<p><strong>ಬೆಂಗಳೂರು:</strong> ಮಾನವ–ವನ್ಯಜೀವಿ ಸಂಘರ್ಷ ತಡೆಗಾಗಿ ಅರಣ್ಯ ಇಲಾಖೆಯು ಅತ್ಯಾಧುನಿಕ ಸವಲತ್ತುಗಳಿಂದ ಕೂಡಿರುವ ರಾಜ್ಯ ಮಟ್ಟದ ನೂತನ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ ಏಳು ವಿಭಾಗೀಯ ಕೇಂದ್ರಗಳನ್ನು ಆರಂಭಿಸಿದೆ.</p>.<p>ಅರಣ್ಯ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದ ವೇಳೆ, ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಈ ಕೇಂದ್ರಗಳಿಗೆ ಚಾಲನೆ ನೀಡಿದರು.</p>.<p>‘ಮಾನವ–ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಿಂತ, ಅಂತಹ ಸ್ಥಿತಿ ತಲೆದೋರುವುದನ್ನು ತಡೆಯುವುದೇ ಹೆಚ್ಚು ಪರಿಣಾಮಕಾರಿ. ತಡೆ ಮತ್ತು ನಿಯಂತ್ರಣ ಕ್ರಮಗಳನ್ನು ಗಮನದಲ್ಲಿ ಇರಿಸಿಕೊಂಡೇ ಈ ಕೇಂದ್ರಗಳನ್ನು ರೂಪಿಸಲಾಗಿದೆ. ಇದಕ್ಕಾಗಿ ಕೃತಕ ಬುದ್ಧಿಮತ್ತೆ, ಅತ್ಯಾಧುನಿಕ ಕ್ಯಾಮೆರಾ, ಜಿಪಿಎಸ್ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದರು.</p>.<p>‘ಅರಣ್ಯ ಪ್ರದೇಶದ ಹೊರಗೆ ಕಾಡುಪ್ರಾಣಿಗಳು ಓಡಾಡುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ, ಅವರು ಅರಣ್ಯ ಇಲಾಖೆ ಸಹಾಯವಾಣಿ 1926ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಆ ಕರೆಯ ಮಾಹಿತಿಯು ರಾಜ್ಯಮಟ್ಟದ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರಕ್ಕೆ ಹೋಗಲಿದೆ. ಅಲ್ಲಿಂದ ಸಂಬಂಧಿತ ವಿಭಾಗೀಯ ಅಥವಾ ವಲಯ ಮಟ್ಟದ ನಿಯಂತ್ರಣ ಕೊಠಡಿಗೆ ನಿರ್ದೇಶನ ರವಾನೆಯಾಗಲಿದೆ’ ಎಂದು ವಿವರಿಸಿದರು.</p>.<p>‘ಆನಂತರ, ವನ್ಯಜೀವಿಗಳನ್ನು ಅರಣ್ಯ ಪ್ರದೇಶಕ್ಕೆ ಮರಳಿ ಕಳುಹಿಸುವ, ಮಾನವ–ವನ್ಯಜೀವಿ ಸಂಘರ್ಷ ಉಂಟಾಗುವುದನ್ನು ತಡೆಯುವಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಸಮಸ್ಯೆ ಬಗೆಹರಿಯುವವರೆಗೂ ರಾಜ್ಯಮಟ್ಟದ ಕೇಂದ್ರದ ಅಧಿಕಾರಿಗಳು, ನಿಗಾ ಇರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p><strong>11 ವಿಭಾಗೀಯ ಕೇಂದ್ರಗಳು:</strong> ರಾಜ್ಯದಾದ್ಯಂತ ಈಚೆಗಷ್ಟೇ ವಿಭಾಗೀಯ ಮಟ್ಟದ ನಾಲ್ಕು ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರಗಳನ್ನು ಆರಂಭಿಸಲಾಗಿತ್ತು. ಈಗ ಇನ್ನೂ ಏಳು ವಿಭಾಗೀಯ ಮಟ್ಟದ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಅವುಗಳ ಸಂಖ್ಯೆ 11ರಷ್ಟಾಗಿದೆ. ಈ ಹನ್ನೊಂದೂ ಕೇಂದ್ರಗಳು ಬೆಂಗಳೂರಿನ ಅರಣ್ಯ ಭವನದಲ್ಲಿರುವ ರಾಜ್ಯಮಟ್ಟದ ಕೇಂದ್ರದ ನಿರ್ದೇಶನದೊಂದಿಗೆ ಕಾರ್ಯನಿರ್ವಹಿಸಲಿವೆ. 