‘ನಿವೃತ್ತ ಐಎಎಸ್ ಅಧಿಕಾರಿ ಡಾ. ರಾಮೇಗೌಡ, ನಿವೃತ್ತ ಡಿಸಿಎಫ್ ಲಕ್ಷ್ಮಿನಾರಾಯಣ, ಮುಖಂಡ ಜವರೇಗೌಡ ಪೈಕಿ ಒಬ್ಬರಿಗೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ವ್ಯಕ್ತವಾಗಿತ್ತು. ಈಗ ಮಂಜು ಅವರು ಪಕ್ಷಕ್ಕೆ ಬರಲು ಒಪ್ಪಿದ್ದಾರೆ. ನಮ್ಮ ಅಭಿಪ್ರಾಯವನ್ನು ರಾಜ್ಯ ನಾಯಕರಿಗೆ ತಿಳಿಸಿದ್ದೇವೆ. ಗೆಲ್ಲುವ ಅಭ್ಯರ್ಥಿಗೆ ವರಿಷ್ಠರು ಮಣೆ ಹಾಕುತ್ತಾರೆ ಎಂಬ ವಿಶ್ವಾಸ ಇದೆ’ ಎಂದು ಶಾಸಕ ಪ್ರೀತಂ ಗೌಡ ತಿಳಿಸಿದರು.