ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಬೇರೆ ಜಿಲ್ಲೆಗಳಲ್ಲಿ ಕನ್ನಡ ಹಾಗೂ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ಆದರೆ, ಉಡುಪಿಯಲ್ಲಿಹಿಂದಿನಿಂದಲೂ ಕನ್ನಡ ಧ್ವಜ ಹಾರಿಸುವ ರೂಢಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಬಾರಿ ಕಡ್ಡಾಯವಾಗಿ ರಾಷ್ಟ್ರಧ್ವಜದ ಜತೆಗೆ ಕನ್ನಡ ಬಾವುಟವನ್ನೂ ಹಾರಿಸಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು.