<p><strong>ಬೆಂಗಳೂರು</strong>: ‘ಗ್ಯಾರಂಟಿ ಯೋಜನೆಗಳಿಂದ ಹೊರೆ ಆಗುತ್ತಿರುವುದು ನಿಜ. ಅದು ಗೊತ್ತಿದ್ದೇ ನಾವು ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಈ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಡತನ ರೇಖೆಗಿಂತ ಕೆಳಗಿರುವವರಿಗೆ (ಬಿಪಿಎಲ್) ಮಾತ್ರ ಗ್ಯಾರಂಟಿ ಯೋಜನೆಗಳನ್ನು ಒದಗಿಸಬೇಕು ಎಂದು ತುರುವೇಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಸಲಹೆ ನೀಡಿದ್ದಾರೆ. ವಿರೋಧ ಪಕ್ಷಗಳು ಸಲಹೆಗಳನ್ನು ನೀಡಿದರೆ ಸರ್ಕಾರ ಚರ್ಚೆಗೆ ಮುಕ್ತವಾಗಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದು ಬಿಜೆಪಿಯವರಿಗೆ ಬೇಕಿಲ್ಲ. ಹೇಗಾದರೂ ಮಾಡಿ ಈ ಯೋಜನೆಗಳನ್ನು ಹತ್ತಿಕ್ಕಲು ಅವರು ಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಒಪ್ಪಿಕೊಳ್ಳುವುದು ಖಚಿತ: ‘ಜಾತಿ ಜನಗಣತಿ ವರದಿಯನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಒಪ್ಪಿಕೊಳ್ಳಲಿದೆ. ಈ ವಿಚಾರದಲ್ಲಿ ಯಾವುದೇ ಸಂಶಯ ಬೇಡವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ’ ಎಂದು ಪರಮೇಶ್ವರ ಹೇಳಿದರು.</p>.<p>‘ಜಾತಿ ಜನಗಣತಿಯು ವೈಜ್ಞಾನಿಕವಾಗಿ ನಡೆದಿದೆ. ಈ ವರದಿಯನ್ನು ಸಮಯ ನೋಡಿಕೊಂಡು ಮುಖ್ಯಮಂತ್ರಿ ಬಿಡುಗಡೆ ಮಾಡಲಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಗ್ಯಾರಂಟಿ ಯೋಜನೆಗಳಿಂದ ಹೊರೆ ಆಗುತ್ತಿರುವುದು ನಿಜ. ಅದು ಗೊತ್ತಿದ್ದೇ ನಾವು ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಈ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಡತನ ರೇಖೆಗಿಂತ ಕೆಳಗಿರುವವರಿಗೆ (ಬಿಪಿಎಲ್) ಮಾತ್ರ ಗ್ಯಾರಂಟಿ ಯೋಜನೆಗಳನ್ನು ಒದಗಿಸಬೇಕು ಎಂದು ತುರುವೇಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಸಲಹೆ ನೀಡಿದ್ದಾರೆ. ವಿರೋಧ ಪಕ್ಷಗಳು ಸಲಹೆಗಳನ್ನು ನೀಡಿದರೆ ಸರ್ಕಾರ ಚರ್ಚೆಗೆ ಮುಕ್ತವಾಗಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದು ಬಿಜೆಪಿಯವರಿಗೆ ಬೇಕಿಲ್ಲ. ಹೇಗಾದರೂ ಮಾಡಿ ಈ ಯೋಜನೆಗಳನ್ನು ಹತ್ತಿಕ್ಕಲು ಅವರು ಯತ್ನಿಸುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>ಒಪ್ಪಿಕೊಳ್ಳುವುದು ಖಚಿತ: ‘ಜಾತಿ ಜನಗಣತಿ ವರದಿಯನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಒಪ್ಪಿಕೊಳ್ಳಲಿದೆ. ಈ ವಿಚಾರದಲ್ಲಿ ಯಾವುದೇ ಸಂಶಯ ಬೇಡವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದಾರೆ’ ಎಂದು ಪರಮೇಶ್ವರ ಹೇಳಿದರು.</p>.<p>‘ಜಾತಿ ಜನಗಣತಿಯು ವೈಜ್ಞಾನಿಕವಾಗಿ ನಡೆದಿದೆ. ಈ ವರದಿಯನ್ನು ಸಮಯ ನೋಡಿಕೊಂಡು ಮುಖ್ಯಮಂತ್ರಿ ಬಿಡುಗಡೆ ಮಾಡಲಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>