<p><strong>ದಾವಣಗೆರೆ: </strong>ಮೀಸಲಾತಿಯನ್ನು ತೆಗೆಯುವ ಚಿಂತನೆಯೇ ಆರ್ಎಸ್ಎಸ್ನಲ್ಲಿ ಇಲ್ಲ. ಕೊನೇ ಉಸಿರು ಇರುವವರೆಗೆ ಮೀಸಲಾತಿಗೆ ಧಕ್ಕೆ ಬರಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ ಎಂದು ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ಸ್ಪಷ್ಟಪಡಿಸಿದರು.</p>.<p>ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದಾಗುತ್ತದೆ ಎಂದು ಕಾಂಗ್ರೆಸ್ ಹಬ್ಬಿಸಿದೆ. ಅದೇ ಕಾಂಗ್ರೆಸ್ ಭಾರತಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಅಂಬೇಡ್ಕರ್ ಅವರನ್ನು ಸೋಲಿಸಿತ್ತು ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ಜಾತಿ ಗಣತಿಯನ್ನು ಮಾಡಿಸಿದವರೇ ಅಧಿಕಾರದಲ್ಲಿ ಇರುವಾಗ ಅದರ ವರದಿ ಬಿಡುಗಡೆ ಯಾಕೆ ಮಾಡಿಲ್ಲ? ಈಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಹತ್ತಿರ ಬಂದಾಗ ನೆನಪಾಗಿದೆ. ಜಾತಿ ಗಣತಿ ಬಗ್ಗೆ ತಜ್ಞರ ವರದಿ ಆಧರಿಸಿ ಬಿಜೆಪಿ ತನ್ನದೇ ನಿಲುವು ತೆಗೆದುಕೊಳ್ಳಲಿದೆ ಎಂದರು.</p>.<p>ಸದಾಶಿವ ಆಯೋಗದ ವರದಿ ಜಾರಿ ಮಾಡಲು ಬದ್ಧ ಎಂದು ತಿಳಿಸಿದರು.</p>.<p>ಬೆಲೆ ಏರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಎಲೆಕ್ಟ್ರಿಕಲ್ ವೆಹಿಕಲ್ ತೆಗೆದುಕೊಳ್ಳಿ’ ಎಂದು ಹೇಳಿ ಪತ್ರಿಕಾಗೋಷ್ಠಿಯಿಂದ ಎದ್ದು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮೀಸಲಾತಿಯನ್ನು ತೆಗೆಯುವ ಚಿಂತನೆಯೇ ಆರ್ಎಸ್ಎಸ್ನಲ್ಲಿ ಇಲ್ಲ. ಕೊನೇ ಉಸಿರು ಇರುವವರೆಗೆ ಮೀಸಲಾತಿಗೆ ಧಕ್ಕೆ ಬರಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ ಎಂದು ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ಸ್ಪಷ್ಟಪಡಿಸಿದರು.</p>.<p>ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದಾಗುತ್ತದೆ ಎಂದು ಕಾಂಗ್ರೆಸ್ ಹಬ್ಬಿಸಿದೆ. ಅದೇ ಕಾಂಗ್ರೆಸ್ ಭಾರತಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಅಂಬೇಡ್ಕರ್ ಅವರನ್ನು ಸೋಲಿಸಿತ್ತು ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ಜಾತಿ ಗಣತಿಯನ್ನು ಮಾಡಿಸಿದವರೇ ಅಧಿಕಾರದಲ್ಲಿ ಇರುವಾಗ ಅದರ ವರದಿ ಬಿಡುಗಡೆ ಯಾಕೆ ಮಾಡಿಲ್ಲ? ಈಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಹತ್ತಿರ ಬಂದಾಗ ನೆನಪಾಗಿದೆ. ಜಾತಿ ಗಣತಿ ಬಗ್ಗೆ ತಜ್ಞರ ವರದಿ ಆಧರಿಸಿ ಬಿಜೆಪಿ ತನ್ನದೇ ನಿಲುವು ತೆಗೆದುಕೊಳ್ಳಲಿದೆ ಎಂದರು.</p>.<p>ಸದಾಶಿವ ಆಯೋಗದ ವರದಿ ಜಾರಿ ಮಾಡಲು ಬದ್ಧ ಎಂದು ತಿಳಿಸಿದರು.</p>.<p>ಬೆಲೆ ಏರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಎಲೆಕ್ಟ್ರಿಕಲ್ ವೆಹಿಕಲ್ ತೆಗೆದುಕೊಳ್ಳಿ’ ಎಂದು ಹೇಳಿ ಪತ್ರಿಕಾಗೋಷ್ಠಿಯಿಂದ ಎದ್ದು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>