<p><strong>ಬೆಂಗಳೂರು</strong>: ಶಿಕ್ಷಕರ ವರ್ಗಾವಣೆಯೂ ಸೇರಿದಂತೆ, ಅವರ ಎಲ್ಲ ಸೇವಾ ವಿಷಯಗಳು, ಮಾಹಿತಿಗಳು ಹಾಗೂ ಸಮಸ್ಯೆಗಳಿಗೆ ಇನ್ನು ಮುಂದೆ ಬೆರಳ ತುದಿಯಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಮೊಬೈಲ್ ಆ್ಯಪ್ ‘ಶಿಕ್ಷಕ ಮಿತ್ರ’ ಅಭಿವೃದ್ಧಿಪಡಿಸಿದೆ.</p>.<p>ಶಿಕ್ಷಣಕ್ಕೆ ಸಂಬಂಧಿಸಿ ಶಿಕ್ಷಕರ, ವಿದ್ಯಾರ್ಥಿಗಳ, ಪೋಷಕರ, ಸಾರ್ವಜನಿಕರ ದೂರು– ದುಮ್ಮಾನಗಳಿಗೆ ಪರಿಹಾರ ಕಂಡುಕೊಳ್ಳಲು ಸಹಾಯವಾಣಿ ‘ಶಿಕ್ಷಣ ವಾಣಿ’ ಮತ್ತು ಇಲಾಖೆಯಆಡಳಿತ ಪ್ರಕ್ರಿಯೆಗೆ ತಾಂತ್ರಿಕ ಸ್ಪರ್ಶ ನೀಡಲು ಇ.ಎಂ (ಶಿಕ್ಷಣ ಸಚಿವ) ಡ್ಯಾಶ್ ಬೋರ್ಡ್ ‘ಪರಿವರ್ತನ’ವನ್ನು ಇಲಾಖೆ ಸಿದ್ಧಪಡಿಸಿದೆ.</p>.<p>ಸರ್ಕಾರದ ಇ– ಆಡಳಿತ ಇಲಾಖೆಯ ನೆರವಿನಲ್ಲಿ ತಯಾರಾಗಿರುವ ‘ಶಿಕ್ಷಕ ಮಿತ್ರ’ ಆ್ಯಪ್ನಲ್ಲಿ ಈಗಾಗಲೇ ರಾಜ್ಯದ 2.50 ಲಕ್ಷ ಶಿಕ್ಷಕರ ಮಾಹಿತಿಗಳನ್ನು ಅಪ್ಲೋಡ್ ಮಾಡಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ವರ್ಗಾವಣೆ ಪ್ರಕ್ರಿಯೆಗೆ ಇಲಾಖೆ ಚಾಲನೆ ನೀಡಲಿದ್ದು, ಈ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಆ ಮೂಲಕ, ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮಾಡಲು ಸಂಪೂರ್ಣ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗೆ ಇದೇ ಮೊದಲ ಬಾರಿಗೆ ಇಲಾಖೆ ಸಜ್ಜಾಗಿದೆ.</p>.<p>‘ವರ್ಗಾವಣೆ ಬಯಸಿರುವ ಶಿಕ್ಷಕರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿ<br />ಕೊಂಡು, ತಂತ್ರಾಂಶ ಚಾಲನೆಗೊಳ್ಳುತ್ತಿದ್ದಂತೆ ತಾವಿರುವ ಸ್ಥಳದಿಂದಲೇ ಅರ್ಜಿ ಸಲ್ಲಿಸಬಹುದು. ಅರ್ಜಿಗೆ ಸಂಬಂಧಿಸಿದ ಪ್ರಗತಿಯ ಮಾಹಿತಿಯನ್ನೊಳಗೊಂಡ ಸಂದೇಶ ಮೊಬೈಲ್ಗೆ ಮರು ರವಾನೆ ಆಗಲಿದೆ. ವರ್ಗಾವಣೆ ವೇಳಾಪಟ್ಟಿಗೆ ಅನುಗುಣವಾಗಿ ಆ್ಯಪ್ನಲ್ಲಿ ಮಾಹಿತಿಗಳು ಅಪ್ಡೇಟ್ ಆಗಲಿವೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>‘ಕಳೆದ ಬಾರಿ ಕಡ್ಡಾಯ ವರ್ಗಾವಣೆ ಆಗಬೇಕಾದವರು ಮತ್ತು ಹೆಚ್ಚುವರಿ ಶಿಕ್ಷಕರೆಂದು ವರ್ಗಾವಣೆ ಆಗಬೇಕಾದವರಿಗೆ ಈ ಬಾರಿ ಮೊದಲ ಆದ್ಯತೆ ಕಲ್ಪಿಸಲಾಗಿದೆ. ನಂತರ 50 ವರ್ಷ ದಾಟಿದವರಿಗೆ ವರ್ಗಾವಣೆಗೆ ವಿನಾಯಿತಿ ಸೇರಿದಂತೆ ಶಿಕ್ಷಕಸ್ನೇಹಿ ವ್ಯವಸ್ಥೆಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ’.</p>.<p>ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆಗೆ ಕರೆ ಅಥವಾ ವಾಟ್ಸ್ಆ್ಯಪ್ ಮಾಡಬಹುದು. ಟೋಲ್ ಫ್ರೀ ಸಂಖ್ಯೆಯೂ ಇರಲಿದೆ. ದೂರುಗಳ ಪ್ರತಿ ಹಂತದ ಸ್ಥಿತಿಯ ಬಗ್ಗೆಯೂ ದೂರದಾರರ ಮೊಬೈಲ್ಗೆ ಸಂದೇಶ ರವಾನೆ ಆಗಲಿದೆ.</p>.<p>ಡ್ಯಾಶ್ ಬೋರ್ಡ್ ‘ಪರಿವರ್ತನ’ದಲ್ಲಿ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಷಯಗಳ ಪರಿಶೀಲನೆ ನಡೆಯಲಿದೆ. ಇದಕ್ಕೆ ಪ್ರತಿ ವಿದ್ಯಾರ್ಥಿಯ ಸಾಧನೆಯ ಟ್ರ್ಯಾಕಿಂಗ್ ವ್ಯವಸ್ಥೆಯನ್ನೂ (ಎಸ್ಎಟಿಎಸ್) ಇಲಾಖೆ ಅಳವಡಿಸಲಿದೆ.</p>.<p>‘ತಂತ್ರಜ್ಞಾನ ಆಧಾರಿತ ಈವ್ಯವಸ್ಥೆಯಿಂದಾಗಿ ಶಿಕ್ಷಕರು ತಮ್ಮ ಅಗತ್ಯಗಳಿಗೆ ಶಾಲೆ ಬಿಟ್ಟು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯೂ ಸೇರಿದಂತೆ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ. ಇಲಾಖೆಯ ಒಟ್ಟು ಕಾರ್ಯಚಟುವಟಿಕೆಗೆ ಹೊಸ ದಿಕ್ಕು ಕಲ್ಪಿಸಲಿದೆ’ ಎನ್ನುವುದು ಅಧಿಕಾರಿಗಳ ಪ್ರತಿಪಾದನೆ.</p>.<p><strong>28ರಂದು ಚಾಲನೆ</strong></p>.<p>ಇದೇ 28ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ‘ಶಿಕ್ಷಕ ಮಿತ್ರ’ ಆ್ಯಪ್ ಮತ್ತು ಡ್ಯಾಶ್ ಬೋರ್ಡ್ಗೆ ಚಾಲನೆ ನೀಡಲಿದ್ದಾರೆ. ಅದೇ ದಿನ ಸಚಿವ ಎಸ್. ಸುರೇಶ್ಕುಮಾರ್ ಅವರು ಶಿಕ್ಷಕರ ಸದನದಲ್ಲಿ ಸಹಾಯವಾಣಿಗೆ ಚಾಲನೆ ನೀಡಲಿದ್ದಾರೆ.</p>.<p>***</p>.<p><strong>ಶಿಕ್ಷಕ ಮಿತ್ರ ಹಾಗೂ ಶಿಕ್ಷಣ ವಾಣಿ ನನ್ನ ಕನಸಿನ ಕೂಸುಗಳು. ಸಂತೃಪ್ತ ಶಿಕ್ಷಕರಷ್ಟೆ ಸಮರ್ಥ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ದೊರಕಿಸಬಲ್ಲರು. ತಂತ್ರಜ್ಞಾನಾಧಾರಿತವಾದ ಈ ಉಪಕ್ರಮಗಳುಶಿಕ್ಷಕರನ್ನು ಇನ್ನಷ್ಟು ಸಮರ್ಪಣಾ ಮನೋಭಾವದಿಂದ ತಮ್ಮ ಕೆಲಸದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಲಿವೆ, ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕಲು ಸಹಕಾರಿಯಾಗಲಿವೆ.</strong></p>.<p><strong>-ಎಸ್. ಸುರೇಶ್ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿಕ್ಷಕರ ವರ್ಗಾವಣೆಯೂ ಸೇರಿದಂತೆ, ಅವರ ಎಲ್ಲ ಸೇವಾ ವಿಷಯಗಳು, ಮಾಹಿತಿಗಳು ಹಾಗೂ ಸಮಸ್ಯೆಗಳಿಗೆ ಇನ್ನು ಮುಂದೆ ಬೆರಳ ತುದಿಯಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಮೊಬೈಲ್ ಆ್ಯಪ್ ‘ಶಿಕ್ಷಕ ಮಿತ್ರ’ ಅಭಿವೃದ್ಧಿಪಡಿಸಿದೆ.</p>.<p>ಶಿಕ್ಷಣಕ್ಕೆ ಸಂಬಂಧಿಸಿ ಶಿಕ್ಷಕರ, ವಿದ್ಯಾರ್ಥಿಗಳ, ಪೋಷಕರ, ಸಾರ್ವಜನಿಕರ ದೂರು– ದುಮ್ಮಾನಗಳಿಗೆ ಪರಿಹಾರ ಕಂಡುಕೊಳ್ಳಲು ಸಹಾಯವಾಣಿ ‘ಶಿಕ್ಷಣ ವಾಣಿ’ ಮತ್ತು ಇಲಾಖೆಯಆಡಳಿತ ಪ್ರಕ್ರಿಯೆಗೆ ತಾಂತ್ರಿಕ ಸ್ಪರ್ಶ ನೀಡಲು ಇ.ಎಂ (ಶಿಕ್ಷಣ ಸಚಿವ) ಡ್ಯಾಶ್ ಬೋರ್ಡ್ ‘ಪರಿವರ್ತನ’ವನ್ನು ಇಲಾಖೆ ಸಿದ್ಧಪಡಿಸಿದೆ.</p>.<p>ಸರ್ಕಾರದ ಇ– ಆಡಳಿತ ಇಲಾಖೆಯ ನೆರವಿನಲ್ಲಿ ತಯಾರಾಗಿರುವ ‘ಶಿಕ್ಷಕ ಮಿತ್ರ’ ಆ್ಯಪ್ನಲ್ಲಿ ಈಗಾಗಲೇ ರಾಜ್ಯದ 2.50 ಲಕ್ಷ ಶಿಕ್ಷಕರ ಮಾಹಿತಿಗಳನ್ನು ಅಪ್ಲೋಡ್ ಮಾಡಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ವರ್ಗಾವಣೆ ಪ್ರಕ್ರಿಯೆಗೆ ಇಲಾಖೆ ಚಾಲನೆ ನೀಡಲಿದ್ದು, ಈ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಆ ಮೂಲಕ, ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮಾಡಲು ಸಂಪೂರ್ಣ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗೆ ಇದೇ ಮೊದಲ ಬಾರಿಗೆ ಇಲಾಖೆ ಸಜ್ಜಾಗಿದೆ.</p>.<p>‘ವರ್ಗಾವಣೆ ಬಯಸಿರುವ ಶಿಕ್ಷಕರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿ<br />ಕೊಂಡು, ತಂತ್ರಾಂಶ ಚಾಲನೆಗೊಳ್ಳುತ್ತಿದ್ದಂತೆ ತಾವಿರುವ ಸ್ಥಳದಿಂದಲೇ ಅರ್ಜಿ ಸಲ್ಲಿಸಬಹುದು. ಅರ್ಜಿಗೆ ಸಂಬಂಧಿಸಿದ ಪ್ರಗತಿಯ ಮಾಹಿತಿಯನ್ನೊಳಗೊಂಡ ಸಂದೇಶ ಮೊಬೈಲ್ಗೆ ಮರು ರವಾನೆ ಆಗಲಿದೆ. ವರ್ಗಾವಣೆ ವೇಳಾಪಟ್ಟಿಗೆ ಅನುಗುಣವಾಗಿ ಆ್ಯಪ್ನಲ್ಲಿ ಮಾಹಿತಿಗಳು ಅಪ್ಡೇಟ್ ಆಗಲಿವೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>‘ಕಳೆದ ಬಾರಿ ಕಡ್ಡಾಯ ವರ್ಗಾವಣೆ ಆಗಬೇಕಾದವರು ಮತ್ತು ಹೆಚ್ಚುವರಿ ಶಿಕ್ಷಕರೆಂದು ವರ್ಗಾವಣೆ ಆಗಬೇಕಾದವರಿಗೆ ಈ ಬಾರಿ ಮೊದಲ ಆದ್ಯತೆ ಕಲ್ಪಿಸಲಾಗಿದೆ. ನಂತರ 50 ವರ್ಷ ದಾಟಿದವರಿಗೆ ವರ್ಗಾವಣೆಗೆ ವಿನಾಯಿತಿ ಸೇರಿದಂತೆ ಶಿಕ್ಷಕಸ್ನೇಹಿ ವ್ಯವಸ್ಥೆಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ’.</p>.<p>ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆಗೆ ಕರೆ ಅಥವಾ ವಾಟ್ಸ್ಆ್ಯಪ್ ಮಾಡಬಹುದು. ಟೋಲ್ ಫ್ರೀ ಸಂಖ್ಯೆಯೂ ಇರಲಿದೆ. ದೂರುಗಳ ಪ್ರತಿ ಹಂತದ ಸ್ಥಿತಿಯ ಬಗ್ಗೆಯೂ ದೂರದಾರರ ಮೊಬೈಲ್ಗೆ ಸಂದೇಶ ರವಾನೆ ಆಗಲಿದೆ.</p>.<p>ಡ್ಯಾಶ್ ಬೋರ್ಡ್ ‘ಪರಿವರ್ತನ’ದಲ್ಲಿ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಷಯಗಳ ಪರಿಶೀಲನೆ ನಡೆಯಲಿದೆ. ಇದಕ್ಕೆ ಪ್ರತಿ ವಿದ್ಯಾರ್ಥಿಯ ಸಾಧನೆಯ ಟ್ರ್ಯಾಕಿಂಗ್ ವ್ಯವಸ್ಥೆಯನ್ನೂ (ಎಸ್ಎಟಿಎಸ್) ಇಲಾಖೆ ಅಳವಡಿಸಲಿದೆ.</p>.<p>‘ತಂತ್ರಜ್ಞಾನ ಆಧಾರಿತ ಈವ್ಯವಸ್ಥೆಯಿಂದಾಗಿ ಶಿಕ್ಷಕರು ತಮ್ಮ ಅಗತ್ಯಗಳಿಗೆ ಶಾಲೆ ಬಿಟ್ಟು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯೂ ಸೇರಿದಂತೆ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ. ಇಲಾಖೆಯ ಒಟ್ಟು ಕಾರ್ಯಚಟುವಟಿಕೆಗೆ ಹೊಸ ದಿಕ್ಕು ಕಲ್ಪಿಸಲಿದೆ’ ಎನ್ನುವುದು ಅಧಿಕಾರಿಗಳ ಪ್ರತಿಪಾದನೆ.</p>.<p><strong>28ರಂದು ಚಾಲನೆ</strong></p>.<p>ಇದೇ 28ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ‘ಶಿಕ್ಷಕ ಮಿತ್ರ’ ಆ್ಯಪ್ ಮತ್ತು ಡ್ಯಾಶ್ ಬೋರ್ಡ್ಗೆ ಚಾಲನೆ ನೀಡಲಿದ್ದಾರೆ. ಅದೇ ದಿನ ಸಚಿವ ಎಸ್. ಸುರೇಶ್ಕುಮಾರ್ ಅವರು ಶಿಕ್ಷಕರ ಸದನದಲ್ಲಿ ಸಹಾಯವಾಣಿಗೆ ಚಾಲನೆ ನೀಡಲಿದ್ದಾರೆ.</p>.<p>***</p>.<p><strong>ಶಿಕ್ಷಕ ಮಿತ್ರ ಹಾಗೂ ಶಿಕ್ಷಣ ವಾಣಿ ನನ್ನ ಕನಸಿನ ಕೂಸುಗಳು. ಸಂತೃಪ್ತ ಶಿಕ್ಷಕರಷ್ಟೆ ಸಮರ್ಥ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ದೊರಕಿಸಬಲ್ಲರು. ತಂತ್ರಜ್ಞಾನಾಧಾರಿತವಾದ ಈ ಉಪಕ್ರಮಗಳುಶಿಕ್ಷಕರನ್ನು ಇನ್ನಷ್ಟು ಸಮರ್ಪಣಾ ಮನೋಭಾವದಿಂದ ತಮ್ಮ ಕೆಲಸದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಲಿವೆ, ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕಲು ಸಹಕಾರಿಯಾಗಲಿವೆ.</strong></p>.<p><strong>-ಎಸ್. ಸುರೇಶ್ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>