ. ಇದು ನಿಜಕ್ಕೂ ದುರದೃಷ್ಟಕರ. ಒಂದು ಕುಟುಂಬದಲ್ಲಿ ಪೋಷಕರು ಮತ್ತು ಮಕ್ಕಳು ಒಟ್ಟಿಗೆ ಕುಳಿತಿದ್ದರೂ ಒಬ್ಬರನ್ನೊಬ್ಬರು ಮಾತನಾಡಿಸದ ಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>‘ಮಹನೀಯರ ಜಯಂತಿಗಳನ್ನು ಆಚರಿಸಿ ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆಗೆ ಇತಿಹಾಸದ ವಾಸ್ತವ ಸ್ಥಿತಿಯನ್ನು ತಿಳಿಸಬೇಕು’ ಎಂದು ಹೇಳಿದರು.</p>.<p>‘ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚನ್ನಮ್ಮ. ಅವರು ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ ಮುಂತಾದ ಸದ್ಗುಣಗಳ ಖನಿ. ಎಂದೆಂದಿಗೂ ಕನ್ನಡದ ಹೆಣ್ಣುಮಕ್ಕಳ ಪ್ರತಿನಿಧಿ’ ಎಂದರು.</p>.<p>‘ಸಮಸಮಾಜದ ಸಾಕಾರಕ್ಕೆ ಮುನ್ನುಡಿಯನ್ನು ಅಂದೇ ಬರೆದಿದ್ದ ರಾಣಿ ಚನ್ನಮ್ಮನವರಂಥ ವೀರವನಿತೆಯರು ಉದಿಸಿದ ಕನ್ನಡ ನಾಡು ಧನ್ಯ. ಆ ವೀರಮಾತೆಯ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸದಾ ಕಾಯಕ ಮಾಡಿ, ಜೀವನ ಸಾರ್ಥಕಪಡಿಸಿಕೊಳ್ಳೋಣ’ ಎಂದರು.</p>.<p>ಮಾಜಿ ಸಚಿವೆ ರಾಣಿ ಸತೀಶ್, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ್ ಮೂರ್ತಿ, ಲೇಖಕ ಮಹಾಂತೇಶ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ದೇವಿ, ಜಂಟಿ ನಿರ್ದೇಶಕರಾದ ಬನಶಂಕರಿ ಅಂಗಡಿ, ಬಲವಂತರಾಯ ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>