<p><strong>ಮೈಸೂರು:</strong> ಮೈಸೂರು ವಿಶ್ವವಿದ್ಯಾಲಯದಲ್ಲಿ 2016ರ ಡಿಸೆಂಬರ್ನಲ್ಲಿ ನೇಮಕಗೊಂಡಿದ್ದ 96 ಬೋಧಕೇತರ ಸಿಬ್ಬಂದಿಯನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.</p>.<p>ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆ<br />ಸಿದ ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ.</p>.<p>ವಿ.ವಿ ಕುಲಪತಿಯಾಗಿದ್ದ ಪ್ರೊ.ಕೆ.ಎಸ್.ರಂಗಪ್ಪ ಅವರ ಅಧಿಕಾರ ಅವಧಿ ಮುಗಿಯಲು ಕೆಲವು ದಿನಗಳು ಬಾಕಿ ಇರುವಂತೆ ನಡೆದಿದ್ದ ಬೋಧಕೇತರ ಸಿಬ್ಬಂದಿಯ ನೇಮಕಾತಿಯಲ್ಲಿ ಮೀಸ<br />ಲಾತಿ ನಿಯಮಗಳನ್ನು ಉಲ್ಲಂಘಿಸಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಕುಲಪತಿಯಾಗಿದ್ದ ರಂಗಪ್ಪ, ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ, ಉಪ ಕುಲಸಚಿವ (ಆಡಳಿತ) ಎಂ.ವಿ.ವಿಷಕಂಠ ಅವರು ಮೀಸಲಾತಿ ನಿಯಮಗಳನ್ನು ಉಲ್ಲಂಘಿಸಿ 96 ಬೋಧಕೇತರ ಸಿಬ್ಬಂದಿ<br />ಯನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಿ ಪ್ರಭಾರಿ ಕುಲಪತಿಯಾಗಿದ್ದ ಪ್ರೊ.ದಯಾನಂದ ಮಾನೆ ರಾಜ್ಯಪಾ<br />ಲರಿಗೆ ದೂರು ಸಲ್ಲಿಸಿದ್ದರು. ಡಾ.ಎಂ.ಆರ್.ನಿಂಬಾಳ್ಕರ್, ಡಾ.ಕನುಭಾಯ್ ಸಿ.ಮಾವನಿ ನೇತೃತ್ವದಲ್ಲಿ ರಾಜ್ಯಪಾಲರು ತನಿಖಾ ಸಮಿತಿ ನೇಮಿಸಿದ್ದರು.</p>.<p>‘ಮೀಸಲಾತಿ ನಿಯಮ ಉಲ್ಲಂಘನೆಯಾಗಿದ್ದು, ಸಿಬ್ಬಂದಿಯನ್ನು ವಜಾಗೊಳಿಸಬಹುದು. ನೇಮಕಾತಿ ಮಾಡಿದವರ ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದು’ ಎಂದು 2017ರ ಜುಲೈ 12ರಂದು ರಾಜ್ಯಪಾಲರಿಗೆ ತನಿಖಾ ಸಮಿತಿಯು ವರದಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ವಿಶ್ವವಿದ್ಯಾಲಯದಲ್ಲಿ 2016ರ ಡಿಸೆಂಬರ್ನಲ್ಲಿ ನೇಮಕಗೊಂಡಿದ್ದ 96 ಬೋಧಕೇತರ ಸಿಬ್ಬಂದಿಯನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.</p>.<p>ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆ<br />ಸಿದ ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ.</p>.<p>ವಿ.ವಿ ಕುಲಪತಿಯಾಗಿದ್ದ ಪ್ರೊ.ಕೆ.ಎಸ್.ರಂಗಪ್ಪ ಅವರ ಅಧಿಕಾರ ಅವಧಿ ಮುಗಿಯಲು ಕೆಲವು ದಿನಗಳು ಬಾಕಿ ಇರುವಂತೆ ನಡೆದಿದ್ದ ಬೋಧಕೇತರ ಸಿಬ್ಬಂದಿಯ ನೇಮಕಾತಿಯಲ್ಲಿ ಮೀಸ<br />ಲಾತಿ ನಿಯಮಗಳನ್ನು ಉಲ್ಲಂಘಿಸಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಕುಲಪತಿಯಾಗಿದ್ದ ರಂಗಪ್ಪ, ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ, ಉಪ ಕುಲಸಚಿವ (ಆಡಳಿತ) ಎಂ.ವಿ.ವಿಷಕಂಠ ಅವರು ಮೀಸಲಾತಿ ನಿಯಮಗಳನ್ನು ಉಲ್ಲಂಘಿಸಿ 96 ಬೋಧಕೇತರ ಸಿಬ್ಬಂದಿ<br />ಯನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಿ ಪ್ರಭಾರಿ ಕುಲಪತಿಯಾಗಿದ್ದ ಪ್ರೊ.ದಯಾನಂದ ಮಾನೆ ರಾಜ್ಯಪಾ<br />ಲರಿಗೆ ದೂರು ಸಲ್ಲಿಸಿದ್ದರು. ಡಾ.ಎಂ.ಆರ್.ನಿಂಬಾಳ್ಕರ್, ಡಾ.ಕನುಭಾಯ್ ಸಿ.ಮಾವನಿ ನೇತೃತ್ವದಲ್ಲಿ ರಾಜ್ಯಪಾಲರು ತನಿಖಾ ಸಮಿತಿ ನೇಮಿಸಿದ್ದರು.</p>.<p>‘ಮೀಸಲಾತಿ ನಿಯಮ ಉಲ್ಲಂಘನೆಯಾಗಿದ್ದು, ಸಿಬ್ಬಂದಿಯನ್ನು ವಜಾಗೊಳಿಸಬಹುದು. ನೇಮಕಾತಿ ಮಾಡಿದವರ ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದು’ ಎಂದು 2017ರ ಜುಲೈ 12ರಂದು ರಾಜ್ಯಪಾಲರಿಗೆ ತನಿಖಾ ಸಮಿತಿಯು ವರದಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>