ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗಿಲ್ಲ.ಎರಡು ವರ್ಷಗಳ ಹಿಂದೆ ವರ್ಗಾವಣೆಗಾಗಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೆಲವರು ನ್ಯಾಯಾಲಯ ಮೆಟ್ಟಿಲು ಹತ್ತಿದ ಕಾರಣ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಲಾಯಿತು. 2018 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜಕೀಯ ಅಸ್ಥಿರ ಸ್ಥಿತಿ ನಿರ್ಮಾಣ ಆಗಿದ್ದರಿಂದ ವರ್ಗಾವಣೆ ನಡೆದಿರಲಿಲ್ಲ. ಈ ಬಾರಿ ಶಿಕ್ಷಕರ ವರ್ಗಾವಣೆ ಮಾಡಿಯೇ ತೀರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶಿಕ್ಷಕರಿಗೆ ಭರವಸೆ ನೀಡಿದ್ದಾರೆ.