<p><strong>ಬೆಂಗಳೂರು:</strong> ತಂತ್ರಜ್ಞಾನ ಶೃಂಗಸಭೆ–25ರಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏಕರೂಪ್ ಕೌರ್ ಹೇಳಿದರು.</p>.<p>ಪಾಲುದಾರ ದೇಶಗಳು ಮತ್ತು ಅಂತರರಾಷ್ಟ್ರೀಯ ವಾಣಿಜ್ಯ ಅಭಿಯಾನದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, 2024ರ ತಂತ್ರಜ್ಞಾನ ಶೃಂಗಸಭೆಯಲ್ಲಿ 45 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಬಾರಿ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಲು ಆಹ್ವಾನ ನೀಡಲಾಗಿದೆ. ಬೆಂಗಳೂರು ಹೊರವಲಯದಲ್ಲಿ ಉದಯೋನ್ಮುಖ ತಂತ್ರಜ್ಞಾನ ಸಮುಚ್ಚಯಗಳ ಸ್ಥಾಪನೆಗೆ ಪ್ರೋತ್ಸಾಹ ಮೂಲಸೌಕರ್ಯ ಅಭಿವೃದ್ಧಿ, ಪ್ರತಿಭೆಯ ಲಭ್ಯತೆ ಮತ್ತು ಉತ್ತಮ ಮಾರುಕಟ್ಟೆಗೆ ಉತ್ತೇಜನ ನೀಡುವ ಜತೆಗೆ, ಕ್ರಿಯಾತ್ಮಕ ಪರಿಸರ ವ್ಯವಸ್ಥೆ ರೂಪಿಸಲಾಗುವುದು ಎಂದರು.</p>.<p>ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ ಜತೆ ಕರ್ನಾಟಕ ಸಹಯೋಗವನ್ನು ಹೆಚ್ಚಿಸಲಾಗಿದೆ. ಪಾಲುದಾರಿಕೆಯು ಯುಎಸ್ಐಬಿಸಿ ಸದಸ್ಯ ಕಂಪನಿಗಳು ಹಾಗೂ ಸರ್ಕಾರದ ನಡುವಿನ ಸಂವಹನ ಮಾರ್ಗಗಳು ರಾಜ್ಯದ ಉದ್ಯಮಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸುತ್ತಿವೆ. ಕರ್ನಾಟಕ ಏಷ್ಯಾದ ತಂತ್ರಜ್ಞಾನದ ಹಬ್ ಆಗಿ ರೂಪುಗೊಳ್ಳುತ್ತಿದೆ ಎಂದು ಹೇಳಿದರು.</p>.<p>ವಿಶ್ವದರ್ಜೆ ಮೂಲಸೌಕರ್ಯ, ವಿಸ್ತಾರವಾದ ಪ್ರದರ್ಶನ ಸಭಾಂಗಣಗಳು ಮತ್ತು ಅತ್ಯಾಧುನಿಕ ಸಮ್ಮೇಳನ ಸೌಲಭ್ಯಗಳನ್ನು ಈ ಬಾರಿಯ ತಂತ್ರಜ್ಞಾನ ಶೃಂಗಸಭೆ ಒಳಗೊಂಡಿರುತ್ತದೆ. 20 ಸಾವಿರ ನವೋದ್ಯಮ ಕಂಪನಿಗಳ ಸಂಸ್ಥಾಪಕರು, ಒಂದು ಸಾವಿರ ಹೂಡಿಕೆದಾರರು, ವಿವಿಧ ಕಂಪನಿಗಳ 15 ಸಾವಿರ ಪ್ರತಿನಿಧಿಗಳು, ಒಂದು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. </p>.<p>ಕೆಐಟಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ್, ಉಪ ಕಾರ್ಯದರ್ಶಿ ದಲ್ಜೀತ್ ಕುಮಾರ್ ಹಾಗೂ 20ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಂತ್ರಜ್ಞಾನ ಶೃಂಗಸಭೆ–25ರಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏಕರೂಪ್ ಕೌರ್ ಹೇಳಿದರು.</p>.<p>ಪಾಲುದಾರ ದೇಶಗಳು ಮತ್ತು ಅಂತರರಾಷ್ಟ್ರೀಯ ವಾಣಿಜ್ಯ ಅಭಿಯಾನದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, 2024ರ ತಂತ್ರಜ್ಞಾನ ಶೃಂಗಸಭೆಯಲ್ಲಿ 45 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಬಾರಿ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಲು ಆಹ್ವಾನ ನೀಡಲಾಗಿದೆ. ಬೆಂಗಳೂರು ಹೊರವಲಯದಲ್ಲಿ ಉದಯೋನ್ಮುಖ ತಂತ್ರಜ್ಞಾನ ಸಮುಚ್ಚಯಗಳ ಸ್ಥಾಪನೆಗೆ ಪ್ರೋತ್ಸಾಹ ಮೂಲಸೌಕರ್ಯ ಅಭಿವೃದ್ಧಿ, ಪ್ರತಿಭೆಯ ಲಭ್ಯತೆ ಮತ್ತು ಉತ್ತಮ ಮಾರುಕಟ್ಟೆಗೆ ಉತ್ತೇಜನ ನೀಡುವ ಜತೆಗೆ, ಕ್ರಿಯಾತ್ಮಕ ಪರಿಸರ ವ್ಯವಸ್ಥೆ ರೂಪಿಸಲಾಗುವುದು ಎಂದರು.</p>.<p>ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ ಜತೆ ಕರ್ನಾಟಕ ಸಹಯೋಗವನ್ನು ಹೆಚ್ಚಿಸಲಾಗಿದೆ. ಪಾಲುದಾರಿಕೆಯು ಯುಎಸ್ಐಬಿಸಿ ಸದಸ್ಯ ಕಂಪನಿಗಳು ಹಾಗೂ ಸರ್ಕಾರದ ನಡುವಿನ ಸಂವಹನ ಮಾರ್ಗಗಳು ರಾಜ್ಯದ ಉದ್ಯಮಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸುತ್ತಿವೆ. ಕರ್ನಾಟಕ ಏಷ್ಯಾದ ತಂತ್ರಜ್ಞಾನದ ಹಬ್ ಆಗಿ ರೂಪುಗೊಳ್ಳುತ್ತಿದೆ ಎಂದು ಹೇಳಿದರು.</p>.<p>ವಿಶ್ವದರ್ಜೆ ಮೂಲಸೌಕರ್ಯ, ವಿಸ್ತಾರವಾದ ಪ್ರದರ್ಶನ ಸಭಾಂಗಣಗಳು ಮತ್ತು ಅತ್ಯಾಧುನಿಕ ಸಮ್ಮೇಳನ ಸೌಲಭ್ಯಗಳನ್ನು ಈ ಬಾರಿಯ ತಂತ್ರಜ್ಞಾನ ಶೃಂಗಸಭೆ ಒಳಗೊಂಡಿರುತ್ತದೆ. 20 ಸಾವಿರ ನವೋದ್ಯಮ ಕಂಪನಿಗಳ ಸಂಸ್ಥಾಪಕರು, ಒಂದು ಸಾವಿರ ಹೂಡಿಕೆದಾರರು, ವಿವಿಧ ಕಂಪನಿಗಳ 15 ಸಾವಿರ ಪ್ರತಿನಿಧಿಗಳು, ಒಂದು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. </p>.<p>ಕೆಐಟಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ್, ಉಪ ಕಾರ್ಯದರ್ಶಿ ದಲ್ಜೀತ್ ಕುಮಾರ್ ಹಾಗೂ 20ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>