1926 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ, ಸಂಬಂಧಪಟ್ಟ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ.</p>.<div><blockquote>ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು, ಮಾನವ–ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವುದು ಈ ಉಪಕ್ರಮದ ಉದ್ದೇಶ</blockquote><span class="attribution">ಈಶ್ವರ ಬಿ.ಖಂಡ್ರೆ, ಅರಣ್ಯ ಸಚಿವ</span></div>.<p><strong>1926ಗೆ ಕರೆ ಮಾಡಿದರೆ ಸಾಕು...</strong></p><p>l ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ, ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ಹೋಗಲಿದೆ</p><p>l ಎಐ ಕ್ಯಾಮೆರಾ ಮತ್ತು ಏರಿಯಲ್ ಚಿತ್ರಗಳ ಆಧಾರದಲ್ಲಿ ವನ್ಯಜೀವಿಗಳ ಮೇಲೆ ಈ ಕೇಂದ್ರಗಳು ನಿಗಾ ಇರಿಸಲಿವೆ. ಸಿಬ್ಬಂದಿಯ ಕಾರ್ಯಾಚರಣೆ ವೇಳೆಯೂ ಈ ಚಿತ್ರಗಳನ್ನು ಬಳಸಿಕೊಳ್ಳಲಾಗುತ್ತದೆ</p><p>l ರೇಡಿಯೊ ಕಾಲರ್ ಅಳವಡಿಸಿದ ಆನೆಗಳ ಮೇಲೆ ನಿಗಾ ಇರಿಸಲಿವೆ. ಅವುಗಳ ಚಲನವಲನ ಕುರಿತಾಗಿ ಸಂಬಂಧಿತ ಅರಣ್ಯಾಧಿಕಾರಿಗಳಿಗೆ ಮಾಹಿತಿ ರವಾನೆಯಾಗಲಿದೆ</p><p>l ಮಾನವ–ವನ್ಯಜೀವಿ ಸಂಘರ್ಷದ ಸಾಧ್ಯತೆ ಇರುವ ಪ್ರದೇಶಗಳ ಮೇಲೆ ಸದಾ ನಿಗಾ ಇರಿಸಲಾಗಿರುತ್ತದೆ. ಅಗತ್ಯ ಎದುರಾದಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ರಚಿಸಲಾಗುತ್ತದೆ</p><p>l ಜಿಪಿಎಸ್ ಆಧಾರಿತ ಗಸ್ತು ಪಡೆಗಳ ಸಂಪರ್ಕದಲ್ಲಿದ್ದು,<br>ಸಾರ್ವಜನಿಕರಿಂದ ದೂರು ಬಂದೊಡನೆ ಗಸ್ತು ಪಡೆಗಳಿಗೆ ನಿರ್ದೇಶನ ಹೋಗಲಿದೆ. ಗಸ್ತು ಪಡೆಗಳಿಗೆ ಎಐ ಕ್ಯಾಮೆರಾ ಆಧಾರಿತ ಚಿತ್ರ ಮತ್ತು ಮಾಹಿತಿಗಳನ್ನು ಒದಗಿಸಲಾಗುತ್ತದೆ</p><p>l ಸೌರ ಬೇಲಿ, ರೈಲು ಕಂಬಿ ಬೇಲಿ, ಆನೆ ತಡೆ ಕಂದಕಗಳ ಮೇಲೆ ಈ ಕೇಂದ್ರಗಳು ನಿಗಾ ಇರಿಸಿರಲಿವೆ. ಇವುಗಳ ಬಳಿ ವನ್ಯಜೀವಿಗಳು ಸುಳಿದಾಗ ಸಂಬಂಧಿತ ವಲಯ ಅರಣ್ಯಾಧಿಕಾರಿ ಮತ್ತು ತಂಡಕ್ಕೆ ಮಾಹಿತಿ ರವಾನೆಯಾಗಲಿದೆ</p><p>l ಮೇಲಿನ ಎಲ್ಲ ಸಂದರ್ಭದಲ್ಲೂ ಸಂಬಂಧಿತ ಪ್ರದೇಶದ ಸಾರ್ವಜನಿಕರಿಗೆ ಮಾಹಿತಿ ಮತ್ತು ಮುನ್ನೆಚ್ಚರಿಕೆ ಸೂಚನೆಗಳು ರವಾನೆಯಾಗಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾನವ–ವನ್ಯಜೀವಿ ಸಂಘರ್ಷ ತಡೆಗಾಗಿ ಅರಣ್ಯ ಇಲಾಖೆಯು ಅತ್ಯಾಧುನಿಕ ಸವಲತ್ತುಗಳಿಂದ ಕೂಡಿರುವ ರಾಜ್ಯ ಮಟ್ಟದ ನೂತನ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ ಏಳು ವಿಭಾಗೀಯ ಕೇಂದ್ರಗಳನ್ನು ಆರಂಭಿಸಿದೆ.