<p><strong>ಬೆಂಗಳೂರು</strong>: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಿಯೋಜನೆ ಮೇರೆಗೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ಎನ್. ತೇಜಸ್ ಕುಮಾರ್ ಅವರ ಮನೆಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ₹26.65 ಕೋಟಿ ಮೊತ್ತದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ತೇಜಸ್ ಅವರು ಈಗ ಅರಣ್ಯ ಇಲಾಖೆಯ ಶಿವಮೊಗ್ಗ ವಿಭಾಗದ ಮ್ಯಾನೇಜರ್ ಹುದ್ದೆಗೆ ವರ್ಗಾವಣೆಯಾಗಿದ್ದು, ಇನ್ನಷ್ಟೇ ವರದಿ ಮಾಡಿಕೊಳ್ಳಬೇಕಿದೆ.</p>.<p>ತೇಜಸ್ ಅವರು ತಮ್ಮ ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬೆಂಗಳೂರು ನಗರ–1 ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಗುರುವಾರ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದರು.</p>.<p>ಈ ವೇಳೆ 14 ಎಕರೆ ಕೃಷಿ ಜಮೀನು, 8 ಮನೆಗಳು, 4 ನಿವೇಶನಗಳು ಸೇರಿ ಒಟ್ಟು ₹25.63 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹92 ಲಕ್ಷ ಮೌಲ್ಯದ ವಾಹನಗಳನ್ನು ಹೊಂದಿದ್ದಾರೆ. ಅಧಿಕಾರಿ ಮತ್ತು ಸಂಬಂಧಿಗಳ ಮನೆಯಲ್ಲಿ ಶೋಧದ ವೇಳೆ ಚಿನ್ನ ಮತ್ತು ಬೆಳ್ಳಿಯ ವಸ್ತುಗಳು ಪತ್ತೆಯಾಗಿಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಿಯೋಜನೆ ಮೇರೆಗೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ಎನ್. ತೇಜಸ್ ಕುಮಾರ್ ಅವರ ಮನೆಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ₹26.65 ಕೋಟಿ ಮೊತ್ತದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ತೇಜಸ್ ಅವರು ಈಗ ಅರಣ್ಯ ಇಲಾಖೆಯ ಶಿವಮೊಗ್ಗ ವಿಭಾಗದ ಮ್ಯಾನೇಜರ್ ಹುದ್ದೆಗೆ ವರ್ಗಾವಣೆಯಾಗಿದ್ದು, ಇನ್ನಷ್ಟೇ ವರದಿ ಮಾಡಿಕೊಳ್ಳಬೇಕಿದೆ.</p>.<p>ತೇಜಸ್ ಅವರು ತಮ್ಮ ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬೆಂಗಳೂರು ನಗರ–1 ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಗುರುವಾರ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದರು.</p>.<p>ಈ ವೇಳೆ 14 ಎಕರೆ ಕೃಷಿ ಜಮೀನು, 8 ಮನೆಗಳು, 4 ನಿವೇಶನಗಳು ಸೇರಿ ಒಟ್ಟು ₹25.63 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹92 ಲಕ್ಷ ಮೌಲ್ಯದ ವಾಹನಗಳನ್ನು ಹೊಂದಿದ್ದಾರೆ. ಅಧಿಕಾರಿ ಮತ್ತು ಸಂಬಂಧಿಗಳ ಮನೆಯಲ್ಲಿ ಶೋಧದ ವೇಳೆ ಚಿನ್ನ ಮತ್ತು ಬೆಳ್ಳಿಯ ವಸ್ತುಗಳು ಪತ್ತೆಯಾಗಿಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>