<p><strong>ನವದೆಹಲಿ:</strong> ಮಧ್ಯಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ ಎಸ್. ತೇಜಸ್ವಿ ನಾಯಕ್ ಅವರನ್ನು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ (ಪಿ.ಎಸ್) ನೇಮಿಸಲಾಗಿದೆ.</p>.<p>ಉತ್ತರ ಕನ್ನಡ ಜಿಲ್ಲೆಯವರಾದ ನಾಯಕ್ ಅವರು ಭಾರೀ ಕೈಗಾರಿಕೆ ಇಲಾಖೆ ನೋಡಿಕೊಳ್ಳಲಿದ್ದಾರೆ. ಅವರು ಈ ಹಿಂದೆ ಕೃಷಿ ಸಚಿವ ಅರ್ಜುನ್ ಮುಂಡಾ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು.</p>.<p>ಭಾರತೀಯ ಅರಣ್ಯ ಸೇವಾ ಅಧಿಕಾರಿ ತಾಕತ್ ಸಿಂಗ್ ರಣಾವತ್ ಅವರನ್ನು ಕುಮಾರಸ್ವಾಮಿ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಉಕ್ಕು ಇಲಾಖೆಯನ್ನು ನೋಡಿಕೊಳ್ಳಲಿದ್ದಾರೆ. ರಣಾವತ್ ಈ ಹಿಂದೆ ಶೋಭಾ ಕರಂದ್ಲಾಜೆ ಅವರು ‘ಮೋದಿ-2 ಸರ್ಕಾರ’ದಲ್ಲಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾಗ ಆಪ್ತ ಕಾರ್ಯದರ್ಶಿಯಾಗಿದ್ದರು.</p>.<p>ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಅವರನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ಮರುನೇಮಿಸಲಾಗಿದೆ ಮತ್ತು ಅವರು ಹಣಕಾಸು ಸಚಿವಾಲಯ ನೋಡಿಕೊಳ್ಳುತ್ತಾರೆ.</p>.<p>ಕರ್ನಾಟಕ ಕೇಡರ್ನ ಮತ್ತೊಬ್ಬ ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಕೂಡ ನಿರ್ಮಲಾ ಸೀತಾರಾಮನ್ ಅವರ ಪಿ.ಎಸ್. ಆಗಿ ಮರು ನೇಮಕಗೊಂಡಿದ್ದಾರೆ. ಅವರು ಸಚಿವರ ಕಚೇರಿಯಲ್ಲಿ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ನೋಡಿಕೊಳ್ಳುತ್ತಾರೆ. ಇಬ್ಬರೂ ಅಧಿಕಾರಿಗಳು ‘ಮೋದಿ-2 ಸರ್ಕಾರ’ದಲ್ಲಿ ನಿರ್ಮಲಾ ಅವರ ಪಿ.ಎಸ್.ಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಧ್ಯಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ ಎಸ್. ತೇಜಸ್ವಿ ನಾಯಕ್ ಅವರನ್ನು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ (ಪಿ.ಎಸ್) ನೇಮಿಸಲಾಗಿದೆ.</p>.<p>ಉತ್ತರ ಕನ್ನಡ ಜಿಲ್ಲೆಯವರಾದ ನಾಯಕ್ ಅವರು ಭಾರೀ ಕೈಗಾರಿಕೆ ಇಲಾಖೆ ನೋಡಿಕೊಳ್ಳಲಿದ್ದಾರೆ. ಅವರು ಈ ಹಿಂದೆ ಕೃಷಿ ಸಚಿವ ಅರ್ಜುನ್ ಮುಂಡಾ ಅವರ ಆಪ್ತ ಕಾರ್ಯದರ್ಶಿಯಾಗಿದ್ದರು.</p>.<p>ಭಾರತೀಯ ಅರಣ್ಯ ಸೇವಾ ಅಧಿಕಾರಿ ತಾಕತ್ ಸಿಂಗ್ ರಣಾವತ್ ಅವರನ್ನು ಕುಮಾರಸ್ವಾಮಿ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಉಕ್ಕು ಇಲಾಖೆಯನ್ನು ನೋಡಿಕೊಳ್ಳಲಿದ್ದಾರೆ. ರಣಾವತ್ ಈ ಹಿಂದೆ ಶೋಭಾ ಕರಂದ್ಲಾಜೆ ಅವರು ‘ಮೋದಿ-2 ಸರ್ಕಾರ’ದಲ್ಲಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾಗ ಆಪ್ತ ಕಾರ್ಯದರ್ಶಿಯಾಗಿದ್ದರು.</p>.<p>ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಅವರನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ಮರುನೇಮಿಸಲಾಗಿದೆ ಮತ್ತು ಅವರು ಹಣಕಾಸು ಸಚಿವಾಲಯ ನೋಡಿಕೊಳ್ಳುತ್ತಾರೆ.</p>.<p>ಕರ್ನಾಟಕ ಕೇಡರ್ನ ಮತ್ತೊಬ್ಬ ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಕೂಡ ನಿರ್ಮಲಾ ಸೀತಾರಾಮನ್ ಅವರ ಪಿ.ಎಸ್. ಆಗಿ ಮರು ನೇಮಕಗೊಂಡಿದ್ದಾರೆ. ಅವರು ಸಚಿವರ ಕಚೇರಿಯಲ್ಲಿ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ನೋಡಿಕೊಳ್ಳುತ್ತಾರೆ. ಇಬ್ಬರೂ ಅಧಿಕಾರಿಗಳು ‘ಮೋದಿ-2 ಸರ್ಕಾರ’ದಲ್ಲಿ ನಿರ್ಮಲಾ ಅವರ ಪಿ.ಎಸ್.ಗಳಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>