‘ಬನಶಂಕರಿಯ 2ನೇ ಹಂತದ ಭವಾನಿ ಹೌಸಿಂಗ್ ಕೋ ಆಪರೇಟಿವ್ ಸಂಸ್ಥೆ ಮತ್ತು ಇತರೆ 41 ಜನರು, ಕತ್ರಿಗುಪ್ಪೆಯ ಸರ್ವೇ ನಂ.125 ಹಾಗೂ 126ಕ್ಕೆ ಸೇರಿದ 3 ಎಕರೆ 29 ಗುಂಟೆ ಸರ್ಕಾರದ ಜಾಗವನ್ನು ಕಬಳಿಸಿದ್ದಾರೆ. ಇದರ ಮೌಲ್ಯ ಅಂದಾಜು ₹350 ಕೋಟಿಯಷ್ಟಿದೆ’ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ 2022ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.