<p><strong>ಬೆಂಗಳೂರು:</strong> ‘ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟವಾದ ಬಳಿಕ ನಾಲ್ವರು ಉಗ್ರರು ಬೆಂಗಳೂರಿಗೆ ಬಂದಿದ್ದಾರೆ’ ಎಂಬ ಸುದ್ದಿ, ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ಹರಿದಾಡಿತು.</p>.<p>ಆ ಬಗ್ಗೆ ಟ್ವೀಟ್ ಮಾಡಿದ ಬೆಂಗಳೂರು ಪೊಲೀಸರು, ‘ಇದೊಂದು ಸುಳ್ಳು ವದಂತಿ. ಸಾರ್ವಜನಿಕರು ಇದಕ್ಕೆ ಕಿವಿಗೊಡಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಈ ಸಂದೇಶವನ್ನು ಶೇರ್ ಮಾಡಬಾರದು’ ಎಂದು ಮನವಿ ಮಾಡಿದರು.</p>.<p>ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ರಾಜಧಾನಿ ಸುರಕ್ಷಿತವಾಗಿದೆ. ಯಾರೋ ಕಿಡಿಗೇಡಿಗಳು ಈ ರೀತಿ ಸುಳ್ಳು ವದಂತಿ ಹರಡಿ, ಜನರಲ್ಲಿ ಭಯ ಹುಟ್ಟಿಸಲು ಯತ್ನಿಸಿದ್ದಾರೆ. ಅವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p class="Subhead">ಸಂದೇಶದಲ್ಲಿ ಏನಿತ್ತು: ಬಾಂಬ್ ಸ್ಫೋಟದ ಬಳಿಕ ಶ್ರೀಲಂಕಾ ಬಿಡುಗಡೆ ಮಾಡಿದ್ದ ಶಂಕಿತ ಉಗ್ರರ ಫೋಟೊ ಸಮೇತ, ‘ಬೆಂಗಳೂರಿಗೆ ಉಗ್ರರು ಬಂದಿದ್ದಾರೆ’ ಎಂಬ ಸಂದೇಶವನ್ನು ಹರಿಬಿಡಲಾಗಿತ್ತು.</p>.<p class="Subhead">‘ಬೆಂಗಳೂರಿಗೆ ಬಂದಿರುವ ನಾಲ್ವರು ಉಗ್ರರು, 15 ದಿನದೊಳಗೆ ಅಪಾಯಕಾರಿ ಕೆಲಸ ಮಾಡಲಿದ್ದಾರೆ. ವೈಟ್ಫೀಲ್ಡ್, ಬೆಳ್ಳಂದೂರು ಪ್ರದೇಶದಲ್ಲಿರುವ ಐ.ಟಿ ಕಂಪನಿಗಳ ಮೇಲೆ ದಾಳಿ ಮಾಡಲಿದ್ದಾರೆ. ಈ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಈ ಫೋಟೊದಲ್ಲಿರುವ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಸಂದೇಶದಲ್ಲಿ ಬರೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟವಾದ ಬಳಿಕ ನಾಲ್ವರು ಉಗ್ರರು ಬೆಂಗಳೂರಿಗೆ ಬಂದಿದ್ದಾರೆ’ ಎಂಬ ಸುದ್ದಿ, ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ಹರಿದಾಡಿತು.</p>.<p>ಆ ಬಗ್ಗೆ ಟ್ವೀಟ್ ಮಾಡಿದ ಬೆಂಗಳೂರು ಪೊಲೀಸರು, ‘ಇದೊಂದು ಸುಳ್ಳು ವದಂತಿ. ಸಾರ್ವಜನಿಕರು ಇದಕ್ಕೆ ಕಿವಿಗೊಡಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಈ ಸಂದೇಶವನ್ನು ಶೇರ್ ಮಾಡಬಾರದು’ ಎಂದು ಮನವಿ ಮಾಡಿದರು.</p>.<p>ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ರಾಜಧಾನಿ ಸುರಕ್ಷಿತವಾಗಿದೆ. ಯಾರೋ ಕಿಡಿಗೇಡಿಗಳು ಈ ರೀತಿ ಸುಳ್ಳು ವದಂತಿ ಹರಡಿ, ಜನರಲ್ಲಿ ಭಯ ಹುಟ್ಟಿಸಲು ಯತ್ನಿಸಿದ್ದಾರೆ. ಅವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p class="Subhead">ಸಂದೇಶದಲ್ಲಿ ಏನಿತ್ತು: ಬಾಂಬ್ ಸ್ಫೋಟದ ಬಳಿಕ ಶ್ರೀಲಂಕಾ ಬಿಡುಗಡೆ ಮಾಡಿದ್ದ ಶಂಕಿತ ಉಗ್ರರ ಫೋಟೊ ಸಮೇತ, ‘ಬೆಂಗಳೂರಿಗೆ ಉಗ್ರರು ಬಂದಿದ್ದಾರೆ’ ಎಂಬ ಸಂದೇಶವನ್ನು ಹರಿಬಿಡಲಾಗಿತ್ತು.</p>.<p class="Subhead">‘ಬೆಂಗಳೂರಿಗೆ ಬಂದಿರುವ ನಾಲ್ವರು ಉಗ್ರರು, 15 ದಿನದೊಳಗೆ ಅಪಾಯಕಾರಿ ಕೆಲಸ ಮಾಡಲಿದ್ದಾರೆ. ವೈಟ್ಫೀಲ್ಡ್, ಬೆಳ್ಳಂದೂರು ಪ್ರದೇಶದಲ್ಲಿರುವ ಐ.ಟಿ ಕಂಪನಿಗಳ ಮೇಲೆ ದಾಳಿ ಮಾಡಲಿದ್ದಾರೆ. ಈ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಈ ಫೋಟೊದಲ್ಲಿರುವ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಸಂದೇಶದಲ್ಲಿ ಬರೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>