ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ಮಾದರಿ ಘಟನೆ ನಡೆಯಬಹುದು ಎಂದು ನಾನು ಈ ಹಿಂದೆ ಹೇಳಿಕೆ ನೀಡಿದ್ದೆ. ನನ್ನ ಮಂಪರು ಪರೀಕ್ಷೆ ನಡೆಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮಂಪರು ಪರೀಕ್ಷೆಗೆ ಒಳಪಡಲು ನಾನು ಸಿದ್ಧನಿದ್ದೇನೆ. ಅದೇ ರೀತಿ, ವಿಜಯೇಂದ್ರ ಅವರನ್ನೂ ಪರೀಕ್ಷೆಗೆ ಒಳಪಡಿಸಲಿ. ಲೈವ್ ಮೂಲಕವೇ ಇಬ್ಬರ ಪರೀಕ್ಷೆ ನಡೆಸಲಿ’ ಎಂದರು.