<p><strong>ಬೀದರ್:</strong> ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಈಚೆಗೆ ನಡೆದ 2019-20ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆ ಹಾಡುವಾಗ ಮೂತ್ರ ವಿಸರ್ಜನೆ ಮಾಡಿ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.</p>.<p>ಔರಾದ್ ತಾಲ್ಲೂಕಿನ ಹಿಪ್ಪಳಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೀರೇಶ ಕಡಗಾಂವೆ ಹಾಗೂ ಗಂಗಾರಾಮ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ ರಾಠೋಡ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ಎಚ್.ಸಿ. ಸೇವೆಯಿಂದ ಅಮಾನತು ಗೊಳಿಸಿದ್ದಾರೆ.</p>.<p>ಫೆಬ್ರುವರಿ 12 ರಂದು ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ತಕ್ಷಣವೇ ಶಿಕ್ಷಕರನ್ನು ಅಮಾನತುಗೊಳಿಸಲು ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಈಚೆಗೆ ನಡೆದ 2019-20ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆ ಹಾಡುವಾಗ ಮೂತ್ರ ವಿಸರ್ಜನೆ ಮಾಡಿ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.</p>.<p>ಔರಾದ್ ತಾಲ್ಲೂಕಿನ ಹಿಪ್ಪಳಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೀರೇಶ ಕಡಗಾಂವೆ ಹಾಗೂ ಗಂಗಾರಾಮ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ ರಾಠೋಡ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ಎಚ್.ಸಿ. ಸೇವೆಯಿಂದ ಅಮಾನತು ಗೊಳಿಸಿದ್ದಾರೆ.</p>.<p>ಫೆಬ್ರುವರಿ 12 ರಂದು ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ತಕ್ಷಣವೇ ಶಿಕ್ಷಕರನ್ನು ಅಮಾನತುಗೊಳಿಸಲು ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>