</p>.<p>ಅರಣ್ಯ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದ ವೇಳೆ, ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಈ ಕೇಂದ್ರಗಳಿಗೆ ಚಾಲನೆ ನೀಡಿದರು.</p>.<p>‘ಮಾನವ–ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಿಂತ, ಅಂತಹ ಸ್ಥಿತಿ ತಲೆದೋರುವುದನ್ನು ತಡೆಯುವುದೇ ಹೆಚ್ಚು ಪರಿಣಾಮಕಾರಿ. ತಡೆ ಮತ್ತು ನಿಯಂತ್ರಣ ಕ್ರಮಗಳನ್ನು ಗಮನದಲ್ಲಿ ಇರಿಸಿಕೊಂಡೇ ಈ ಕೇಂದ್ರಗಳನ್ನು ರೂಪಿಸಲಾಗಿದೆ. ಇದಕ್ಕಾಗಿ ಕೃತಕ ಬುದ್ಧಿಮತ್ತೆ, ಅತ್ಯಾಧುನಿಕ ಕ್ಯಾಮೆರಾ, ಜಿಪಿಎಸ್ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದರು.</p>.<p>‘ಅರಣ್ಯ ಪ್ರದೇಶದ ಹೊರಗೆ ಕಾಡುಪ್ರಾಣಿಗಳು ಓಡಾಡುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ, ಅವರು ಅರಣ್ಯ ಇಲಾಖೆ ಸಹಾಯವಾಣಿ 1926ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಆ ಕರೆಯ ಮಾಹಿತಿಯು ರಾಜ್ಯಮಟ್ಟದ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರಕ್ಕೆ ಹೋಗಲಿದೆ. ಅಲ್ಲಿಂದ ಸಂಬಂಧಿತ ವಿಭಾಗೀಯ ಅಥವಾ ವಲಯ ಮಟ್ಟದ ನಿಯಂತ್ರಣ ಕೊಠಡಿಗೆ ನಿರ್ದೇಶನ ರವಾನೆಯಾಗಲಿದೆ’ ಎಂದು ವಿವರಿಸಿದರು.</p>.<p>‘ಆನಂತರ, ವನ್ಯಜೀವಿಗಳನ್ನು ಅರಣ್ಯ ಪ್ರದೇಶಕ್ಕೆ ಮರಳಿ ಕಳುಹಿಸುವ, ಮಾನವ–ವನ್ಯಜೀವಿ ಸಂಘರ್ಷ ಉಂಟಾಗುವುದನ್ನು ತಡೆಯುವಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಸಮಸ್ಯೆ ಬಗೆಹರಿಯುವವರೆಗೂ ರಾಜ್ಯಮಟ್ಟದ ಕೇಂದ್ರದ ಅಧಿಕಾರಿಗಳು, ನಿಗಾ ಇರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p><strong>11 ವಿಭಾಗೀಯ ಕೇಂದ್ರಗಳು:</strong> ರಾಜ್ಯದಾದ್ಯಂತ ಈಚೆಗಷ್ಟೇ ವಿಭಾಗೀಯ ಮಟ್ಟದ ನಾಲ್ಕು ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರಗಳನ್ನು ಆರಂಭಿಸಲಾಗಿತ್ತು. ಈಗ ಇನ್ನೂ ಏಳು ವಿಭಾಗೀಯ ಮಟ್ಟದ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಅವುಗಳ ಸಂಖ್ಯೆ 11ರಷ್ಟಾಗಿದೆ. ಈ ಹನ್ನೊಂದೂ ಕೇಂದ್ರಗಳು ಬೆಂಗಳೂರಿನ ಅರಣ್ಯ ಭವನದಲ್ಲಿರುವ ರಾಜ್ಯಮಟ್ಟದ ಕೇಂದ್ರದ ನಿರ್ದೇಶನದೊಂದಿಗೆ ಕಾರ್ಯನಿರ್ವಹಿಸಲಿವೆ. 