ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ‘ಮಹಾದೇವ ಅವರು ಈ ಹಿಂದೆ ಇಂತಹ 122 ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬುದು ಕಂಡು ಬಂದಿದೆ. ಇದನ್ನು ಕೆಎಸ್ಆರ್ಟಿಸಿಯ ಶಿಸ್ತು ಸಮಿತಿ ಪರಿಗಣಿಸಿಯೇ ಸೇವೆಯಿಂದ ವಜಾ ಮಾಡುವಂತೆ ಆದೇಶಿಸಿದೆ. ಆದ್ದರಿಂದ, ವಜಾ ಆದೇಶವನ್ನು ಕಾರ್ಮಿಕ ನ್ಯಾಯಾಲಯ ಹಗುರವಾಗಿ ಪರಿಗಣಿಸಬಾರದಿತ್ತು’ ಎಂದು ಹೇಳಿದೆ.