ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಪಠ್ಯಪುಸ್ತಕದಲ್ಲಿ ಉಪನ ಯನದ ಬಳಿಕ ಬಸವಣ್ಣನವರು ಕೂಡಲಸಂಗಮಕ್ಕೆ ನಡೆದರು ಎಂದು ಬರೆದಿದ್ದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ತಮಗೇಕೆ ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋಗಿದ್ದರು. ಶೈವ-ಗುರುಗಳ ಸಾನ್ನಿಧ್ಯದಲ್ಲಿ ಲಿಂಗ ದೀಕ್ಷೆ ಪಡೆದರು ಎಂದು ಬರೆದಿರುವುದು ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು. ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು’ ಎಂದು ಅವರು ಪ್ರಶ್ನಿಸಿದ್ದಾರೆ.