ಜಾಗೃತ ನಾಗರಿಕರು ಕರ್ನಾಟಕ ವೇದಿಕೆಯ ಪರವಾಗಿ ಪ್ರಶ್ನೆಗಳನ್ನು ಕೇಳಿರುವ ಈ ಪತ್ರಕ್ಕೆ ಕೆ.ಮರುಳಸಿದ್ಧಪ್ಪ, ಜಿ. ರಾಮಕೃಷ್ಣ, ವಿಜಯಾ, ಕುಂ.ವೀರಭದ್ರಪ್ಪ, ಪುರುಷೋತ್ತಮ ಬಿಳಿಮಲೆ, ರಾಜೇಂದ್ರ ಚೆನ್ನಿ, ರಹಮತ್ ತರೀಕೆರೆ, ಕೆ.ಎಸ್. ವಿಮಲಾ, ಇಂದಿರಾ ಕೃಷ್ಣಪ್ಪ, ವಿನಯಾ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ ಸೇರಿದಂತೆ 52 ಜನ ಸಹಿ ಹಾಕಿದ್ದಾರೆ. ಎಲ್ಲ ವಿವಾದಗಳೂ ಕೊನೆಗೊಳ್ಳುವವರೆಗೂ ಹಳೆಯ ಪಠ್ಯ ಪುಸ್ತಕಗಳನ್ನೇ ಮುಂದುವರಿಸಬೇಕು ಎಂದೂ ಮನವಿ ಮಾಡಿದ್ದಾರೆ.