ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿನಿ ಅನಂತಕುಮಾರ್‌ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ

ಬಿ.ಎಸ್‌. ಯಡಿಯೂರಪ್ಪ ಟ್ವೀಟ್
Last Updated 2 ಏಪ್ರಿಲ್ 2019, 9:29 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತಕುಮಾರ್ ಅವರನ್ನು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ಪತ್ನಿಯಾಗಿರುವ ತೇಜಸ್ವಿನಿ ಅವರಿಗೆ ಟಿಕೆಟ್‌ ತಪ್ಪಿದ್ದಕ್ಕೆ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿತ್ತು. ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ರಾಜ್ಯದ ನಾಯಕರ ಶಿಫಾರಸನ್ನು ಮೀರಿ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡದ್ದಕ್ಕೆ ತೇಜಸ್ವಿನಿ ಸಹ ಬೇಸರ ವ್ಯಕ್ತಪಡಿಸಿದ್ದರು. ಆದರೂ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಒಂದಾಗಿ ದುಡಿಯುವಂತೆ ಬೆಂಬಲಿಗರಲ್ಲಿ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT