ಬಿಸಿಗಾಳಿಯಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ, ‘ಸನ್ ಸ್ಟ್ರೋಕ್’ (ಸೂರ್ಯಾಘಾತ) ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಗಾಗ ನೀರು ಕುಡಿಯಬೇಕು. ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್ ಸೇರಿ ವಿವಿಧ ದ್ರವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು. ತಾಜಾ ಹಣ್ಣುಗಳನ್ನು ತಿನ್ನುವುದೂ ಸೇರಿ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಇಲಾಖೆ ಹೇಳಿದೆ.