ವಿಧಾನ ಪರಿಷತ್ನಲ್ಲಿ ಗುರುವಾರ ಗಮನ ಸೆಳೆಯುವ ಸೂಚನೆ ಮಂಡಿಸಿದ ಜೆಡಿಎಸ್ನ ಮರಿತಿಬ್ಬೇಗೌಡ, 2015ರ ಡಿಸೆಂಬರ್ 31ರ ನಂತರ ಖಾಲಿಯಾದ ಹುದ್ದೆಗಳ ಭರ್ತಿಗೆ ವಿಧಿಸಿರುವ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿದರು. ಬಿಜೆಪಿಯ ವೈ.ಎ. ನಾರಾಯಣಸ್ವಾಮಿ, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ, ಜೆಡಿಎಸ್ನ ಎಸ್.ಎಲ್. ಭೋಜೇಗೌಡ ಈ ಬೇಡಿಕೆಗೆ ದನಿಗೂಡಿಸಿದರು.