2020–21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಸಂದರ್ಭದಲ್ಲಿ 2019–20ರ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ‘ಶಿಕ್ಷೆ’ಗೆ ಒಳಗಾದ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡುವ ಪ್ರಸ್ತಾವ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020’ಯಲ್ಲಿ ಆಗಿರಲಿಲ್ಲ. ಆದರೆ, ಕಳೆದ ನ. 11ರಂದು ಹೊರಡಿಸಿರುವ ವರ್ಗಾವಣೆ ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರ ಈ ಅವಕಾಶ ಕಲ್ಪಿಸಿತ್ತು. ಆದರೆ ಅದಕ್ಕೆ ಕೆಎಟಿ ಮತ್ತು ಹೈಕೋರ್ಟ್ ತಡೆ ನೀಡಿತ್ತು.