1926 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿದರೆ, ಸಂಬಂಧಪಟ್ಟ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ.</p>.<div><blockquote>ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು, ಮಾನವ–ವನ್ಯಜೀವಿ ಸಂಘರ್ಷವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವುದು ಈ ಉಪಕ್ರಮದ ಉದ್ದೇಶ</blockquote><span class="attribution">ಈಶ್ವರ ಬಿ.ಖಂಡ್ರೆ, ಅರಣ್ಯ ಸಚಿವ</span></div>.<p><strong>1926ಗೆ ಕರೆ ಮಾಡಿದರೆ ಸಾಕು...</strong></p><p>l ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ, ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ಹೋಗಲಿದೆ</p><p>l ಎಐ ಕ್ಯಾಮೆರಾ ಮತ್ತು ಏರಿಯಲ್ ಚಿತ್ರಗಳ ಆಧಾರದಲ್ಲಿ ವನ್ಯಜೀವಿಗಳ ಮೇಲೆ ಈ ಕೇಂದ್ರಗಳು ನಿಗಾ ಇರಿಸಲಿವೆ. ಸಿಬ್ಬಂದಿಯ ಕಾರ್ಯಾಚರಣೆ ವೇಳೆಯೂ ಈ ಚಿತ್ರಗಳನ್ನು ಬಳಸಿಕೊಳ್ಳಲಾಗುತ್ತದೆ</p><p>l ರೇಡಿಯೊ ಕಾಲರ್ ಅಳವಡಿಸಿದ ಆನೆಗಳ ಮೇಲೆ ನಿಗಾ ಇರಿಸಲಿವೆ. ಅವುಗಳ ಚಲನವಲನ ಕುರಿತಾಗಿ ಸಂಬಂಧಿತ ಅರಣ್ಯಾಧಿಕಾರಿಗಳಿಗೆ ಮಾಹಿತಿ ರವಾನೆಯಾಗಲಿದೆ</p><p>l ಮಾನವ–ವನ್ಯಜೀವಿ ಸಂಘರ್ಷದ ಸಾಧ್ಯತೆ ಇರುವ ಪ್ರದೇಶಗಳ ಮೇಲೆ ಸದಾ ನಿಗಾ ಇರಿಸಲಾಗಿರುತ್ತದೆ. ಅಗತ್ಯ ಎದುರಾದಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ರಚಿಸಲಾಗುತ್ತದೆ</p><p>l ಜಿಪಿಎಸ್ ಆಧಾರಿತ ಗಸ್ತು ಪಡೆಗಳ ಸಂಪರ್ಕದಲ್ಲಿದ್ದು,<br>ಸಾರ್ವಜನಿಕರಿಂದ ದೂರು ಬಂದೊಡನೆ ಗಸ್ತು ಪಡೆಗಳಿಗೆ ನಿರ್ದೇಶನ ಹೋಗಲಿದೆ. ಗಸ್ತು ಪಡೆಗಳಿಗೆ ಎಐ ಕ್ಯಾಮೆರಾ ಆಧಾರಿತ ಚಿತ್ರ ಮತ್ತು ಮಾಹಿತಿಗಳನ್ನು ಒದಗಿಸಲಾಗುತ್ತದೆ</p><p>l ಸೌರ ಬೇಲಿ, ರೈಲು ಕಂಬಿ ಬೇಲಿ, ಆನೆ ತಡೆ ಕಂದಕಗಳ ಮೇಲೆ ಈ ಕೇಂದ್ರಗಳು ನಿಗಾ ಇರಿಸಿರಲಿವೆ. ಇವುಗಳ ಬಳಿ ವನ್ಯಜೀವಿಗಳು ಸುಳಿದಾಗ ಸಂಬಂಧಿತ ವಲಯ ಅರಣ್ಯಾಧಿಕಾರಿ ಮತ್ತು ತಂಡಕ್ಕೆ ಮಾಹಿತಿ ರವಾನೆಯಾಗಲಿದೆ</p><p>l ಮೇಲಿನ ಎಲ್ಲ ಸಂದರ್ಭದಲ್ಲೂ ಸಂಬಂಧಿತ ಪ್ರದೇಶದ ಸಾರ್ವಜನಿಕರಿಗೆ ಮಾಹಿತಿ ಮತ್ತು ಮುನ್ನೆಚ್ಚರಿಕೆ ಸೂಚನೆಗಳು ರವಾನೆಯಾಗಲಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>