‘ವಿವಿಧ ವರ್ಗದ ಅಭ್ಯರ್ಥಿಗಳ ಸಮಸ್ಯೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಖಾಸಗಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಅಧ್ಯಯನ ಮಾಡದೆ ನೇರವಾಗಿ ದ್ವಿತೀಯ ಪಿಯು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅವರನ್ನು ಉತ್ತೀರ್ಣ ಮಾಡಲು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳಿಲ್ಲ. ಹೀಗಾಗಿ, ಪರೀಕ್ಷೆ ಬರೆಯಬೇಕಾಗುತ್ತದೆ’ ಎಂದು ಸರ್ಕಾರಿ ವಕೀಲರು ವಾದಿಸಿದರು.