<p><strong>ಹೂವಿನಹಡಗಲಿ (ಬಳ್ಳಾರಿ): </strong>‘ಪಕ್ಕೆಲುಬು’ ಪದ ಉಚ್ಛರಿಸಲಾಗದ ಬಾಲಕನೊಬ್ಬನಿಗೆ ಥಳಿಸಿ, ಅದರ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ತಾಲ್ಲೂಕಿನ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಟಿ.ಚಂದ್ರಶೇಖರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.</p>.<p>‘ಶಾಲಾ ಸಮಯದಲ್ಲಿ ಮೊಬೈಲ್ ಫೋನ್ ಬಳಸಬಾರದೆನ್ನುವ ನಿಯಮವೂ ಉಲ್ಲಂಘನೆಯಾಗಿರುವ ಕಾರಣ ಮುಖ್ಯ ಶಿಕ್ಷಕರಿಗೂ ನೋಟಿಸ್ ಜಾರಿ ಮಾಡಲಾಗುವುದು’ ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ ತಿಳಿಸಿದ್ದಾರೆ.</p>.<p>2ನೇ ತರಗತಿ ವಿದ್ಯಾರ್ಥಿಗೆ ‘ಪಕ್ಕೆಲುಬು’ ಪದ ಹೇಳಲು ಶಿಕ್ಷಕ ಒತ್ತಾಯಿಸುವ ವಿಡಿಯೊ ಇದಾಗಿತ್ತು. ಎಷ್ಟೇ ಪ್ರಯತ್ನಿಸಿದರೂ ಆ ಬಾಲಕ, ಹಿಂದುಮುಂದಾಗಿ ಹೇಳುತ್ತಿದ್ದ. ತಾಳ್ಮೆ ಕಳೆದುಕೊಂಡ ಶಿಕ್ಷಕ ವಿದ್ಯಾರ್ಥಿಯನ್ನು ಅವಾಚ್ಯವಾಗಿ ನಿಂದಿಸುತ್ತಲೇ ‘ಪಕ್ಕೆಲುಬು’ ಪದ ಹೇಳುವಂತೆ ಪೀಡಿಸುತ್ತಾರೆ. ಗಾಬರಿಗೊಂಡ ವಿದ್ಯಾರ್ಥಿ ಸರಿಯಾಗಿ ಹೇಳಲಾಗದೇ ಕಣ್ಣೀರಿಡುವ ವಿಡಿಯೊ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.</p>.<p>ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಅವರಿದ್ದ ವಾಟ್ಸ್ ಆ್ಯಪ್ ಗ್ರೂಪ್ಗೂ ಈ ವಿಡಿಯೊ ತಲುಪಿತ್ತು. ಶಿಕ್ಷಕರ ಪತ್ತೆಗಾಗಿ ಸೈಬರ್ ಠಾಣೆಗೆ ದೂರು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ (ಬಳ್ಳಾರಿ): </strong>‘ಪಕ್ಕೆಲುಬು’ ಪದ ಉಚ್ಛರಿಸಲಾಗದ ಬಾಲಕನೊಬ್ಬನಿಗೆ ಥಳಿಸಿ, ಅದರ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ತಾಲ್ಲೂಕಿನ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಟಿ.ಚಂದ್ರಶೇಖರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.</p>.<p>‘ಶಾಲಾ ಸಮಯದಲ್ಲಿ ಮೊಬೈಲ್ ಫೋನ್ ಬಳಸಬಾರದೆನ್ನುವ ನಿಯಮವೂ ಉಲ್ಲಂಘನೆಯಾಗಿರುವ ಕಾರಣ ಮುಖ್ಯ ಶಿಕ್ಷಕರಿಗೂ ನೋಟಿಸ್ ಜಾರಿ ಮಾಡಲಾಗುವುದು’ ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ ತಿಳಿಸಿದ್ದಾರೆ.</p>.<p>2ನೇ ತರಗತಿ ವಿದ್ಯಾರ್ಥಿಗೆ ‘ಪಕ್ಕೆಲುಬು’ ಪದ ಹೇಳಲು ಶಿಕ್ಷಕ ಒತ್ತಾಯಿಸುವ ವಿಡಿಯೊ ಇದಾಗಿತ್ತು. ಎಷ್ಟೇ ಪ್ರಯತ್ನಿಸಿದರೂ ಆ ಬಾಲಕ, ಹಿಂದುಮುಂದಾಗಿ ಹೇಳುತ್ತಿದ್ದ. ತಾಳ್ಮೆ ಕಳೆದುಕೊಂಡ ಶಿಕ್ಷಕ ವಿದ್ಯಾರ್ಥಿಯನ್ನು ಅವಾಚ್ಯವಾಗಿ ನಿಂದಿಸುತ್ತಲೇ ‘ಪಕ್ಕೆಲುಬು’ ಪದ ಹೇಳುವಂತೆ ಪೀಡಿಸುತ್ತಾರೆ. ಗಾಬರಿಗೊಂಡ ವಿದ್ಯಾರ್ಥಿ ಸರಿಯಾಗಿ ಹೇಳಲಾಗದೇ ಕಣ್ಣೀರಿಡುವ ವಿಡಿಯೊ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.</p>.<p>ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಅವರಿದ್ದ ವಾಟ್ಸ್ ಆ್ಯಪ್ ಗ್ರೂಪ್ಗೂ ಈ ವಿಡಿಯೊ ತಲುಪಿತ್ತು. ಶಿಕ್ಷಕರ ಪತ್ತೆಗಾಗಿ ಸೈಬರ್ ಠಾಣೆಗೆ ದೂರು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>